‘ಭಿವಾಂಡಿಯಲ್ಲಿ 2014ರ ಮಾರ್ಚ್ 6ರಂದು ನಡೆದಿದ್ದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಆರ್ಎಸ್ಎಸ್ನವರು ಮಹಾತ್ಮ ಗಾಂಧಿಯನ್ನು ಕೊಂದವರು’ ಎಂದಿದ್ದರು. ರಾಹುಲ್ ಅವರ ಈ ಹೇಳಿಕೆ ಆರ್ಎಸ್ಎಸ್ ಗೌರವಕ್ಕೆ ಧಕ್ಕೆ ತಂದಿದೆ ಎಂದು ದೂರಿ, ಆರ್ಎಸ್ಎಸ್ ಕಾರ್ಯಕರ್ತ ರಾಜೇಶ್ ಕುಂಟೆ ಎಂಬುವವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.