ಕುಂಟೆ ಅವರು ‘ಮಾ. 6, 2014ರಂದು ಸಲ್ಲಿಸಿದ್ದ ಅರ್ಜಿಯ ಪ್ರಕಾರ, ರಾಹುಲ್ ಗಾಂಧಿಯವರು ಭಿವಂಡಿಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವಾಗ, ‘ಆರ್ಎಸ್ಎಸ್ನವರು ಮಹಾತ್ಮ ಗಾಂಧಿಯನ್ನು ಕೊಂದರು‘. ಎಂದು ಹೇಳಿದ್ದರು. ಈ ಸಮಯದಲ್ಲಿ ಭಿವಂಡಿ ಆರ್ಎಸ್ಎಸ್ನ ಕಾರ್ಯದರ್ಶಿಯಾಗಿದ್ದ ಕುಂಟೆ, ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದ್ದರಿಂದ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ನಂತರ ರಾಹುಲ್ ಗಾಂಧಿಯವರು ವಿಚಾರಣೆ ಎದುರಿಸುತ್ತಿದ್ದಾರೆ.