<p><strong>ಮುಂಬೈ:</strong> ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ವಿರುದ್ಧ ಮುಂಬೈ ನ್ಯಾಯಾಲಯವು ಗುರುವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.</p><p>ಪ್ರಕರಣದ ವಿಚಾರಣೆಗೆ ಹಾಜರಾಗಲು ವಿಫಲರಾದ ಕಾರಣ ಮುಂಬೈ ನ್ಯಾಯಾಲಯವು ಕಳೆದ ತಿಂಗಳು ರಾಣೆ ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸಿತ್ತು.</p><p>ಜೂನ್ 2ರಂದು ನಡೆದ ವಿಚಾರಣೆಯ ವೇಳೆ ನಿತೇಶ್ ರಾಣೆ ಹಾಜರಾತಿಯಿಂದ ಶಾಶ್ವತ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಇಂದು (ಗುರುವಾರ) ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎ. ಕುಲಕರ್ಣಿ ಅವರು ಶಾಶ್ವತ ವಿನಾಯಿತಿ ನಿರಾಕರಿಸಿ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು, ಜುಲೈ 18ಕ್ಕೆ ಪ್ರಕರಣವನ್ನು ಮುಂದೂಡಿದ್ದಾರೆ.</p><p>ಇದಕ್ಕೂ ಮುನ್ನ ಪ್ರಕರಣದ ವಿಚಾರಣೆಗೆ ಹಾಜರಾಗಲು ವಿಫಲರಾದ ಕಾರಣ ನ್ಯಾಯಾಲಯವು ರಾಣೆ ವಿರುದ್ಧ ಹಲವು ವಾರಂಟ್ಗಳನ್ನು ಹೊರಡಿಸಿತ್ತು.</p><p>2023ರ ಮೇನಲ್ಲಿ ನಿತೇಶ್ ರಾಣೆ ಅವರು ಸಂಜಯ್ ರಾವುತ್ ಅವರನ್ನು ‘ಹಾವು’ ಎಂದು ಕರೆದಿದ್ದರು. ಅವರು (ರಾವುತ್) ಉದ್ಧವ್ ಠಾಕ್ರೆ ನೇತೃತ್ವ ಶಿವಸೇನಾ ಪಕ್ಷವನ್ನು ತೊರೆದು ಎನ್ಸಿಪಿಗೆ ಸೇರಲಿದ್ದಾರೆ ಎಂದು ಆರೋಪಿಸಿದ್ದರು.</p><p>ಈ ಕುರಿತು ಪ್ರತಿಕ್ರಿಯಿಸಿದ್ದ ರಾವುತ್, ನಿತೇಶ್ ರಾಣೆ ಅವರು ಮಾನಹಾನಿಕರ ಮತ್ತು ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ವಿರುದ್ಧ ಮುಂಬೈ ನ್ಯಾಯಾಲಯವು ಗುರುವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.</p><p>ಪ್ರಕರಣದ ವಿಚಾರಣೆಗೆ ಹಾಜರಾಗಲು ವಿಫಲರಾದ ಕಾರಣ ಮುಂಬೈ ನ್ಯಾಯಾಲಯವು ಕಳೆದ ತಿಂಗಳು ರಾಣೆ ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸಿತ್ತು.</p><p>ಜೂನ್ 2ರಂದು ನಡೆದ ವಿಚಾರಣೆಯ ವೇಳೆ ನಿತೇಶ್ ರಾಣೆ ಹಾಜರಾತಿಯಿಂದ ಶಾಶ್ವತ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಇಂದು (ಗುರುವಾರ) ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎ. ಕುಲಕರ್ಣಿ ಅವರು ಶಾಶ್ವತ ವಿನಾಯಿತಿ ನಿರಾಕರಿಸಿ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು, ಜುಲೈ 18ಕ್ಕೆ ಪ್ರಕರಣವನ್ನು ಮುಂದೂಡಿದ್ದಾರೆ.</p><p>ಇದಕ್ಕೂ ಮುನ್ನ ಪ್ರಕರಣದ ವಿಚಾರಣೆಗೆ ಹಾಜರಾಗಲು ವಿಫಲರಾದ ಕಾರಣ ನ್ಯಾಯಾಲಯವು ರಾಣೆ ವಿರುದ್ಧ ಹಲವು ವಾರಂಟ್ಗಳನ್ನು ಹೊರಡಿಸಿತ್ತು.</p><p>2023ರ ಮೇನಲ್ಲಿ ನಿತೇಶ್ ರಾಣೆ ಅವರು ಸಂಜಯ್ ರಾವುತ್ ಅವರನ್ನು ‘ಹಾವು’ ಎಂದು ಕರೆದಿದ್ದರು. ಅವರು (ರಾವುತ್) ಉದ್ಧವ್ ಠಾಕ್ರೆ ನೇತೃತ್ವ ಶಿವಸೇನಾ ಪಕ್ಷವನ್ನು ತೊರೆದು ಎನ್ಸಿಪಿಗೆ ಸೇರಲಿದ್ದಾರೆ ಎಂದು ಆರೋಪಿಸಿದ್ದರು.</p><p>ಈ ಕುರಿತು ಪ್ರತಿಕ್ರಿಯಿಸಿದ್ದ ರಾವುತ್, ನಿತೇಶ್ ರಾಣೆ ಅವರು ಮಾನಹಾನಿಕರ ಮತ್ತು ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>