<p><strong>ಸುಲ್ತಾನಪುರ(ಉತ್ತರ ಪ್ರದೇಶ)</strong>: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕುರಿತಾದ ಹೇಳಿಕ ಸಂಬಂಧಿತ 2018ರ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸುಲ್ತಾನಪುರದ ಸಂಸದರು–ಶಾಸಕರ ನ್ಯಾಯಾಲಯಕ್ಕೆ ಹಾಜರಾದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ತಮ್ಮ ಹೇಳಿಕೆ ದಾಖಲಿಸಿದರು.</p><p>ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಮತ್ತು ಪಕ್ಷದ ಹೆಸರು ಹಾಳುಮಾಡುವ ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ ಎಂದು ನ್ಯಾಯಾಧೀಶ ಶುಭಂ ವರ್ಮಾ ಎದುರು ಹೇಳಿಕೆ ದಾಖಲಿಸಿದರು ಎಂದು ರಾಹುಲ್ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ ತಿಳಿಸಿದ್ದಾರೆ.</p><p>ಪ್ರಕರಣದ ವಿಚಾರಣೆಯನ್ನು ಮಾರ್ಚ್ 9ಕ್ಕೆ ನಿಗದಿ ಮಾಡಿದ ನ್ಯಾಯಾಲಯ, ತಮ್ಮ ಸಮರ್ಥನೆಗೆ ಸಾಕ್ಷ್ಯ ಒದಗಿಸುವಂತೆ ರಾಹುಲ್ಗೆ ಸೂಚಿಸಿದೆ ಎಂದು ವಿವರಿಸಿದ್ದಾರೆ.</p><p>ವಿಚಾರಣೆ ಬಗ್ಗೆ ಮತ್ತಷ್ಟು ಮಾಹಿತಿ ಹಂಚಿಕೊಂಡ ಅವರು, ರಾಹುಲ್ ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ತಳ್ಳಿಹಾಕಿದರು ಎಂದು ತಿಳಿಸಿದ್ದಾರೆ.</p><p>ನನ್ನ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ. ನಾನು ಯಾರ ವಿರುದ್ಧವೂ ಅವಹೇಳನಕಾರಿ ಪದಗಳನ್ನು ಬಳಸಿಲ್ಲ ಅಥವಾ ಯಾರನ್ನೂ ಮಾನಹಾನಿ ಮಾಡುವ ಉದ್ದೇಶದಿಂದ ಅಂತಹ ಭಾಷೆಯನ್ನು ಬಳಸಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಸುಳ್ಳು ದೂರು ದಾಖಲಿಸಲಾಗಿದೆ ಎಂದು ರಾಹುಲ್ ಹೇಳಿರುವುದಾಗಿ ಶುಕ್ಲಾ ಉಲ್ಲೇಖಿಸಿದ್ದಾರೆ.</p><p>ನನ್ನ ಮತ್ತು ನನ್ನ ಪಕ್ಷದ ಹೆಸರನ್ನು ಹಾಳು ಮಾಡುವ ರಾಜಕೀಯ ದುರುದ್ದೇಶದಿಂದ ಆರೋಪಗಳನ್ನು ಮಾಡಲಾಗಿದೆ. ನಾನು ಯಾರ ವಿರುದ್ಧವೂ ಅವಹೇಳನಕಾರಿ ಪದಗಳನ್ನು ಬಳಸಿಲ್ಲ, ಅಥವಾ ಯಾರನ್ನೂ ಮಾನಹಾನಿ ಮಾಡುವ ಉದ್ದೇಶದಿಂದ ಅಂತಹ ಭಾಷೆಯನ್ನು ಬಳಸಿಲ್ಲ ಎಂದು ರಾಹುಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.</p><p>ರಾಹುಲ್ ತಮ್ಮ ಹೇಳಿಕೆಯನ್ನು ದಾಖಲಿಸಿದ ನಂತರ ನ್ಯಾಯಾಲಯದಿಂದ ಹೊರಬರುತ್ತಿದ್ದಂತೆ, ಪಕ್ಷದ ಬೆಂಬಲಿಗರು ಅವರನ್ನು ಸ್ವಾಗತಿಸುವ ಘೋಷಣೆಗಳನ್ನು ಕೂಗಿದರು. ಮುಗುಳ್ನಗುತ್ತಾ ರಾಹುಲ್ ಗಾಂಧಿ ಜನಸಮೂಹದತ್ತ ಕೈ ಬೀಸಿದರು.</p><p>ಬೆಳಿಗ್ಗೆ 10.40ರ ಸುಮಾರಿಗೆ ಸುಲ್ತಾನಪುರ ನ್ಯಾಯಾಲಯಕ್ಕೆ ಬಂದ ರಾಹುಲ್, ಹೇಳಿಕೆ ದಾಖಲಿಸಿ 11.15ರ ಸುಮಾರಿಗೆ ಹೊರನಡೆದರು. ಸುಲ್ತಾನಪುರದ ಕೆಲ ಕಾಂಗ್ರೆಸ್ ನಾಯಕರು ಸತ್ಯಮೇವ ಜಯತೇ ಎಂಬ ಪೋಸ್ಟರ್ ಸಹ ಹಾಕಿದ್ದರು.</p><p>2018ರಲ್ಲಿ ಸ್ಥಳೀಯ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಲ್ತಾನಪುರ(ಉತ್ತರ ಪ್ರದೇಶ)</strong>: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕುರಿತಾದ ಹೇಳಿಕ ಸಂಬಂಧಿತ 2018ರ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸುಲ್ತಾನಪುರದ ಸಂಸದರು–ಶಾಸಕರ ನ್ಯಾಯಾಲಯಕ್ಕೆ ಹಾಜರಾದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ತಮ್ಮ ಹೇಳಿಕೆ ದಾಖಲಿಸಿದರು.</p><p>ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಮತ್ತು ಪಕ್ಷದ ಹೆಸರು ಹಾಳುಮಾಡುವ ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ ಎಂದು ನ್ಯಾಯಾಧೀಶ ಶುಭಂ ವರ್ಮಾ ಎದುರು ಹೇಳಿಕೆ ದಾಖಲಿಸಿದರು ಎಂದು ರಾಹುಲ್ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ ತಿಳಿಸಿದ್ದಾರೆ.</p><p>ಪ್ರಕರಣದ ವಿಚಾರಣೆಯನ್ನು ಮಾರ್ಚ್ 9ಕ್ಕೆ ನಿಗದಿ ಮಾಡಿದ ನ್ಯಾಯಾಲಯ, ತಮ್ಮ ಸಮರ್ಥನೆಗೆ ಸಾಕ್ಷ್ಯ ಒದಗಿಸುವಂತೆ ರಾಹುಲ್ಗೆ ಸೂಚಿಸಿದೆ ಎಂದು ವಿವರಿಸಿದ್ದಾರೆ.</p><p>ವಿಚಾರಣೆ ಬಗ್ಗೆ ಮತ್ತಷ್ಟು ಮಾಹಿತಿ ಹಂಚಿಕೊಂಡ ಅವರು, ರಾಹುಲ್ ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ತಳ್ಳಿಹಾಕಿದರು ಎಂದು ತಿಳಿಸಿದ್ದಾರೆ.</p><p>ನನ್ನ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ. ನಾನು ಯಾರ ವಿರುದ್ಧವೂ ಅವಹೇಳನಕಾರಿ ಪದಗಳನ್ನು ಬಳಸಿಲ್ಲ ಅಥವಾ ಯಾರನ್ನೂ ಮಾನಹಾನಿ ಮಾಡುವ ಉದ್ದೇಶದಿಂದ ಅಂತಹ ಭಾಷೆಯನ್ನು ಬಳಸಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಸುಳ್ಳು ದೂರು ದಾಖಲಿಸಲಾಗಿದೆ ಎಂದು ರಾಹುಲ್ ಹೇಳಿರುವುದಾಗಿ ಶುಕ್ಲಾ ಉಲ್ಲೇಖಿಸಿದ್ದಾರೆ.</p><p>ನನ್ನ ಮತ್ತು ನನ್ನ ಪಕ್ಷದ ಹೆಸರನ್ನು ಹಾಳು ಮಾಡುವ ರಾಜಕೀಯ ದುರುದ್ದೇಶದಿಂದ ಆರೋಪಗಳನ್ನು ಮಾಡಲಾಗಿದೆ. ನಾನು ಯಾರ ವಿರುದ್ಧವೂ ಅವಹೇಳನಕಾರಿ ಪದಗಳನ್ನು ಬಳಸಿಲ್ಲ, ಅಥವಾ ಯಾರನ್ನೂ ಮಾನಹಾನಿ ಮಾಡುವ ಉದ್ದೇಶದಿಂದ ಅಂತಹ ಭಾಷೆಯನ್ನು ಬಳಸಿಲ್ಲ ಎಂದು ರಾಹುಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.</p><p>ರಾಹುಲ್ ತಮ್ಮ ಹೇಳಿಕೆಯನ್ನು ದಾಖಲಿಸಿದ ನಂತರ ನ್ಯಾಯಾಲಯದಿಂದ ಹೊರಬರುತ್ತಿದ್ದಂತೆ, ಪಕ್ಷದ ಬೆಂಬಲಿಗರು ಅವರನ್ನು ಸ್ವಾಗತಿಸುವ ಘೋಷಣೆಗಳನ್ನು ಕೂಗಿದರು. ಮುಗುಳ್ನಗುತ್ತಾ ರಾಹುಲ್ ಗಾಂಧಿ ಜನಸಮೂಹದತ್ತ ಕೈ ಬೀಸಿದರು.</p><p>ಬೆಳಿಗ್ಗೆ 10.40ರ ಸುಮಾರಿಗೆ ಸುಲ್ತಾನಪುರ ನ್ಯಾಯಾಲಯಕ್ಕೆ ಬಂದ ರಾಹುಲ್, ಹೇಳಿಕೆ ದಾಖಲಿಸಿ 11.15ರ ಸುಮಾರಿಗೆ ಹೊರನಡೆದರು. ಸುಲ್ತಾನಪುರದ ಕೆಲ ಕಾಂಗ್ರೆಸ್ ನಾಯಕರು ಸತ್ಯಮೇವ ಜಯತೇ ಎಂಬ ಪೋಸ್ಟರ್ ಸಹ ಹಾಕಿದ್ದರು.</p><p>2018ರಲ್ಲಿ ಸ್ಥಳೀಯ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>