<p><strong>ನವದೆಹಲಿ:</strong> ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ತಮಗೆ ಸಮನ್ಸ್ ನೀಡಿರುವುದನ್ನು ಎತ್ತಿಹಿಡಿದು ದೆಹಲಿ ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಮೇಲ್ಮನವಿಯು ಸುಪ್ರೀಂ ಕೋರ್ಟ್ನಲ್ಲಿ ಸೋಮವಾರ ವಿಚಾರಣೆಗೆ ಬರಲಿದೆ.</p>.<p>ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತಾ ಅವರಿರುವ ಪೀಠವು ಈ ಅರ್ಜಿಯ ವಿಚಾರಣೆ ನಡೆಸುವ ಸಾಧ್ಯತೆ ಇದೆ.</p>.<p>‘ಬಿಜೆಪಿ ಐಟಿ ವಿಭಾಗಕ್ಕೆ ಸಂಬಂಧಿಸಿದ, ಧ್ರುವ ರಾಠಿ ಅವರ ವಿಡಿಯೊವನ್ನು ಮರು ಟ್ವೀಟ್ ಮಾಡುವ ಮೂಲಕ ನಾನು ತಪ್ಪು ಮಾಡಿರುವೆ’ ಎಂಬುದಾಗಿ ಕೇಜ್ರಿವಾಲ್ ಅವರು ಫೆಬ್ರುವರಿ 26ರಂದು ಸುಪ್ರೀಂ ಕೋರ್ಟ್ಗೆ ತಿಳಿಸಿದ್ದರು.</p>.<p>‘ಈ ವಿಚಾರವಾಗಿ ದೂರುದಾರರಲ್ಲಿ ಕ್ಷಮೆ ಕೇಳುವಿರಾ’ ಎಂದು ಮಾರ್ಚ್ 11ರಂದು ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಅವರನ್ನು ಕೇಳಿತ್ತು.</p>.<p>ಇದಕ್ಕೆ ಪ್ರತಿಕ್ರಿಯಿಸಿದ್ದ ದೂರುದಾರ ವಿಕಾಸ್ ಸಾಂಕೃತ್ಯಾಯನ ಎಂಬುವವರು, ಸಾಮಾಜಿಕ ಜಾಲತಾಣಗಳಾದ ‘ಎಕ್ಸ್’ ಅಥವಾ ಇನ್ಸ್ಟಾಗ್ರಾಮ್ ಮೂಲಕ ಕೇಜ್ರಿವಾಲ್ ಕ್ಷಮಾಪಣೆ ಕೋರಬಹುದು ಎಂದು ಸುಪ್ರೀಂ ಕೋರ್ಟ್ಗೆ ತಿಳಿಸಿದ್ದರು.</p>.<p>‘ಮರುಟ್ವೀಟ್ ಮಾಡುವ ಮೂಲಕ ನಾನು ತಪ್ಪು ಮಾಡಿದ್ದೇನೆ ಎಂದಷ್ಟೆ ನನ್ನ ಕಕ್ಷಿದಾರ ಹೇಳಬಹುದು’ ಎಂದು ಕೇಜ್ರಿವಾಲ್ ಪರ ವಾದಿಸಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ನ್ಯಾಯಾಲಯಕ್ಕೆ ತಿಳಿಸಿದ್ದರು.</p>.<p>ವಾದ–ಪ್ರತಿವಾದ ಆಲಿಸಿದ್ದ ಸುಪ್ರೀಂ ಕೋರ್ಟ್, ಕೇಜ್ರಿವಾಲ್ ಅವರಿಗೆ ಯಾವುದೇ ನೋಟಿಸ್ ನೀಡಿರಲಿಲ್ಲ. ಅಲ್ಲದೇ, ‘ಕೇಜ್ರಿವಾಲ್ ತಮ್ಮ ತಪ್ಪನ್ನು ಒಪ್ಪಿಕೊಂಡಿರುವ ಕಾರಣ ಪ್ರಕರಣವನ್ನು ಮುಕ್ತಾಯಗೊಳಿಸಲು ಇಚ್ಛಿಸುವಿರಾ’ ಎಂದು ಅರ್ಜಿದಾರರನ್ನು ಫೆಬ್ರುವರಿ 26ರಂದು ಪ್ರಶ್ನಿಸಿತ್ತು.</p>.<p>ಅಲ್ಲದೇ, ಮುಂದಿನ ಆದೇಶದವರೆಗೆ, ಕೇಜ್ರಿವಾಲ್ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ಕೈಗೆತ್ತಿಕೊಳ್ಳದಂತೆ ವಿಚಾರಣಾ ನ್ಯಾಯಾಲಯಕ್ಕೂ ಸುಪ್ರೀಂ ಕೋರ್ಟ್ ಸೂಚಿಸಿತ್ತು.</p>.<p>ಪ್ರಕರಣ ಏನು: ಮಾನಹಾನಿಕರ ಎನ್ನಲಾದ ವಿಡಿಯೊವೊಂದನ್ನು ಯುಟ್ಯೂಬರ್ ಧ್ರುವ ರಾಠಿ ಮಾಡಿದ್ದು, ಅದನ್ನು ಕೇಜ್ರಿವಾಲ್ ಅವರು 2018ರ ಮೇ ತಿಂಗಳಲ್ಲಿ ಟ್ವಿಟರ್ನಲ್ಲಿ (ಈಗ ‘ಎಕ್ಸ್’) ಮತ್ತೆ ಹಂಚಿಕೊಂಡಿದ್ದರು ಎಂಬ ಆರೋಪ ಇದೆ.</p>.<p>ಈ ಬಗ್ಗೆ ವಿಕಾಸ್ ಸಾಂಕೃತ್ಯಾಯನ ದೂರು ದಾಖಲಿಸಿದ್ದಾರೆ.</p>.<p>‘ಜರ್ಮನಿಯಲ್ಲಿ ನೆಲೆಸಿರುವ ರಾಠಿ, ‘ಬಿಜೆಪಿ ಐಟಿ ವಿಭಾಗ ಭಾಗ–2’ ಎಂಬ ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಹಲವಾರು ತಪ್ಪು ಹಾಗೂ ಮಾನಹಾನಿಕರ ಆರೋಪಗಳನ್ನು ಮಾಡಲಾಗಿದೆ’ ಎಂದು ವಿಕಾಸ್ ತಮ್ಮ ದೂರಿನಲ್ಲಿ ತಿಳಿಸಿದ್ದರು.</p>.<p>‘ಮಾನಹಾನಿಕರ ವಸ್ತು–ವಿಷಯವನ್ನು ಮತ್ತೆ ಹಂಚಿಕೊಂಡಿರುವಾಗ ಮಾನನಷ್ಟಕ್ಕೆ ಸಂಬಂಧಿಸಿದ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಬಹುದು’ ಎಂದು ದೆಹಲಿ ಹೈಕೋರ್ಟ್ ಫೆಬ್ರುವರಿ 5ರಂದು ನೀಡಿದ ಆದೇಶದಲ್ಲಿ ಹೇಳಿತ್ತು.</p>.<p>ಕೇಜ್ರಿವಾಲ್ ವಿರುದ್ಧ ವಿಚಾರಣಾ ನ್ಯಾಯಾಲಯ 2019ರಲ್ಲಿ ಹೊರಡಿಸಿದ್ದ ಸಮನ್ಸ್ ರದ್ದು ಮಾಡಲು ನಿರಾಕರಿಸಿದ್ದ ಹೈಕೋರ್ಟ್, ‘ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿ ಮಾನಹಾನಿಕರ ಪೋಸ್ಟ್ ಹಂಚಿಕೊಂಡಾಗ ಅದರಿಂದಾಗುವ ಪರಿಣಾಮ ಅಗಾಧ’ ಎಂದೂ ಹೇಳಿತ್ತು.</p>.<p>‘ಇಂತಹ ನಡೆ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದಲ್ಲಿ, ದುರುದ್ದೇಶ ಹೊಂದಿದ ವ್ಯಕ್ತಿಗಳು ಮಾನಹಾನಿಕರ ವಸ್ತುವಿಷಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲು ಉತ್ತೇಜನ ನೀಡಿದಂತಾಗುತ್ತದೆ. ನಾವು ಮರುಟ್ವೀಟ್ ಮಾಡಿದ್ದೇವಷ್ಟೆ ಎಂದು ಹೇಳಲು ಅವರಿಗೆ ಅವಕಾಶ ಕೊಟ್ಟಂತೆಯೂ ಆಗುತ್ತದೆ’ ಎಂದೂ ಹೈಕೋರ್ಟ್ ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ತಮಗೆ ಸಮನ್ಸ್ ನೀಡಿರುವುದನ್ನು ಎತ್ತಿಹಿಡಿದು ದೆಹಲಿ ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಮೇಲ್ಮನವಿಯು ಸುಪ್ರೀಂ ಕೋರ್ಟ್ನಲ್ಲಿ ಸೋಮವಾರ ವಿಚಾರಣೆಗೆ ಬರಲಿದೆ.</p>.<p>ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತಾ ಅವರಿರುವ ಪೀಠವು ಈ ಅರ್ಜಿಯ ವಿಚಾರಣೆ ನಡೆಸುವ ಸಾಧ್ಯತೆ ಇದೆ.</p>.<p>‘ಬಿಜೆಪಿ ಐಟಿ ವಿಭಾಗಕ್ಕೆ ಸಂಬಂಧಿಸಿದ, ಧ್ರುವ ರಾಠಿ ಅವರ ವಿಡಿಯೊವನ್ನು ಮರು ಟ್ವೀಟ್ ಮಾಡುವ ಮೂಲಕ ನಾನು ತಪ್ಪು ಮಾಡಿರುವೆ’ ಎಂಬುದಾಗಿ ಕೇಜ್ರಿವಾಲ್ ಅವರು ಫೆಬ್ರುವರಿ 26ರಂದು ಸುಪ್ರೀಂ ಕೋರ್ಟ್ಗೆ ತಿಳಿಸಿದ್ದರು.</p>.<p>‘ಈ ವಿಚಾರವಾಗಿ ದೂರುದಾರರಲ್ಲಿ ಕ್ಷಮೆ ಕೇಳುವಿರಾ’ ಎಂದು ಮಾರ್ಚ್ 11ರಂದು ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಅವರನ್ನು ಕೇಳಿತ್ತು.</p>.<p>ಇದಕ್ಕೆ ಪ್ರತಿಕ್ರಿಯಿಸಿದ್ದ ದೂರುದಾರ ವಿಕಾಸ್ ಸಾಂಕೃತ್ಯಾಯನ ಎಂಬುವವರು, ಸಾಮಾಜಿಕ ಜಾಲತಾಣಗಳಾದ ‘ಎಕ್ಸ್’ ಅಥವಾ ಇನ್ಸ್ಟಾಗ್ರಾಮ್ ಮೂಲಕ ಕೇಜ್ರಿವಾಲ್ ಕ್ಷಮಾಪಣೆ ಕೋರಬಹುದು ಎಂದು ಸುಪ್ರೀಂ ಕೋರ್ಟ್ಗೆ ತಿಳಿಸಿದ್ದರು.</p>.<p>‘ಮರುಟ್ವೀಟ್ ಮಾಡುವ ಮೂಲಕ ನಾನು ತಪ್ಪು ಮಾಡಿದ್ದೇನೆ ಎಂದಷ್ಟೆ ನನ್ನ ಕಕ್ಷಿದಾರ ಹೇಳಬಹುದು’ ಎಂದು ಕೇಜ್ರಿವಾಲ್ ಪರ ವಾದಿಸಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ನ್ಯಾಯಾಲಯಕ್ಕೆ ತಿಳಿಸಿದ್ದರು.</p>.<p>ವಾದ–ಪ್ರತಿವಾದ ಆಲಿಸಿದ್ದ ಸುಪ್ರೀಂ ಕೋರ್ಟ್, ಕೇಜ್ರಿವಾಲ್ ಅವರಿಗೆ ಯಾವುದೇ ನೋಟಿಸ್ ನೀಡಿರಲಿಲ್ಲ. ಅಲ್ಲದೇ, ‘ಕೇಜ್ರಿವಾಲ್ ತಮ್ಮ ತಪ್ಪನ್ನು ಒಪ್ಪಿಕೊಂಡಿರುವ ಕಾರಣ ಪ್ರಕರಣವನ್ನು ಮುಕ್ತಾಯಗೊಳಿಸಲು ಇಚ್ಛಿಸುವಿರಾ’ ಎಂದು ಅರ್ಜಿದಾರರನ್ನು ಫೆಬ್ರುವರಿ 26ರಂದು ಪ್ರಶ್ನಿಸಿತ್ತು.</p>.<p>ಅಲ್ಲದೇ, ಮುಂದಿನ ಆದೇಶದವರೆಗೆ, ಕೇಜ್ರಿವಾಲ್ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ಕೈಗೆತ್ತಿಕೊಳ್ಳದಂತೆ ವಿಚಾರಣಾ ನ್ಯಾಯಾಲಯಕ್ಕೂ ಸುಪ್ರೀಂ ಕೋರ್ಟ್ ಸೂಚಿಸಿತ್ತು.</p>.<p>ಪ್ರಕರಣ ಏನು: ಮಾನಹಾನಿಕರ ಎನ್ನಲಾದ ವಿಡಿಯೊವೊಂದನ್ನು ಯುಟ್ಯೂಬರ್ ಧ್ರುವ ರಾಠಿ ಮಾಡಿದ್ದು, ಅದನ್ನು ಕೇಜ್ರಿವಾಲ್ ಅವರು 2018ರ ಮೇ ತಿಂಗಳಲ್ಲಿ ಟ್ವಿಟರ್ನಲ್ಲಿ (ಈಗ ‘ಎಕ್ಸ್’) ಮತ್ತೆ ಹಂಚಿಕೊಂಡಿದ್ದರು ಎಂಬ ಆರೋಪ ಇದೆ.</p>.<p>ಈ ಬಗ್ಗೆ ವಿಕಾಸ್ ಸಾಂಕೃತ್ಯಾಯನ ದೂರು ದಾಖಲಿಸಿದ್ದಾರೆ.</p>.<p>‘ಜರ್ಮನಿಯಲ್ಲಿ ನೆಲೆಸಿರುವ ರಾಠಿ, ‘ಬಿಜೆಪಿ ಐಟಿ ವಿಭಾಗ ಭಾಗ–2’ ಎಂಬ ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಹಲವಾರು ತಪ್ಪು ಹಾಗೂ ಮಾನಹಾನಿಕರ ಆರೋಪಗಳನ್ನು ಮಾಡಲಾಗಿದೆ’ ಎಂದು ವಿಕಾಸ್ ತಮ್ಮ ದೂರಿನಲ್ಲಿ ತಿಳಿಸಿದ್ದರು.</p>.<p>‘ಮಾನಹಾನಿಕರ ವಸ್ತು–ವಿಷಯವನ್ನು ಮತ್ತೆ ಹಂಚಿಕೊಂಡಿರುವಾಗ ಮಾನನಷ್ಟಕ್ಕೆ ಸಂಬಂಧಿಸಿದ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಬಹುದು’ ಎಂದು ದೆಹಲಿ ಹೈಕೋರ್ಟ್ ಫೆಬ್ರುವರಿ 5ರಂದು ನೀಡಿದ ಆದೇಶದಲ್ಲಿ ಹೇಳಿತ್ತು.</p>.<p>ಕೇಜ್ರಿವಾಲ್ ವಿರುದ್ಧ ವಿಚಾರಣಾ ನ್ಯಾಯಾಲಯ 2019ರಲ್ಲಿ ಹೊರಡಿಸಿದ್ದ ಸಮನ್ಸ್ ರದ್ದು ಮಾಡಲು ನಿರಾಕರಿಸಿದ್ದ ಹೈಕೋರ್ಟ್, ‘ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿ ಮಾನಹಾನಿಕರ ಪೋಸ್ಟ್ ಹಂಚಿಕೊಂಡಾಗ ಅದರಿಂದಾಗುವ ಪರಿಣಾಮ ಅಗಾಧ’ ಎಂದೂ ಹೇಳಿತ್ತು.</p>.<p>‘ಇಂತಹ ನಡೆ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದಲ್ಲಿ, ದುರುದ್ದೇಶ ಹೊಂದಿದ ವ್ಯಕ್ತಿಗಳು ಮಾನಹಾನಿಕರ ವಸ್ತುವಿಷಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲು ಉತ್ತೇಜನ ನೀಡಿದಂತಾಗುತ್ತದೆ. ನಾವು ಮರುಟ್ವೀಟ್ ಮಾಡಿದ್ದೇವಷ್ಟೆ ಎಂದು ಹೇಳಲು ಅವರಿಗೆ ಅವಕಾಶ ಕೊಟ್ಟಂತೆಯೂ ಆಗುತ್ತದೆ’ ಎಂದೂ ಹೈಕೋರ್ಟ್ ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>