<p><strong>ಸುಲ್ತಾನ್ಪುರ</strong>: ಮಾನನಷ್ಟ ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಗೆ ಜುಲೈ 26ರಂದು ಖುದ್ದಾಗಿ ಹಾಜರಾಗುವಂತೆ ರಾಹುಲ್ ಗಾಂಧಿ ಅವರಿಗೆ ಇಲ್ಲಿನ ಸಂಸದರ–ಶಾಸಕರ ನ್ಯಾಯಾಲಯ ಸೂಚಿಸಿದೆ. </p>.<p>ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ್ದಾರೆ ಎನ್ನಲಾದ ಆಕ್ಷೇಪಾರ್ಹ ಹೇಳಿಕೆ ಸಂಬಂಧ ರಾಹುಲ್ ಗಾಂಧಿ ಅವರ ವಿರುದ್ಧ 2018ರಲ್ಲಿ ಮಾನನಷ್ಟ ಪ್ರಕರಣ ದಾಖಲಾಗಿದೆ. </p>.<p>ಈ ಪ್ರಕರಣದ ಕುರಿತು ಮಂಗಳವಾರವೇ ರಾಹುಲ್ ಅವರು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಸಂಸತ್ತಿನ ಕಲಾಪದಿಂದಾಗಿ ಅವರು ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ನ್ಯಾಯಾಲಯಕ್ಕೆ ಹಾಜರಾದ ಅವರ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ, ಈ ಪ್ರಕರಣದ ವಿಚಾರಣೆಗೆ ಮುಂದಿನ ದಿನಾಂಕ ನಿಗದಿಪಡಿಸಬೇಕು ಎಂದು ಕೋರಿದರು. </p>.<p>ಇದಕ್ಕೆ ಸಮ್ಮತಿಸಿದ ನ್ಯಾಯಾಧೀಶ ಶುಭಮ್ ವರ್ಮಾ ಅವರು, ಜುಲೈ 26ರಂದು ರಾಹುಲ್ ಖುದ್ದಾಗಿ ಹಾಜರಾಗಬೇಕು ಎಂದು ಹೇಳಿದರು. </p>.<p>ಈ ಪ್ರಕರಣದ ವಿಚಾರಣೆಗಾಗಿ ರಾಹುಲ್ ಗಾಂಧಿ ‘ಭಾರತ್ ಜೋಡೊ ನ್ಯಾಯ ಯಾತ್ರೆ’ಯನ್ನು ಫೆಬ್ರುವರಿ 20ರಂದು ಒಂದು ದಿನದ ಮಟ್ಟಿಗೆ ನಿಲ್ಲಿಸಿ, ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆಗ ಅವರಿಗೆ ಜಾಮೀನು ಸಿಕ್ಕಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಲ್ತಾನ್ಪುರ</strong>: ಮಾನನಷ್ಟ ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಗೆ ಜುಲೈ 26ರಂದು ಖುದ್ದಾಗಿ ಹಾಜರಾಗುವಂತೆ ರಾಹುಲ್ ಗಾಂಧಿ ಅವರಿಗೆ ಇಲ್ಲಿನ ಸಂಸದರ–ಶಾಸಕರ ನ್ಯಾಯಾಲಯ ಸೂಚಿಸಿದೆ. </p>.<p>ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ್ದಾರೆ ಎನ್ನಲಾದ ಆಕ್ಷೇಪಾರ್ಹ ಹೇಳಿಕೆ ಸಂಬಂಧ ರಾಹುಲ್ ಗಾಂಧಿ ಅವರ ವಿರುದ್ಧ 2018ರಲ್ಲಿ ಮಾನನಷ್ಟ ಪ್ರಕರಣ ದಾಖಲಾಗಿದೆ. </p>.<p>ಈ ಪ್ರಕರಣದ ಕುರಿತು ಮಂಗಳವಾರವೇ ರಾಹುಲ್ ಅವರು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಸಂಸತ್ತಿನ ಕಲಾಪದಿಂದಾಗಿ ಅವರು ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ನ್ಯಾಯಾಲಯಕ್ಕೆ ಹಾಜರಾದ ಅವರ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ, ಈ ಪ್ರಕರಣದ ವಿಚಾರಣೆಗೆ ಮುಂದಿನ ದಿನಾಂಕ ನಿಗದಿಪಡಿಸಬೇಕು ಎಂದು ಕೋರಿದರು. </p>.<p>ಇದಕ್ಕೆ ಸಮ್ಮತಿಸಿದ ನ್ಯಾಯಾಧೀಶ ಶುಭಮ್ ವರ್ಮಾ ಅವರು, ಜುಲೈ 26ರಂದು ರಾಹುಲ್ ಖುದ್ದಾಗಿ ಹಾಜರಾಗಬೇಕು ಎಂದು ಹೇಳಿದರು. </p>.<p>ಈ ಪ್ರಕರಣದ ವಿಚಾರಣೆಗಾಗಿ ರಾಹುಲ್ ಗಾಂಧಿ ‘ಭಾರತ್ ಜೋಡೊ ನ್ಯಾಯ ಯಾತ್ರೆ’ಯನ್ನು ಫೆಬ್ರುವರಿ 20ರಂದು ಒಂದು ದಿನದ ಮಟ್ಟಿಗೆ ನಿಲ್ಲಿಸಿ, ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆಗ ಅವರಿಗೆ ಜಾಮೀನು ಸಿಕ್ಕಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>