<p><strong>ನವದೆಹಲಿ</strong>: ಮಾಜಿ ಸಂಸದ ಸಂದೀಪ್ ದೀಕ್ಷಿತ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಆತಿಶಿ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ವಿರುದ್ಧ ಇಲ್ಲಿನ ನ್ಯಾಯಾಲಯವು ಗುರುವಾರ ನೋಟಿಸ್ ಜಾರಿ ಮಾಡಿದೆ.</p>.<p>ಜ.27ರ ಒಳಗಾಗಿ ನೋಟಿಸ್ಗೆ ಉತ್ತರ ನೀಡುವಂತೆ ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ಪಾರಸ್ ದಲಾಲ್ ಅವರು ಇಬ್ಬರೂ ಮುಖಂಡರಿಗೆ ಸೂಚಿಸಿದ್ದಾರೆ.</p>.<p>‘ಸಂದೀಪ್ ದೀಕ್ಷಿತ್ ಅವರು ಬಿಜೆಪಿಯಿಂದ ಕೋಟ್ಯಂತರ ರೂಪಾಯಿ ಪಡೆದಿದ್ದಾರೆ. ಆಮ್ ಆದ್ಮಿ ಪಕ್ಷವನ್ನು ಸೋಲಿಸಲು ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ’ ಎಂದು ಆತಿಶಿ ಹಾಗೂ ಸಂಜಯ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು.</p>.<p>‘ಉದ್ದೇಶಪೂರ್ವಕವಾಗಿ ನನ್ನ ಹೆಸರಿಗೆ ಮಸಿ ಬಳಿಯಲು ಯತ್ನಿಸಿದ್ದರು’ ಎಂದು ಸಂದೀಪ್ ದೀಕ್ಷಿತ್ ಅವರು ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು.</p>.<p>ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಅರವಿಂದ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ನಿಂದ ಸಂದೀಪ್ ದೀಕ್ಷಿತ್ ಕಣಕ್ಕಿಳಿದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಾಜಿ ಸಂಸದ ಸಂದೀಪ್ ದೀಕ್ಷಿತ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಆತಿಶಿ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ವಿರುದ್ಧ ಇಲ್ಲಿನ ನ್ಯಾಯಾಲಯವು ಗುರುವಾರ ನೋಟಿಸ್ ಜಾರಿ ಮಾಡಿದೆ.</p>.<p>ಜ.27ರ ಒಳಗಾಗಿ ನೋಟಿಸ್ಗೆ ಉತ್ತರ ನೀಡುವಂತೆ ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ಪಾರಸ್ ದಲಾಲ್ ಅವರು ಇಬ್ಬರೂ ಮುಖಂಡರಿಗೆ ಸೂಚಿಸಿದ್ದಾರೆ.</p>.<p>‘ಸಂದೀಪ್ ದೀಕ್ಷಿತ್ ಅವರು ಬಿಜೆಪಿಯಿಂದ ಕೋಟ್ಯಂತರ ರೂಪಾಯಿ ಪಡೆದಿದ್ದಾರೆ. ಆಮ್ ಆದ್ಮಿ ಪಕ್ಷವನ್ನು ಸೋಲಿಸಲು ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ’ ಎಂದು ಆತಿಶಿ ಹಾಗೂ ಸಂಜಯ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು.</p>.<p>‘ಉದ್ದೇಶಪೂರ್ವಕವಾಗಿ ನನ್ನ ಹೆಸರಿಗೆ ಮಸಿ ಬಳಿಯಲು ಯತ್ನಿಸಿದ್ದರು’ ಎಂದು ಸಂದೀಪ್ ದೀಕ್ಷಿತ್ ಅವರು ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು.</p>.<p>ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಅರವಿಂದ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ನಿಂದ ಸಂದೀಪ್ ದೀಕ್ಷಿತ್ ಕಣಕ್ಕಿಳಿದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>