<p><strong>ನವದೆಹಲಿ</strong>: ದೇಶದ173 ಗಡಿ ಪ್ರದೇಶ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಎನ್ಸಿಸಿಯನ್ನು ವಿಸ್ತರಿಸುವ ಪ್ರಸ್ತಾಪಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಅನುಮೋದನೆ ನೀಡಿದ್ದಾರೆ.</p>.<p>ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರುಶನಿವಾರ ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಹೇಳಿದ್ದರು.</p>.<p>‘ದೇಶದ ಗಡಿ ಪ್ರದೇಶ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಎನ್ಸಿಸಿಯನ್ನು ವಿಸ್ತರಿಸಲಾಗುವುದು. ಇದರಿಂದಾಗಿ ಈ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣೆಗಾಗಿ ಮಾನವ ಶಕ್ತಿ ವೃದ್ಧಿಸಬಹುದು. ಅಲ್ಲದೆ ಸೇನೆಯಲ್ಲಿ ತಮ್ಮ ವೃತ್ತಿ ಜೀವನವನ್ನು ರೂಪಿಸಲು ಕೌಶಲ ತರಬೇತಿ ದೊರೆದಂತಾಗುತ್ತದೆ’ ಎಂದು ಅವರು ತಿಳಿಸಿದ್ದರು.</p>.<p>‘ಈಗಾಗಲೇ ಎನ್ಸಿಸಿಗಾಗಿಗಡಿ ಪ್ರದೇಶ ಮತ್ತು ಕರಾವಳಿ ಜಿಲ್ಲೆಗಳಲ್ಲಿ1,000 ಕ್ಕೂ ಹೆಚ್ಚು ಶಾಲೆಗಳನ್ನೂ ಆರಿಸಲಾಗಿದೆ. ಇಲ್ಲಿಂದ 1 ಲಕ್ಷಕ್ಕೂ ಹೆಚ್ಚು ಕೆಡೆಟ್ಗಳನ್ನು ನೇಮಕಾತಿ ಮಾಡಲಾಗುವುದು, ಅವರಲ್ಲಿ ಮೂರನೇ ಒಂದು ಭಾಗದಷ್ಟು ಯುವತಿಯರು ಇರಲಿದ್ದಾರೆ. ಒಟ್ಟು 83 ಎನ್ಸಿಸಿ ಘಟಕಗಳನ್ನು ಮೇಲ್ದರ್ಜೆಗೇರಿಸಲಾಗುವುದು’ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದ173 ಗಡಿ ಪ್ರದೇಶ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಎನ್ಸಿಸಿಯನ್ನು ವಿಸ್ತರಿಸುವ ಪ್ರಸ್ತಾಪಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಅನುಮೋದನೆ ನೀಡಿದ್ದಾರೆ.</p>.<p>ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರುಶನಿವಾರ ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಹೇಳಿದ್ದರು.</p>.<p>‘ದೇಶದ ಗಡಿ ಪ್ರದೇಶ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಎನ್ಸಿಸಿಯನ್ನು ವಿಸ್ತರಿಸಲಾಗುವುದು. ಇದರಿಂದಾಗಿ ಈ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣೆಗಾಗಿ ಮಾನವ ಶಕ್ತಿ ವೃದ್ಧಿಸಬಹುದು. ಅಲ್ಲದೆ ಸೇನೆಯಲ್ಲಿ ತಮ್ಮ ವೃತ್ತಿ ಜೀವನವನ್ನು ರೂಪಿಸಲು ಕೌಶಲ ತರಬೇತಿ ದೊರೆದಂತಾಗುತ್ತದೆ’ ಎಂದು ಅವರು ತಿಳಿಸಿದ್ದರು.</p>.<p>‘ಈಗಾಗಲೇ ಎನ್ಸಿಸಿಗಾಗಿಗಡಿ ಪ್ರದೇಶ ಮತ್ತು ಕರಾವಳಿ ಜಿಲ್ಲೆಗಳಲ್ಲಿ1,000 ಕ್ಕೂ ಹೆಚ್ಚು ಶಾಲೆಗಳನ್ನೂ ಆರಿಸಲಾಗಿದೆ. ಇಲ್ಲಿಂದ 1 ಲಕ್ಷಕ್ಕೂ ಹೆಚ್ಚು ಕೆಡೆಟ್ಗಳನ್ನು ನೇಮಕಾತಿ ಮಾಡಲಾಗುವುದು, ಅವರಲ್ಲಿ ಮೂರನೇ ಒಂದು ಭಾಗದಷ್ಟು ಯುವತಿಯರು ಇರಲಿದ್ದಾರೆ. ಒಟ್ಟು 83 ಎನ್ಸಿಸಿ ಘಟಕಗಳನ್ನು ಮೇಲ್ದರ್ಜೆಗೇರಿಸಲಾಗುವುದು’ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>