ಅಯೋಧ್ಯೆ/ಲಖನೌ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು (ಮಂಗಳವಾರ) ಲಖನೌದ ಹನುಮಾನ್ ಸೇತು ದೇವಸ್ಥಾನದಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ.
ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಪ್ರಮುಖ ದೇವಾಲಯಗಳು ಮತ್ತು ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಕರೆ ನೀಡಿದ್ದರು.
ಲಖನೌದ ಸಂಸದರಾಗಿರುವ ಸಿಂಗ್ ಅವರು ಹನುಮಾನ್ ಸೇತು ದೇವಾಲಯಕ್ಕೆ ಭೇಟಿ ನೀಡಿ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು. ಬಳಿಕ ದೇವರಿಗೆ ಪೂಜೆ ಸಲ್ಲಿಸಿದರು.
ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯಾಗುತ್ತಿರುವುದು ದೇಶದ ಜನರಿಗೆ ಸಂತಸದ ವಿಚಾರವಾಗಿದೆ. ಈ ಸಮಾರಂಭದಲ್ಲಿ ದೇಶದ ಜನರು ಮಾತ್ರವಲ್ಲದೆ ವಿದೇಶಿಗರು ಕೂಡ ಭಾಗವಹಿಸಲಿದ್ದಾರೆ ಎಂದು ಸಿಂಗ್ ಹೇಳಿದರು.
हनुमान तेहि परसा कर पुनि कीन्ह प्रनाम, ⁰राम काजु कीन्हें बिनु मोहि कहाँ बिश्राम।
— Rajnath Singh (@rajnathsingh) January 16, 2024
प्रधानमंत्री श्री @narendramodi ने समस्त देशवासियों से आह्वान किया है कि सभी लोग अपने आस पास के मंदिरों में स्वच्छता के लिए श्रमदान करें।
आज लखनऊ में हनुमान सेतु मंदिर में जाकर, #SwachhTeerth… pic.twitter.com/ePaBCU7R6I
ಬಿಜೆಪಿ ನಾಯಕರು, ಕೇಂದ್ರ ಸಚಿವರು ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ದೇಶದ ವಿವಿಧ ಭಾಗಗಳಲ್ಲಿ ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ರಾಮಮಂದಿರ ಉದ್ಘಾಟನೆಯ ದಿನ ಸಮೀಪಿಸುತ್ತಿರುವಾಗ ದೇಶದಾದ್ಯಂತ ಸಂಭ್ರಮದ ವಾತಾವರಣ ಮೂಡಿಸಲು ಬಿಜೆಪಿ ಈ ಅಭಿಯಾನ ಕೈಗೊಂಡಿದೆ.
#WATCH | Defence Minister Rajnath Singh cleans Hanuman Setu temple in Lucknow, Uttar Pradesh as a part of his cleanliness drive here. pic.twitter.com/I9APDZjUzS
— ANI (@ANI) January 16, 2024
#WATCH | Defence Minister Rajnath Singh cleans Hanuman Setu temple premises in Lucknow, Uttar Pradesh as a part of his cleanliness drive here. pic.twitter.com/PFC9QNp8Fr
— ANI (@ANI) January 16, 2024
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.