ಅಮೆರಿಕದಲ್ಲಿ ಇಂಡೋ–ಪೆಸಿಫಿಕ್ ಪ್ರದೇಶದ ಭದ್ರತೆ ಕುರಿತಂತೆ ಕ್ವಾಡ್ ಸಭೆ ಆರಂಭಕ್ಕೂ ಕೆಲ ಗಂಟೆಗಳ ಮುನ್ನ ಭಾರತ ಮತ್ತು ಚೀನಾ ನಡುವೆ ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆಯ ಸೇನಾ ಸಂಘರ್ಷದ ಕುರಿತಂತೆ ವಾಕ್ ಸಮರ ನಡೆದಿತ್ತು. ಸಂಘರ್ಷಕ್ಕೆ ಭಾರತೀಯ ಸೇನೆ ಕಾರಣ ಎಂದು ಚೀನಾ ದೂಷಿಸಿದ್ದು, ಭಾರತ ಆರೋಪಗಳನ್ನು ಅಲ್ಲಗಳೆದಿತ್ತು. ಈ ಬೆಳವಣಿಗೆ ಮಧ್ಯೆಯೇ ರಾಜನಾಥ್ ಸಿಂಗ್ ಅವರು ಗಾಲ್ವನ್ ಕಣಿವೆ ಸಂಘರ್ಷ ಮತ್ತು ಬಾಲಾಕೋಟ್ ದಾಳಿ ವಿಚಾರವನ್ನು ಸಮರ್ಥಿಸಿಕೊಂಡಿದ್ದಾರೆ.