<p><strong>ನವದೆಹಲಿ</strong>: ಲೋಕಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆ ರೂಪಿಸಲು ಬಿಜೆಪಿಯು 27 ಸದಸ್ಯರ ಸಮಿತಿಯನ್ನು ಶನಿವಾರ ಪ್ರಕಟಿಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಮಿತಿಯಲ್ಲಿ ಕೇಂದ್ರದ ಹಲವು ಸಚಿವರು ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಇದ್ದಾರೆ.</p>.<p>ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಸಚಿವ ಪೀಯೂಷ್ ಗೋಯಲ್ ಅವರನ್ನು ಕ್ರಮವಾಗಿ ಸಂಚಾಲಕಿ ಮತ್ತು ಉಪಸಂಚಾಲರಾಗಿ ನೇಮಕ ಮಾಡಲಾಗಿದೆ. </p>.<p>ರಾಜನಾಥ್ ಸಿಂಗ್ ಅವರು 2019ರ ಚುನಾವಣೆ ಸಂದರ್ಭದಲ್ಲೂ ಬಿಜೆಪಿ ಪ್ರಣಾಳಿಕೆ ಸಮಿತಿಯ ನೇತೃತ್ವ ವಹಿಸಿದ್ದರು. ಅಂದು ಸಮಿತಿಯಲ್ಲಿದ್ದ ಹಲವು ಮಂದಿ ಈ ಬಾರಿಯೂ ಸ್ಥಾನ ಪಡೆದುಕೊಂಡಿದ್ದಾರೆ.</p>.<p>ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಅಶ್ವಿನಿ ವೈಷ್ಣವ್, ಭೂಪೇಂದರ್ ಯಾದವ್, ಕಿರಣ್ ರಿಜಿಜು, ಅರ್ಜುನ್ ಮುಂಡಾ, ಅರ್ಜುನ್ ರಾಮ್ ಮೇಘವಾಲ್, ಸ್ಮೃತಿ ಇರಾನಿ ಮತ್ತು ರಾಜೀವ್ ಚಂದ್ರಶೇಖರ್ ಅವರು ಸಮಿತಿಯಲ್ಲಿದ್ದಾರೆ.</p>.<p>ಗುಜರಾತ್ ಮುಖ್ಯಮಂತ್ರಿ ಭೂಪೇಂದರ್ ಪಟೇಲ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ, ಛತ್ತೀಸ್ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯ್ ಹಾಗೂ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಸಮಿತಿಯಲ್ಲಿರುವ ಮುಖ್ಯಮಂತ್ರಿಗಳಾಗಿದ್ದಾರೆ.</p>.<p>ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಸಮಿತಿಯಲ್ಲಿಲ್ಲದ ಕೆಲವು ಹಿರಿಯ ನಾಯಕರಿಗೆ ಚುನಾವಣೆಗೆ ಸಂಬಂಧಿಸಿದ ಇತರ ಸಂಘಟನಾತ್ಮಕ ಚಟುವಟಿಕೆಯ ಜವಾಬ್ದಾರಿ ನೀಡಲಾಗುತ್ತದೆ ಎಂದು ಮೂಲಗಳು ಹೇಳಿವೆ.</p>.<p>ತಮ್ಮ ಮೂರನೇ ಅವಧಿಯು ಕೆಲವೊಂದು ದೊಡ್ಡ ನಿರ್ಧಾರಗಳಿಂದ ಕೂಡಿರಲಿದೆ ಎಂದು ಪ್ರಧಾನಿ ಮೋದಿ ಅವರು ಆಗಿಂದಾಗ್ಗೆ ಹೇಳುತ್ತಾ ಬಂದಿರುವುದರಿಂದ, ಬಿಜೆಪಿ ಪ್ರಣಾಳಿಕೆಯ ಬಗ್ಗೆ ಕುತೂಹಲ ಹೆಚ್ಚಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲೋಕಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆ ರೂಪಿಸಲು ಬಿಜೆಪಿಯು 27 ಸದಸ್ಯರ ಸಮಿತಿಯನ್ನು ಶನಿವಾರ ಪ್ರಕಟಿಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಮಿತಿಯಲ್ಲಿ ಕೇಂದ್ರದ ಹಲವು ಸಚಿವರು ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಇದ್ದಾರೆ.</p>.<p>ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಸಚಿವ ಪೀಯೂಷ್ ಗೋಯಲ್ ಅವರನ್ನು ಕ್ರಮವಾಗಿ ಸಂಚಾಲಕಿ ಮತ್ತು ಉಪಸಂಚಾಲರಾಗಿ ನೇಮಕ ಮಾಡಲಾಗಿದೆ. </p>.<p>ರಾಜನಾಥ್ ಸಿಂಗ್ ಅವರು 2019ರ ಚುನಾವಣೆ ಸಂದರ್ಭದಲ್ಲೂ ಬಿಜೆಪಿ ಪ್ರಣಾಳಿಕೆ ಸಮಿತಿಯ ನೇತೃತ್ವ ವಹಿಸಿದ್ದರು. ಅಂದು ಸಮಿತಿಯಲ್ಲಿದ್ದ ಹಲವು ಮಂದಿ ಈ ಬಾರಿಯೂ ಸ್ಥಾನ ಪಡೆದುಕೊಂಡಿದ್ದಾರೆ.</p>.<p>ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಅಶ್ವಿನಿ ವೈಷ್ಣವ್, ಭೂಪೇಂದರ್ ಯಾದವ್, ಕಿರಣ್ ರಿಜಿಜು, ಅರ್ಜುನ್ ಮುಂಡಾ, ಅರ್ಜುನ್ ರಾಮ್ ಮೇಘವಾಲ್, ಸ್ಮೃತಿ ಇರಾನಿ ಮತ್ತು ರಾಜೀವ್ ಚಂದ್ರಶೇಖರ್ ಅವರು ಸಮಿತಿಯಲ್ಲಿದ್ದಾರೆ.</p>.<p>ಗುಜರಾತ್ ಮುಖ್ಯಮಂತ್ರಿ ಭೂಪೇಂದರ್ ಪಟೇಲ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ, ಛತ್ತೀಸ್ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯ್ ಹಾಗೂ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಸಮಿತಿಯಲ್ಲಿರುವ ಮುಖ್ಯಮಂತ್ರಿಗಳಾಗಿದ್ದಾರೆ.</p>.<p>ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಸಮಿತಿಯಲ್ಲಿಲ್ಲದ ಕೆಲವು ಹಿರಿಯ ನಾಯಕರಿಗೆ ಚುನಾವಣೆಗೆ ಸಂಬಂಧಿಸಿದ ಇತರ ಸಂಘಟನಾತ್ಮಕ ಚಟುವಟಿಕೆಯ ಜವಾಬ್ದಾರಿ ನೀಡಲಾಗುತ್ತದೆ ಎಂದು ಮೂಲಗಳು ಹೇಳಿವೆ.</p>.<p>ತಮ್ಮ ಮೂರನೇ ಅವಧಿಯು ಕೆಲವೊಂದು ದೊಡ್ಡ ನಿರ್ಧಾರಗಳಿಂದ ಕೂಡಿರಲಿದೆ ಎಂದು ಪ್ರಧಾನಿ ಮೋದಿ ಅವರು ಆಗಿಂದಾಗ್ಗೆ ಹೇಳುತ್ತಾ ಬಂದಿರುವುದರಿಂದ, ಬಿಜೆಪಿ ಪ್ರಣಾಳಿಕೆಯ ಬಗ್ಗೆ ಕುತೂಹಲ ಹೆಚ್ಚಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>