<p><strong>ನವದೆಹಲಿ</strong>: ರಕ್ಷಣಾ ಸಚಿವಾಲಯವು 2025 ಅನ್ನು ‘ಸುಧಾರಣೆಗಳ ವರ್ಷ’ ಎಂದು ಘೋಷಿಸಿದೆ. ಭಾರತೀಯ ಸೇನೆಯ ಮೂರೂ ಪಡೆಗಳನ್ನು ಪರಸ್ಪರ ಒಗ್ಗೂಡಿಸಿ, ಸಮಗ್ರವಾಗಿ ಸದೃಢಗೊಳಿಸುವ ವ್ಯವಸ್ಥೆ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ.</p>.<p>ಅತ್ಯಾಧುನಿಕ ತಾಂತ್ರಿಕ ಸೌಲಭ್ಯಗಳ ಜೊತೆಗೆ, ಬಹುಹಂತದ ಕಾರ್ಯಾಚರಣೆಯನ್ನು ನಡೆಸಲು ಈ ಮೂರೂ ಪಡೆಗಳನ್ನು ಸಜ್ಜುಗೊಳಿಸಲು ಅಗತ್ಯವಿರುವ ಸುಧಾರಣಾ ಕ್ರಮಗಳನ್ನು ಈ ವರ್ಷದಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದೆ.</p>.<p>ಸೈಬರ್, ಬಾಹ್ಯಾಕಾಶ ಕ್ಷೇತ್ರ, ಕೃತಕ ಬುದ್ಧಿಮತ್ತೆ, ಹೈಪರ್ಸಾನಿಕ್ ಮತ್ತು ರೊಬೊಟಿಕ್ಸ್ ಕ್ಷೇತ್ರಗಳನ್ನು ಒಳಗೊಂಡು ಹೊಸ ಕ್ಷೇತ್ರಗಳತ್ತ ಹೆಚ್ಚಿನ ಗಮನವನ್ನು ಕೇಂದ್ರೀಕರಿಸಲಾಗುವುದು ಎಂದೂ ವಿವರಿಸಿದೆ.</p>.<p>ಸೇನೆಯ ಆಧುನೀಕರಣ ಪ್ರಕ್ರಿಯೆ ನಿಟ್ಟಿನಲ್ಲಿ ‘ಸುಧಾರಣೆಗಳ ವರ್ಷ’ವು ಮಹತ್ವದ್ದಾಗಿದೆ. ದೇಶದ ಸಾರ್ವಭೌಮತೆ ಮತ್ತು ಭದ್ರತೆ ಹಾಗೂ 21ನೇ ಶತಮಾನದ ಸವಾಲುಗಳನ್ನು ಎದುರಿಸಲು ಸಜ್ಜುಗೊಳಿಸುವುದು ಒಟ್ಟು ಆದ್ಯತೆಯಾಗಿದೆ ಎಂದು ತಿಳಿಸಿದೆ. </p>.<p>ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತಾಧಿಕಾರ ಸಭೆಯಲ್ಲಿ 2025 ಅನ್ನು ‘ಸುಧಾರಣೆಗಳ ವರ್ಷ’ವಾಗಿ ಘೋಷಿಸುವ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಕ್ಷಣಾ ಸಚಿವಾಲಯವು 2025 ಅನ್ನು ‘ಸುಧಾರಣೆಗಳ ವರ್ಷ’ ಎಂದು ಘೋಷಿಸಿದೆ. ಭಾರತೀಯ ಸೇನೆಯ ಮೂರೂ ಪಡೆಗಳನ್ನು ಪರಸ್ಪರ ಒಗ್ಗೂಡಿಸಿ, ಸಮಗ್ರವಾಗಿ ಸದೃಢಗೊಳಿಸುವ ವ್ಯವಸ್ಥೆ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ.</p>.<p>ಅತ್ಯಾಧುನಿಕ ತಾಂತ್ರಿಕ ಸೌಲಭ್ಯಗಳ ಜೊತೆಗೆ, ಬಹುಹಂತದ ಕಾರ್ಯಾಚರಣೆಯನ್ನು ನಡೆಸಲು ಈ ಮೂರೂ ಪಡೆಗಳನ್ನು ಸಜ್ಜುಗೊಳಿಸಲು ಅಗತ್ಯವಿರುವ ಸುಧಾರಣಾ ಕ್ರಮಗಳನ್ನು ಈ ವರ್ಷದಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದೆ.</p>.<p>ಸೈಬರ್, ಬಾಹ್ಯಾಕಾಶ ಕ್ಷೇತ್ರ, ಕೃತಕ ಬುದ್ಧಿಮತ್ತೆ, ಹೈಪರ್ಸಾನಿಕ್ ಮತ್ತು ರೊಬೊಟಿಕ್ಸ್ ಕ್ಷೇತ್ರಗಳನ್ನು ಒಳಗೊಂಡು ಹೊಸ ಕ್ಷೇತ್ರಗಳತ್ತ ಹೆಚ್ಚಿನ ಗಮನವನ್ನು ಕೇಂದ್ರೀಕರಿಸಲಾಗುವುದು ಎಂದೂ ವಿವರಿಸಿದೆ.</p>.<p>ಸೇನೆಯ ಆಧುನೀಕರಣ ಪ್ರಕ್ರಿಯೆ ನಿಟ್ಟಿನಲ್ಲಿ ‘ಸುಧಾರಣೆಗಳ ವರ್ಷ’ವು ಮಹತ್ವದ್ದಾಗಿದೆ. ದೇಶದ ಸಾರ್ವಭೌಮತೆ ಮತ್ತು ಭದ್ರತೆ ಹಾಗೂ 21ನೇ ಶತಮಾನದ ಸವಾಲುಗಳನ್ನು ಎದುರಿಸಲು ಸಜ್ಜುಗೊಳಿಸುವುದು ಒಟ್ಟು ಆದ್ಯತೆಯಾಗಿದೆ ಎಂದು ತಿಳಿಸಿದೆ. </p>.<p>ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತಾಧಿಕಾರ ಸಭೆಯಲ್ಲಿ 2025 ಅನ್ನು ‘ಸುಧಾರಣೆಗಳ ವರ್ಷ’ವಾಗಿ ಘೋಷಿಸುವ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>