<p><strong>ನವದೆಹಲಿ:</strong> ‘ಅವಸರದಲ್ಲಿ ಅಂಗೀಕಾರ’ ನೀಡಿರುವ ಮೂರು ಹೊಸ ಅಪರಾಧ ಕಾನೂನುಗಳ ಅನುಷ್ಠಾನ ಮುಂದೂಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.</p>.<p>‘ಅಪರಾಧ ಕಾನೂನುಗಳ ಅನುಷ್ಠಾನ ಮುಂದೂಡುವುದರಿಂದ, ಸಂಸತ್ನಲ್ಲಿ ಅವುಗಳ ಕುರಿತು ಮತ್ತೊಮ್ಮೆ ಪರಾಮರ್ಶೆ ನಡೆಸಲು ಅನುಕೂಲವಾಗಲಿದೆ’ ಎಂದು ಅವರು ಪ್ರಧಾನಿ ಮೋದಿ ಅವರಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.</p>.<p>ಭಾರತೀಯ ನ್ಯಾಯ ಸಂಹಿತೆ (ಬಿಎನ್ಎ), ಭಾರತೀಯ ಸಾಕ್ಷ್ಯ ಸಂಹಿತೆ (ಬಿಎಸ್ಎ)ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್) ಜುಲೈ 1ರಿಂದ ಜಾರಿಗೆ ಬರಲಿವೆ.</p>.<p>‘ಈ ಮೂರು ಕಾನೂನುಗಳನ್ನು ಜಾರಿಗೊಳಿಸುತ್ತಿರುವುದು ಕಳವಳಕಾರಿ. ಅದರಲ್ಲೂ, 146 ಜನ ಸಂಸದರನ್ನು ಸಂಸತ್ನಿಂದ ಅಮಾನತು ಮಾಡಿದ್ದ ಸಂದರ್ಭದಲ್ಲಿ ಈ ಮೂರು ಕಾಯ್ದೆಗಳಿಗೆ ಸಂಬಂಧಿಸಿದ ಮಸೂದೆಗಳನ್ನು ಅಂಗೀಕರಿಸಲಾಗಿದೆ’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ನಿಮ್ಮ ಸರ್ಕಾರದ ಅಧಿಕಾರ ಅವಧಿ ಮುಗಿಯುತ್ತಿದ್ದ ಸಂದರ್ಭದಲ್ಲಿ ಈ ಮೂರು ನಿರ್ಣಾಯಕ ಮಸೂದೆಗಳನ್ನು ಯಾವುದೇ ಚರ್ಚೆ ಇಲ್ಲದೆಯೇ, ಏಕಪಕ್ಷೀಯವಾಗಿ ಅಂಗೀಕರಿಸಲಾಗಿದೆ. ಲೋಕಸಭೆಯ 100ರಷ್ಟು ಸದಸ್ಯರು ಸೇರಿದಂತೆ ಎರಡೂ ಸದನಗಳ ಒಟ್ಟು 146 ಸಂಸದರನ್ನು ಸಂಸತ್ನಿಂದ ಹೊರಗೆ ಹಾಕಿ, ಈ ಮಸೂದೆಗಳನ್ನು ಅಂಗೀಕರಿಸಲಾಗಿದೆ’ ಎಂದು ಮಮತಾ ಬ್ಯಾನರ್ಜಿ ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ನೈತಿಕತೆ ಮತ್ತು ವಾಸ್ತವಿಕತೆ ಕಾರಣಗಳಿಂದಾಗಿ ಕನಿಷ್ಠ ಪಕ್ಷ, ಈ ಮೂರು ನೂತನ ಕಾನೂನುಗಳನ್ನು ಅನುಷ್ಠಾನಗೊಳಿಸುವ ದಿನಾಂಕವನ್ನಾದರೂ ಮುಂದೂಡಿ’ ಎಂದು ಅವರು ಪತ್ರದಲ್ಲಿ ಕೋರಿದ್ದಾರೆ. </p>.<p>ಭೇಟಿ–ಚರ್ಚೆ: ಟಿಎಂಸಿ ಮುಖ್ಯಸ್ಥೆಯೂ ಆಗಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ನ ಹಿರಿಯ ನಾಯಕ ಪಿ.ಚಿದಂಬರಂ ಅವರನ್ನು ಗುರುವಾರ ಭೇಟಿ ಮಾಡಿ, ಈ ಹೊಸ ಅಪರಾಧ ಕಾನೂನುಗಳ ಕುರಿತು ಚರ್ಚೆ ನಡೆಸಿದರು ಎಂದು ಮೂಲಗಳು ಹೇಳಿವೆ.</p>.<p>ಈ ಮೂರು ಕಾನೂನುಗಳಿಗೆ ಸಂಬಂಧಿಸಿದ ಮಸೂದೆಗಳನ್ನು ಪರಾಮರ್ಶೆ ಮಾಡಿದ ಸಂಸದೀಯ ಸ್ಥಾಯಿ ಸಮಿತಿಯಲ್ಲಿ ಚಿದಂಬರಂ ಇದ್ದರು.</p>.<p>ಚಿದಂಬರಂ ಅಲ್ಲದೇ, ಸಮಿತಿಯ ಇತರ ಸದಸ್ಯರಾಗಿದ್ದ ಟಿಎಂಸಿಯ ಡೆರೆಕ್ ಒಬ್ರಿಯಾನ್, ಡಿಎಂಕೆಯ ಎನ್.ಆರ್.ಇಳಂಗೊ ಅವರು ಈ ಮೂರು ಮಸೂದೆಗಳ ಕುರಿತು ತಮ್ಮ ಭಿನ್ನ ನಿಲುವುಗಳನ್ನು ಆಗ ದಾಖಲಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಅವಸರದಲ್ಲಿ ಅಂಗೀಕಾರ’ ನೀಡಿರುವ ಮೂರು ಹೊಸ ಅಪರಾಧ ಕಾನೂನುಗಳ ಅನುಷ್ಠಾನ ಮುಂದೂಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.</p>.<p>‘ಅಪರಾಧ ಕಾನೂನುಗಳ ಅನುಷ್ಠಾನ ಮುಂದೂಡುವುದರಿಂದ, ಸಂಸತ್ನಲ್ಲಿ ಅವುಗಳ ಕುರಿತು ಮತ್ತೊಮ್ಮೆ ಪರಾಮರ್ಶೆ ನಡೆಸಲು ಅನುಕೂಲವಾಗಲಿದೆ’ ಎಂದು ಅವರು ಪ್ರಧಾನಿ ಮೋದಿ ಅವರಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.</p>.<p>ಭಾರತೀಯ ನ್ಯಾಯ ಸಂಹಿತೆ (ಬಿಎನ್ಎ), ಭಾರತೀಯ ಸಾಕ್ಷ್ಯ ಸಂಹಿತೆ (ಬಿಎಸ್ಎ)ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್) ಜುಲೈ 1ರಿಂದ ಜಾರಿಗೆ ಬರಲಿವೆ.</p>.<p>‘ಈ ಮೂರು ಕಾನೂನುಗಳನ್ನು ಜಾರಿಗೊಳಿಸುತ್ತಿರುವುದು ಕಳವಳಕಾರಿ. ಅದರಲ್ಲೂ, 146 ಜನ ಸಂಸದರನ್ನು ಸಂಸತ್ನಿಂದ ಅಮಾನತು ಮಾಡಿದ್ದ ಸಂದರ್ಭದಲ್ಲಿ ಈ ಮೂರು ಕಾಯ್ದೆಗಳಿಗೆ ಸಂಬಂಧಿಸಿದ ಮಸೂದೆಗಳನ್ನು ಅಂಗೀಕರಿಸಲಾಗಿದೆ’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ನಿಮ್ಮ ಸರ್ಕಾರದ ಅಧಿಕಾರ ಅವಧಿ ಮುಗಿಯುತ್ತಿದ್ದ ಸಂದರ್ಭದಲ್ಲಿ ಈ ಮೂರು ನಿರ್ಣಾಯಕ ಮಸೂದೆಗಳನ್ನು ಯಾವುದೇ ಚರ್ಚೆ ಇಲ್ಲದೆಯೇ, ಏಕಪಕ್ಷೀಯವಾಗಿ ಅಂಗೀಕರಿಸಲಾಗಿದೆ. ಲೋಕಸಭೆಯ 100ರಷ್ಟು ಸದಸ್ಯರು ಸೇರಿದಂತೆ ಎರಡೂ ಸದನಗಳ ಒಟ್ಟು 146 ಸಂಸದರನ್ನು ಸಂಸತ್ನಿಂದ ಹೊರಗೆ ಹಾಕಿ, ಈ ಮಸೂದೆಗಳನ್ನು ಅಂಗೀಕರಿಸಲಾಗಿದೆ’ ಎಂದು ಮಮತಾ ಬ್ಯಾನರ್ಜಿ ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ನೈತಿಕತೆ ಮತ್ತು ವಾಸ್ತವಿಕತೆ ಕಾರಣಗಳಿಂದಾಗಿ ಕನಿಷ್ಠ ಪಕ್ಷ, ಈ ಮೂರು ನೂತನ ಕಾನೂನುಗಳನ್ನು ಅನುಷ್ಠಾನಗೊಳಿಸುವ ದಿನಾಂಕವನ್ನಾದರೂ ಮುಂದೂಡಿ’ ಎಂದು ಅವರು ಪತ್ರದಲ್ಲಿ ಕೋರಿದ್ದಾರೆ. </p>.<p>ಭೇಟಿ–ಚರ್ಚೆ: ಟಿಎಂಸಿ ಮುಖ್ಯಸ್ಥೆಯೂ ಆಗಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ನ ಹಿರಿಯ ನಾಯಕ ಪಿ.ಚಿದಂಬರಂ ಅವರನ್ನು ಗುರುವಾರ ಭೇಟಿ ಮಾಡಿ, ಈ ಹೊಸ ಅಪರಾಧ ಕಾನೂನುಗಳ ಕುರಿತು ಚರ್ಚೆ ನಡೆಸಿದರು ಎಂದು ಮೂಲಗಳು ಹೇಳಿವೆ.</p>.<p>ಈ ಮೂರು ಕಾನೂನುಗಳಿಗೆ ಸಂಬಂಧಿಸಿದ ಮಸೂದೆಗಳನ್ನು ಪರಾಮರ್ಶೆ ಮಾಡಿದ ಸಂಸದೀಯ ಸ್ಥಾಯಿ ಸಮಿತಿಯಲ್ಲಿ ಚಿದಂಬರಂ ಇದ್ದರು.</p>.<p>ಚಿದಂಬರಂ ಅಲ್ಲದೇ, ಸಮಿತಿಯ ಇತರ ಸದಸ್ಯರಾಗಿದ್ದ ಟಿಎಂಸಿಯ ಡೆರೆಕ್ ಒಬ್ರಿಯಾನ್, ಡಿಎಂಕೆಯ ಎನ್.ಆರ್.ಇಳಂಗೊ ಅವರು ಈ ಮೂರು ಮಸೂದೆಗಳ ಕುರಿತು ತಮ್ಮ ಭಿನ್ನ ನಿಲುವುಗಳನ್ನು ಆಗ ದಾಖಲಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>