<p><strong>ಗಾಂಧಿನಗರ:</strong> ಗುಜರಾತ್ನ ಭಾರತ-ಪಾಕಿಸ್ತಾನ ಗಡಿಯಲ್ಲಿ ಸ್ಥಾಪನೆಯಾಗಲಿರುವ ನೂತನ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.</p>.<p>ಗಾಂಧಿನಗರದಲ್ಲಿ 'ಡಿಫೆನ್ಸ್ ಎಕ್ಸ್ಪೋ' ಉದ್ಘಾಟಿಸಿ ಮಾತನಾಡಿದ ಅವರು, ಉತ್ತರ ಗುಜರಾತ್ನ ಬನಾಸಕಾಂಠಾ ಜಿಲ್ಲೆಯಡೀಸಾದಲ್ಲಿ ನೆಲೆಗೊಳ್ಳಲಿರುವ ನೂತನ ವಾಯುನೆಲೆ ದೇಶದ ಭದ್ರತೆಗೆ ಅತ್ಯಂತ ಪ್ರಭಾವಶಾಲಿ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಹೇಳಿದರು.<br /><br />ಇದನ್ನೂ ಓದಿ:<a href="https://www.prajavani.net/india-news/helicopter-lost-control-and-crash-at-kedaranath-rudraprayag-route-981457.html" itemprop="url">ಹೆಲಿಕಾಪ್ಟರ್ ಪತನ: 7 ಸಾವು | ಕೇದಾರನಾಥದಿಂದ ಗುಪ್ತಕಾಶಿ ಮಾರ್ಗದಲ್ಲಿ ದುರಂತ </a></p>.<p>ವಿದೇಶದಿಂದ ಆಮದು ಮಾಡಿಕೊಳ್ಳಲಾಗದ 101 ರಕ್ಷಣಾ ಸಂಬಂಧಿತ ಸರಕುಗಳನ್ನು ಬಿಡುಗಡೆ ಮಾಡಲಿದ್ದೇವೆ. ಇದರೊಂದಿಗೆ 411 ರಕ್ಷಣಾ ಸಂಬಂಧಿತ ಉತ್ಪನ್ನಗಳನ್ನು ದೇಶೀಯವಾಗಿ ಖರೀದಿಸಬಹುದಾಗಿದೆ. ಇದು ಭಾರತದ ರಕ್ಷಣಾ ಉದ್ಯಮಕ್ಕೆ ಉತ್ತೇಜನ ನೀಡಲಿವೆ ಎಂದು ಸಹ ಪ್ರಧಾನಿ ಮೋದಿ ಹೇಳಿದರು.</p>.<p>ಕಳೆದ ಕೆಲವು ವರ್ಷಗಳಲ್ಲಿ ಭಾರತದ ರಕ್ಷಣಾ ಉತ್ಪನ್ನಗಳ ರಫ್ತು ಎಂಟು ಪಟ್ಟು ಹೆಚ್ಚಾಗಿವೆ ಎಂದು ಮೋದಿ ಉಲ್ಲೇಖಿಸಿದರು. ಮೊದಲೆಲ್ಲ ನಾವು ಪಾರಿವಾಳಗಳನ್ನು ಬಿಡುತ್ತಿದ್ದೆವು. ಈಗ ಚೀತಾಗಳನ್ನು ಬಿಡುತ್ತಿದ್ದೇವೆ ಎಂದು ಮಾರ್ಮಿಕವಾಗಿ ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಂಧಿನಗರ:</strong> ಗುಜರಾತ್ನ ಭಾರತ-ಪಾಕಿಸ್ತಾನ ಗಡಿಯಲ್ಲಿ ಸ್ಥಾಪನೆಯಾಗಲಿರುವ ನೂತನ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.</p>.<p>ಗಾಂಧಿನಗರದಲ್ಲಿ 'ಡಿಫೆನ್ಸ್ ಎಕ್ಸ್ಪೋ' ಉದ್ಘಾಟಿಸಿ ಮಾತನಾಡಿದ ಅವರು, ಉತ್ತರ ಗುಜರಾತ್ನ ಬನಾಸಕಾಂಠಾ ಜಿಲ್ಲೆಯಡೀಸಾದಲ್ಲಿ ನೆಲೆಗೊಳ್ಳಲಿರುವ ನೂತನ ವಾಯುನೆಲೆ ದೇಶದ ಭದ್ರತೆಗೆ ಅತ್ಯಂತ ಪ್ರಭಾವಶಾಲಿ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಹೇಳಿದರು.<br /><br />ಇದನ್ನೂ ಓದಿ:<a href="https://www.prajavani.net/india-news/helicopter-lost-control-and-crash-at-kedaranath-rudraprayag-route-981457.html" itemprop="url">ಹೆಲಿಕಾಪ್ಟರ್ ಪತನ: 7 ಸಾವು | ಕೇದಾರನಾಥದಿಂದ ಗುಪ್ತಕಾಶಿ ಮಾರ್ಗದಲ್ಲಿ ದುರಂತ </a></p>.<p>ವಿದೇಶದಿಂದ ಆಮದು ಮಾಡಿಕೊಳ್ಳಲಾಗದ 101 ರಕ್ಷಣಾ ಸಂಬಂಧಿತ ಸರಕುಗಳನ್ನು ಬಿಡುಗಡೆ ಮಾಡಲಿದ್ದೇವೆ. ಇದರೊಂದಿಗೆ 411 ರಕ್ಷಣಾ ಸಂಬಂಧಿತ ಉತ್ಪನ್ನಗಳನ್ನು ದೇಶೀಯವಾಗಿ ಖರೀದಿಸಬಹುದಾಗಿದೆ. ಇದು ಭಾರತದ ರಕ್ಷಣಾ ಉದ್ಯಮಕ್ಕೆ ಉತ್ತೇಜನ ನೀಡಲಿವೆ ಎಂದು ಸಹ ಪ್ರಧಾನಿ ಮೋದಿ ಹೇಳಿದರು.</p>.<p>ಕಳೆದ ಕೆಲವು ವರ್ಷಗಳಲ್ಲಿ ಭಾರತದ ರಕ್ಷಣಾ ಉತ್ಪನ್ನಗಳ ರಫ್ತು ಎಂಟು ಪಟ್ಟು ಹೆಚ್ಚಾಗಿವೆ ಎಂದು ಮೋದಿ ಉಲ್ಲೇಖಿಸಿದರು. ಮೊದಲೆಲ್ಲ ನಾವು ಪಾರಿವಾಳಗಳನ್ನು ಬಿಡುತ್ತಿದ್ದೆವು. ಈಗ ಚೀತಾಗಳನ್ನು ಬಿಡುತ್ತಿದ್ದೇವೆ ಎಂದು ಮಾರ್ಮಿಕವಾಗಿ ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>