<p><strong>ನವದೆಹಲಿ:</strong> ರಾಜ್ಯಸಭೆಯ 12 ಸಂಸದರ ಅಮಾನತು ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿರೋಧ ಪಕ್ಷಗಳು ಕೇಂದ್ರದ ಈ ನಡೆ 'ಅನಗತ್ಯ ಮತ್ತು ಪ್ರಜಾಪ್ರಭುತ್ವ ವಿರೋಧಿ' ಎಂದು ಬಣ್ಣಿಸಿದ್ದು, ಸದಸ್ಯರು ಯಾವುದೇ ತಪ್ಪು ಮಾಡಿಲ್ಲದಿದ್ದರಿಂದ ಕ್ಷಮೆ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿವೆ.</p>.<p>ಸಂಸತ್ತಿನಲ್ಲಿ ಸಾರ್ವಜನಿಕ ಮಹತ್ವದ ವಿಷಯಗಳನ್ನು ಪ್ರಸ್ತಾಪಿಸದಂತೆ ಕೇಂದ್ರವು ತಮ್ಮನ್ನು ನಿಂದಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.</p>.<p>ಅಮಾನತುಗೊಂಡಿರುವ ಸದಸ್ಯರಿಗೆ ಬೆಂಬಲ ಸೂಚಿಸಿ ಹಲವಾರು ಸಂಸದರು ರಾಜ್ಯಸಭೆಯ ಕಲಾಪನ್ನು ಬಹಿಷ್ಕರಿಸಿ ಸಂಸತ್ತಿನ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಲೋಕಸಭೆಯ ಸಂಸದರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.</p>.<p>ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದ ದಾರಿ ತಪ್ಪಿಸುತ್ತಿದೆ ಮತ್ತು ಉದ್ದೇಶ ಪೂರ್ವಕವಾಗಿ ವಿಪಕ್ಷಗಳ ಧ್ವನಿಯನ್ನು ಅಡಗಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.</p>.<p>ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, 'ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಹಾಗೂ ವಿಪಕ್ಷಗಳಿಗೆ ಉಪದೇಶ ನೀಡುತ್ತಿದೆ' ಎಂದು ದೂರಿದರು.</p>.<p>'ಸಂಸತ್ತಿನ ಕಲಾಪ ಸುಗಮವಾಗಿ ನಡೆಯಬೇಕೆಂದು ನಾವು ಬಯಸುತ್ತೇವೆ. ಆದರೆ ಸರ್ಕಾರ ರಾಜ್ಯಸಭೆಯ 12 ಸದಸ್ಯರನ್ನು ಅಮಾನತು ಮಾಡುವ ಮೂಲಕ ಒತ್ತಾಯಪೂರ್ವಕವಾಗಿ ಅಡಚಣೆ ಉಂಟು ಮಾಡುತ್ತಿದೆ, ಇದು ಸಂವಿಧಾನದ ನಿಯಮಗಳಿಗೆ ವಿರುದ್ಧವಾಗಿದೆ' ಎಂದು ಹೇಳಿದರು.</p>.<p>ರಾಜ್ಯಸಭೆಯ ಕಾಂಗ್ರೆಸ್ ಉಪ ನಾಯಕ ಆನಂದ್ ಶರ್ಮಾ ಮಾತನಾಡಿ, 'ಈ ಪ್ರಜಾಪ್ರಭುತ್ವದಲ್ಲಿ ಸರ್ಕಾರವು ಉದ್ದೇಶಪೂರ್ವಕವಾಗಿ ವಿಪಕ್ಷಗಳ ಧ್ವನಿಯನ್ನು ಮೊಟಕುಗೊಳಿಸುತ್ತಿದೆ. ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳನ್ನು ಎತ್ತುವ ಮೂಲಕ ಸಂಸತ್ತಿನ ಕಲಾಪ ಸುಗಮವಾಗಿ ನಡೆಯಲು ವಿಪಕ್ಷಗಳು ಬಯಸುತ್ತವೆ. ಆದರೆ ಸರ್ಕಾರದ ಈ ನಡೆಯಿಂದ ಈ ಪರಿಸ್ಥಿತಿ ಎದುರಾಗಿದೆ. ಈ ಚಳಿಗಾಲದ ಅಧಿವೇಶನವನ್ನು ಎಂದಿಗೂ ಮರೆಯುವಂತಿಲ್ಲ' ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಜ್ಯಸಭೆಯ 12 ಸಂಸದರ ಅಮಾನತು ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿರೋಧ ಪಕ್ಷಗಳು ಕೇಂದ್ರದ ಈ ನಡೆ 'ಅನಗತ್ಯ ಮತ್ತು ಪ್ರಜಾಪ್ರಭುತ್ವ ವಿರೋಧಿ' ಎಂದು ಬಣ್ಣಿಸಿದ್ದು, ಸದಸ್ಯರು ಯಾವುದೇ ತಪ್ಪು ಮಾಡಿಲ್ಲದಿದ್ದರಿಂದ ಕ್ಷಮೆ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿವೆ.</p>.<p>ಸಂಸತ್ತಿನಲ್ಲಿ ಸಾರ್ವಜನಿಕ ಮಹತ್ವದ ವಿಷಯಗಳನ್ನು ಪ್ರಸ್ತಾಪಿಸದಂತೆ ಕೇಂದ್ರವು ತಮ್ಮನ್ನು ನಿಂದಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.</p>.<p>ಅಮಾನತುಗೊಂಡಿರುವ ಸದಸ್ಯರಿಗೆ ಬೆಂಬಲ ಸೂಚಿಸಿ ಹಲವಾರು ಸಂಸದರು ರಾಜ್ಯಸಭೆಯ ಕಲಾಪನ್ನು ಬಹಿಷ್ಕರಿಸಿ ಸಂಸತ್ತಿನ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಲೋಕಸಭೆಯ ಸಂಸದರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.</p>.<p>ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದ ದಾರಿ ತಪ್ಪಿಸುತ್ತಿದೆ ಮತ್ತು ಉದ್ದೇಶ ಪೂರ್ವಕವಾಗಿ ವಿಪಕ್ಷಗಳ ಧ್ವನಿಯನ್ನು ಅಡಗಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.</p>.<p>ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, 'ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಹಾಗೂ ವಿಪಕ್ಷಗಳಿಗೆ ಉಪದೇಶ ನೀಡುತ್ತಿದೆ' ಎಂದು ದೂರಿದರು.</p>.<p>'ಸಂಸತ್ತಿನ ಕಲಾಪ ಸುಗಮವಾಗಿ ನಡೆಯಬೇಕೆಂದು ನಾವು ಬಯಸುತ್ತೇವೆ. ಆದರೆ ಸರ್ಕಾರ ರಾಜ್ಯಸಭೆಯ 12 ಸದಸ್ಯರನ್ನು ಅಮಾನತು ಮಾಡುವ ಮೂಲಕ ಒತ್ತಾಯಪೂರ್ವಕವಾಗಿ ಅಡಚಣೆ ಉಂಟು ಮಾಡುತ್ತಿದೆ, ಇದು ಸಂವಿಧಾನದ ನಿಯಮಗಳಿಗೆ ವಿರುದ್ಧವಾಗಿದೆ' ಎಂದು ಹೇಳಿದರು.</p>.<p>ರಾಜ್ಯಸಭೆಯ ಕಾಂಗ್ರೆಸ್ ಉಪ ನಾಯಕ ಆನಂದ್ ಶರ್ಮಾ ಮಾತನಾಡಿ, 'ಈ ಪ್ರಜಾಪ್ರಭುತ್ವದಲ್ಲಿ ಸರ್ಕಾರವು ಉದ್ದೇಶಪೂರ್ವಕವಾಗಿ ವಿಪಕ್ಷಗಳ ಧ್ವನಿಯನ್ನು ಮೊಟಕುಗೊಳಿಸುತ್ತಿದೆ. ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳನ್ನು ಎತ್ತುವ ಮೂಲಕ ಸಂಸತ್ತಿನ ಕಲಾಪ ಸುಗಮವಾಗಿ ನಡೆಯಲು ವಿಪಕ್ಷಗಳು ಬಯಸುತ್ತವೆ. ಆದರೆ ಸರ್ಕಾರದ ಈ ನಡೆಯಿಂದ ಈ ಪರಿಸ್ಥಿತಿ ಎದುರಾಗಿದೆ. ಈ ಚಳಿಗಾಲದ ಅಧಿವೇಶನವನ್ನು ಎಂದಿಗೂ ಮರೆಯುವಂತಿಲ್ಲ' ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>