‘ವಿಚಾರಣೆ ಮತ್ತು ದಾಖಲೆಗಳ ಪರಿಶೀಲನೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಪರವಾನಗಿಗಳನ್ನು ಅನರ್ಹ ವ್ಯಕ್ತಿಗಳಿಗೆ ನೀಡುವಲ್ಲಿ ಕೆಲವು ಬಂದೂಕು ವಿತರಕರು, ಅಧಿಕಾರಿಗಳು, ಸಂಬಂಧಪಟ್ಟ ಜಿಲ್ಲೆಗಳ ಅಂದಿನ ಜಿಲ್ಲಾಧಿಕಾರಿ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿಗಳು ಪಾತ್ರ ವಹಿಸಿರುವುದು ಕಂಡುಬಂದಿದೆ. ಪರವಾನಗಿಗಳನ್ನು ಪಡೆದ ವ್ಯಕ್ತಿಗಳು, ಶಸ್ತ್ರಾಸ್ತ್ರ ಪರವಾನಗಿಗಳನ್ನು ನೀಡಿದ ಸ್ಥಳಗಳ ನಿವಾಸಿಗಳಾಗಿರಲಿಲ್ಲ’ ಎಂದು ಸಿಬಿಐ ವಕ್ತಾರ ಆರ್.ಸಿ. ಜೋಶಿ ಅವರೂ ಹೇಳಿಕೆಯಲ್ಲಿ ತಿಳಿಸಿದ್ದಾರೆ.