<p><strong>ನವದೆಹಲಿ:</strong> ದೆಹಲಿ ಮೆಟ್ರೊದ ನೀಲಿ ಮಾರ್ಗದಲ್ಲಿ ಕೇಬಲ್ ಕಳುವಾಗಿರುವುದರಿಂದ ಮೋತಿ ನಗರ ಹಾಗೂ ಕೀರ್ತಿ ನಗರ ನಿಲ್ದಾಣಗಳ ನಡುವೆ ಇಂದು (ಗುರುವಾರ) ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಇದರಿಂದಾಗಿ ಪ್ರಯಾಣಿಕರು ತೀವ್ರವಾಗಿ ಪರದಾಡಿದರು.</p><p>ದ್ವಾರಕಾ ಪ್ರದೇಶವನ್ನು ವೈಶಾಲಿ ಜೊತೆ ಸಂಪರ್ಕಿಸುವ ಹಾಗೂ ನೊಯಿಡಾ ಸಿಟಿ ಸೆಂಟರ್ಗೆ ಕೊಂಡಿಯಾಗಿರುವ ಈ ಮಾರ್ಗವು ದೆಹಲಿ ಮೆಟ್ರೊದಲ್ಲಿ ಅತ್ಯಂತ ಜನದಟ್ಟಣೆಯನ್ನು ಹೊಂದಿದೆ. ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು, ಒಂದು ಲೇನ್ನಲ್ಲಿ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ದೆಹಲಿ ಮೆಟ್ರೊ ರೈಲು ನಿಗಮದ ಅಧಿಕಾರಿಗಳು ಹೇಳಿದ್ದಾರೆ.</p>.<p>ಗುರುವಾರ ಬೆಳಿಗ್ಗೆ ಎಂದಿನಂತೆಯೇ ಮೆಟ್ರೊ ರೈಲು ಸಂಚಾರ ಆರಂಭಗೊಂಡಿತ್ತು. ಆದರೆ ಮೋತಿ ನಗರ ಮತ್ತು ಕೀರ್ತಿ ನಗರ ನಡುವೆ ಸಿಗ್ನಲ್ ಕೇಬಲ್ ಕಳ್ಳತನವಾಗಿರುವ ಮಾಹಿತಿ ಲಭ್ಯವಾಗುತ್ತಿದ್ದಂತೆ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ಈ ನಿಲ್ದಾಣಗಳ ನಡುವೆ ರೈಲು ಕಡಿಮೆ ವೇಗದಲ್ಲಿ ಸಂಚರಿಸುತ್ತದೆ. ಇದರಿಂದ ಪ್ರಯಾಣಿಕರು ಹೆಚ್ಚು ಹೊತ್ತು ಕಾಯಬೇಕಾಗುತ್ತದೆ. ಇದರಿಂದ ನಿಲ್ದಾಣ ಮತ್ತು ರೈಲಿನಲ್ಲಿ ಜನದಟ್ಟಣೆ ಹೆಚ್ಚಾಗಿತ್ತು ಎಂದು ಡಿಎಂಆರ್ಸಿ ಹೇಳಿದೆ. </p><p>‘ರಾಷ್ಟ್ರ ರಾಜಧಾನಿಯಲ್ಲಿ ಯಾವುದೂ ಸುರಕ್ಷಿತವಾಗಿಲ್ಲ’ ಎಂದು ಹೇಳುವ ಮೂಲಕ ಮೆಟ್ರೊ ರೈಲುಗಳ ಕೇಬಲ್ ಕಳ್ಳತನ ಪ್ರಕರಣ ಕುರಿತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಟೀಕಿಸಿದ್ದಾರೆ.</p><p>‘ಅಮಿತ್ ಶಾ ಜೀ, ದೆಹಲಿಯಲ್ಲಿ ಏನು ನಡೆಯುತ್ತಿದೆ? ದೆಹಲಿ ಮೆಟ್ರೊ ಕೇಬಲ್ ಕಳ್ಳತನವಾಗಿದೆ. ಇಲ್ಲಿ ಯಾವುದೂ ಸುರಕ್ಷಿತವಾಗಿಲ್ಲ. ಏನಾದರೂ ಕ್ರಮ ಕೈಗೊಳ್ಳಿ’ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ಮೆಟ್ರೊದ ನೀಲಿ ಮಾರ್ಗದಲ್ಲಿ ಕೇಬಲ್ ಕಳುವಾಗಿರುವುದರಿಂದ ಮೋತಿ ನಗರ ಹಾಗೂ ಕೀರ್ತಿ ನಗರ ನಿಲ್ದಾಣಗಳ ನಡುವೆ ಇಂದು (ಗುರುವಾರ) ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಇದರಿಂದಾಗಿ ಪ್ರಯಾಣಿಕರು ತೀವ್ರವಾಗಿ ಪರದಾಡಿದರು.</p><p>ದ್ವಾರಕಾ ಪ್ರದೇಶವನ್ನು ವೈಶಾಲಿ ಜೊತೆ ಸಂಪರ್ಕಿಸುವ ಹಾಗೂ ನೊಯಿಡಾ ಸಿಟಿ ಸೆಂಟರ್ಗೆ ಕೊಂಡಿಯಾಗಿರುವ ಈ ಮಾರ್ಗವು ದೆಹಲಿ ಮೆಟ್ರೊದಲ್ಲಿ ಅತ್ಯಂತ ಜನದಟ್ಟಣೆಯನ್ನು ಹೊಂದಿದೆ. ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು, ಒಂದು ಲೇನ್ನಲ್ಲಿ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ದೆಹಲಿ ಮೆಟ್ರೊ ರೈಲು ನಿಗಮದ ಅಧಿಕಾರಿಗಳು ಹೇಳಿದ್ದಾರೆ.</p>.<p>ಗುರುವಾರ ಬೆಳಿಗ್ಗೆ ಎಂದಿನಂತೆಯೇ ಮೆಟ್ರೊ ರೈಲು ಸಂಚಾರ ಆರಂಭಗೊಂಡಿತ್ತು. ಆದರೆ ಮೋತಿ ನಗರ ಮತ್ತು ಕೀರ್ತಿ ನಗರ ನಡುವೆ ಸಿಗ್ನಲ್ ಕೇಬಲ್ ಕಳ್ಳತನವಾಗಿರುವ ಮಾಹಿತಿ ಲಭ್ಯವಾಗುತ್ತಿದ್ದಂತೆ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ಈ ನಿಲ್ದಾಣಗಳ ನಡುವೆ ರೈಲು ಕಡಿಮೆ ವೇಗದಲ್ಲಿ ಸಂಚರಿಸುತ್ತದೆ. ಇದರಿಂದ ಪ್ರಯಾಣಿಕರು ಹೆಚ್ಚು ಹೊತ್ತು ಕಾಯಬೇಕಾಗುತ್ತದೆ. ಇದರಿಂದ ನಿಲ್ದಾಣ ಮತ್ತು ರೈಲಿನಲ್ಲಿ ಜನದಟ್ಟಣೆ ಹೆಚ್ಚಾಗಿತ್ತು ಎಂದು ಡಿಎಂಆರ್ಸಿ ಹೇಳಿದೆ. </p><p>‘ರಾಷ್ಟ್ರ ರಾಜಧಾನಿಯಲ್ಲಿ ಯಾವುದೂ ಸುರಕ್ಷಿತವಾಗಿಲ್ಲ’ ಎಂದು ಹೇಳುವ ಮೂಲಕ ಮೆಟ್ರೊ ರೈಲುಗಳ ಕೇಬಲ್ ಕಳ್ಳತನ ಪ್ರಕರಣ ಕುರಿತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಟೀಕಿಸಿದ್ದಾರೆ.</p><p>‘ಅಮಿತ್ ಶಾ ಜೀ, ದೆಹಲಿಯಲ್ಲಿ ಏನು ನಡೆಯುತ್ತಿದೆ? ದೆಹಲಿ ಮೆಟ್ರೊ ಕೇಬಲ್ ಕಳ್ಳತನವಾಗಿದೆ. ಇಲ್ಲಿ ಯಾವುದೂ ಸುರಕ್ಷಿತವಾಗಿಲ್ಲ. ಏನಾದರೂ ಕ್ರಮ ಕೈಗೊಳ್ಳಿ’ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>