<p><strong>ನವದೆಹಲಿ:</strong> ರಾಷ್ಟ್ರದ ರಾಜಧಾನಿಯಲ್ಲಿ ವಾಯು ಮಾಲಿನ್ಯದ ಮಟ್ಟ ಹೆಚ್ಚುತ್ತಿದ್ದರೂ ಸರ್ಕಾರ ಯಾವುದೇ ಕ್ರಮವಹಿಸದಿರುವುದನ್ನು ಖಂಡಿಸಿ ಇಂಡಿಯಾ ಗೇಟ್ ಬಳಿ ಭಾನುವಾರ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 22 ಮಂದಿಯನ್ನು ಬಂಧಿಸಲಾಗಿದೆ. </p><p>ಮಹಿಳೆಯರ ಗೌರವಕ್ಕೆ ಧಕ್ಕೆ ತರುವುದು ಸೇರಿದಂತೆ ಬಿಎನ್ಎಸ್ನ ವಿವಿಧ ಕಲಂಗಳಡಿ ಪೊಲೀಸರು ಸಂಸದ್ ಮಾರ್ಗ ಪೊಲೀಸ್ ಠಾಣೆ ಮತ್ತು ಕರ್ತವ್ಯ ಪಥ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ಗಳನ್ನು ದಾಖಲಿಸಿದ್ದಾರೆ. </p><p>‘ರಸ್ತೆಯಲ್ಲಿ ನಿಂತು ಪ್ರತಿಭಟನೆ ನಡೆಸುತ್ತಿದ್ದರಿಂದ ಆಂಬುಲೆನ್ಸ್ಗಳ ಓಡಾಟ ಮತ್ತು ಆ ರಸ್ತೆಯಲ್ಲಿ ಸಾಗುತ್ತಿದ್ದ ವೈದ್ಯಕೀಯ ಸಿಬ್ಬಂದಿಗೆ ಅಡ್ಡಿ ಉಂಟಾಯಿತು. ಆದ್ದರಿಂದ ಸ್ಥಳವನ್ನು ತೊರೆಯುವಂತೆ ಪ್ರತಿಭಟನಕಾರರಿಗೆ ಸೂಚಿಸಿದೆವು’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದರು.</p><p>‘ನಂತರ ಪರಿಸ್ಥಿತಿ ಸಂಘರ್ಷಕ್ಕೆ ತಿರುಗಿತು. ಕೆಲವು ಪ್ರತಿಭಟನಕಾರರು ನಮ್ಮ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ ಬಳಸಿದರು. ಪೊಲೀಸರ ಕರ್ತವ್ಯಕ್ಕೆ ಈ ರೀತಿ ಅಡ್ಡಿಪಡಿಸುವುದು ಅಪರೂಪ’ ಎಂದು ಹೇಳಿದರು. ಬಂಧಿತರಲ್ಲಿ ಐವರನ್ನು ಎರಡು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. </p><p>ನಗರದಲ್ಲಿ ಗಾಳಿಯ ಗುಣಮಟ್ಟ ಹದಗೆಡುತ್ತಿರುವುದು ಸಾರ್ವಜನಿಕ ಆರೋಗ್ಯಕ್ಕೆ ‘ಗಂಭೀರ ಅಪಾಯ’ ಉಂಟುಮಾಡಿದೆ. ಮಾಲಿನ್ಯದ ಮೂಲ ಕಾರಣಗಳನ್ನು ಪತ್ತೆಹಚ್ಚಿ, ಪರಿಹರಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಪ್ರತಿಭಟನೆ ನಡೆಸಿದ ‘ದೆಹಲಿ ಕೋ–ಆರ್ಡಿನೇಷನ್ ಕಮಿಟಿ’ ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರದ ರಾಜಧಾನಿಯಲ್ಲಿ ವಾಯು ಮಾಲಿನ್ಯದ ಮಟ್ಟ ಹೆಚ್ಚುತ್ತಿದ್ದರೂ ಸರ್ಕಾರ ಯಾವುದೇ ಕ್ರಮವಹಿಸದಿರುವುದನ್ನು ಖಂಡಿಸಿ ಇಂಡಿಯಾ ಗೇಟ್ ಬಳಿ ಭಾನುವಾರ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 22 ಮಂದಿಯನ್ನು ಬಂಧಿಸಲಾಗಿದೆ. </p><p>ಮಹಿಳೆಯರ ಗೌರವಕ್ಕೆ ಧಕ್ಕೆ ತರುವುದು ಸೇರಿದಂತೆ ಬಿಎನ್ಎಸ್ನ ವಿವಿಧ ಕಲಂಗಳಡಿ ಪೊಲೀಸರು ಸಂಸದ್ ಮಾರ್ಗ ಪೊಲೀಸ್ ಠಾಣೆ ಮತ್ತು ಕರ್ತವ್ಯ ಪಥ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ಗಳನ್ನು ದಾಖಲಿಸಿದ್ದಾರೆ. </p><p>‘ರಸ್ತೆಯಲ್ಲಿ ನಿಂತು ಪ್ರತಿಭಟನೆ ನಡೆಸುತ್ತಿದ್ದರಿಂದ ಆಂಬುಲೆನ್ಸ್ಗಳ ಓಡಾಟ ಮತ್ತು ಆ ರಸ್ತೆಯಲ್ಲಿ ಸಾಗುತ್ತಿದ್ದ ವೈದ್ಯಕೀಯ ಸಿಬ್ಬಂದಿಗೆ ಅಡ್ಡಿ ಉಂಟಾಯಿತು. ಆದ್ದರಿಂದ ಸ್ಥಳವನ್ನು ತೊರೆಯುವಂತೆ ಪ್ರತಿಭಟನಕಾರರಿಗೆ ಸೂಚಿಸಿದೆವು’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದರು.</p><p>‘ನಂತರ ಪರಿಸ್ಥಿತಿ ಸಂಘರ್ಷಕ್ಕೆ ತಿರುಗಿತು. ಕೆಲವು ಪ್ರತಿಭಟನಕಾರರು ನಮ್ಮ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ ಬಳಸಿದರು. ಪೊಲೀಸರ ಕರ್ತವ್ಯಕ್ಕೆ ಈ ರೀತಿ ಅಡ್ಡಿಪಡಿಸುವುದು ಅಪರೂಪ’ ಎಂದು ಹೇಳಿದರು. ಬಂಧಿತರಲ್ಲಿ ಐವರನ್ನು ಎರಡು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. </p><p>ನಗರದಲ್ಲಿ ಗಾಳಿಯ ಗುಣಮಟ್ಟ ಹದಗೆಡುತ್ತಿರುವುದು ಸಾರ್ವಜನಿಕ ಆರೋಗ್ಯಕ್ಕೆ ‘ಗಂಭೀರ ಅಪಾಯ’ ಉಂಟುಮಾಡಿದೆ. ಮಾಲಿನ್ಯದ ಮೂಲ ಕಾರಣಗಳನ್ನು ಪತ್ತೆಹಚ್ಚಿ, ಪರಿಹರಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಪ್ರತಿಭಟನೆ ನಡೆಸಿದ ‘ದೆಹಲಿ ಕೋ–ಆರ್ಡಿನೇಷನ್ ಕಮಿಟಿ’ ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>