<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಹೆಚ್ಚಳವಾಗಿರುವ ಕಾರಣ ಆನ್ಲೈನ್ ಮೂಲಕ (ವರ್ಚುವಲ್) ಅರ್ಜಿಗಳ ವಿಚಾರಣೆ ನಡೆಸುವ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಅವರು ಒಲವು ವ್ಯಕ್ತಪಡಿಸಿದ್ದಾರೆ.</p>.<p>‘ಹಿಂದಿನ ದಿನ ಒಂದು ತಾಸು ವಾಯುವಿಹಾರ ಮಾಡಿದ ನಂತರ ಅನಾರೋಗ್ಯ ಉಂಟಾಗಿದೆ’ ಎಂದು ಅವರು ಹೇಳಿದರು.</p>.<p>60 ವರ್ಷಕ್ಕಿಂತ ಮೇಲ್ಪಟ್ಟ ವಕೀಲರ ಪ್ರಕರಣಗಳನ್ನು ವರ್ಚುವಲ್ ಮೂಲಕ ವಿಚಾರಣೆ ನಡೆಸಲು ಅವಕಾಶ ನೀಡುವ ಆಲೋಚನೆಯೂ ಇದೆ. ವಕೀಲರ ಸಂಘದ ಜೊತೆ ಸಮಾಲೋಚನೆ ನಡೆಸಿದ ಬಳಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. </p>.<p>ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತಿತರ ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ವೇಳೆ ಸಿಜೆಐ ಈ ವಿಚಾರ ತಿಳಿಸಿದರು.</p>.<p>ಆಯೋಗದ ಪರ ಹಾಜರಿದ್ದ ವಕೀಲ ರಾಕೇಶ್ ದ್ವಿವೇದಿ ಅವರು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿದರು. ಹಿರಿಯ ವಕೀಲ ಕಪಿಲ್ ಸಿಬಲ್ ಅವರೂ, ‘ಈ ವಯಸ್ಸಿನಲ್ಲಿ ನಾವು ವಿಷಯುಕ್ತ ಗಾಳಿ ಸೇವಿಸುತ್ತಿದ್ದೇವೆ’ ಎಂದರು.</p>.<p>ಆಗ ಸಿಜೆಐ ಅವರು, ‘ವಕೀಲರು ಮತ್ತು ಕಕ್ಷಿದಾರರಿಗೆ ಎದುರಾಗುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ವಕೀಲರ ಸಂಘದ ಸದಸ್ಯರೊಂದಿಗೆ ಸಮಾಲೋಚಿಸಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳೋಣ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಹೆಚ್ಚಳವಾಗಿರುವ ಕಾರಣ ಆನ್ಲೈನ್ ಮೂಲಕ (ವರ್ಚುವಲ್) ಅರ್ಜಿಗಳ ವಿಚಾರಣೆ ನಡೆಸುವ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಅವರು ಒಲವು ವ್ಯಕ್ತಪಡಿಸಿದ್ದಾರೆ.</p>.<p>‘ಹಿಂದಿನ ದಿನ ಒಂದು ತಾಸು ವಾಯುವಿಹಾರ ಮಾಡಿದ ನಂತರ ಅನಾರೋಗ್ಯ ಉಂಟಾಗಿದೆ’ ಎಂದು ಅವರು ಹೇಳಿದರು.</p>.<p>60 ವರ್ಷಕ್ಕಿಂತ ಮೇಲ್ಪಟ್ಟ ವಕೀಲರ ಪ್ರಕರಣಗಳನ್ನು ವರ್ಚುವಲ್ ಮೂಲಕ ವಿಚಾರಣೆ ನಡೆಸಲು ಅವಕಾಶ ನೀಡುವ ಆಲೋಚನೆಯೂ ಇದೆ. ವಕೀಲರ ಸಂಘದ ಜೊತೆ ಸಮಾಲೋಚನೆ ನಡೆಸಿದ ಬಳಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. </p>.<p>ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತಿತರ ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ವೇಳೆ ಸಿಜೆಐ ಈ ವಿಚಾರ ತಿಳಿಸಿದರು.</p>.<p>ಆಯೋಗದ ಪರ ಹಾಜರಿದ್ದ ವಕೀಲ ರಾಕೇಶ್ ದ್ವಿವೇದಿ ಅವರು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿದರು. ಹಿರಿಯ ವಕೀಲ ಕಪಿಲ್ ಸಿಬಲ್ ಅವರೂ, ‘ಈ ವಯಸ್ಸಿನಲ್ಲಿ ನಾವು ವಿಷಯುಕ್ತ ಗಾಳಿ ಸೇವಿಸುತ್ತಿದ್ದೇವೆ’ ಎಂದರು.</p>.<p>ಆಗ ಸಿಜೆಐ ಅವರು, ‘ವಕೀಲರು ಮತ್ತು ಕಕ್ಷಿದಾರರಿಗೆ ಎದುರಾಗುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ವಕೀಲರ ಸಂಘದ ಸದಸ್ಯರೊಂದಿಗೆ ಸಮಾಲೋಚಿಸಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳೋಣ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>