<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದ ಮಟ್ಟ ಗಣನೀಯವಾಗಿ ಏರಿಕೆಯಾದ ಕಾರಣ, 11ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಹೈಬ್ರಿಡ್ ಮಾದರಿಯಲ್ಲಿ ತರಗತಿಗಳನ್ನು ನಡೆಸುವಂತೆ ದೆಹಲಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. </p><p>ಕೇಂದ್ರ ಸರ್ಕಾರವು ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆಯ (ಜಿಆರ್ಎಪಿ) 4ನೇ ಹಂತದ ಅಡಿಯಲ್ಲಿ ಮಾಲಿನ್ಯ ವಿರೋಧಿ ನಿರ್ಬಂಧಗಳನ್ನು ಜಾರಿಗೆ ತಂದ ನಂತರ ಈ ಆದೇಶ ಬಂದಿದೆ.</p><p>ಶಿಕ್ಷಣ ನಿರ್ದೇಶನಾಲಯ, ಎನ್ಡಿಎಂಸಿ, ಎಂಸಿಡಿ ಮತ್ತು ದೆಹಲಿ ಕಂಟೋನ್ಮೆಂಟ್ ಮಂಡಳಿಯ ಅಡಿಯಲ್ಲಿ ಬರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಮಾನ್ಯತೆ ಪಡೆದ ಖಾಸಗಿ ಶಾಲೆಗಳು ಮುಂದಿನ ಆದೇಶದವರೆಗೆ ಭೌತಿಕವಾಗಿ ಮತ್ತು ಸಾಧ್ಯವಿರುವಲ್ಲಿ ಆನ್ಲೈನ್ ತರಗತಿಗಳನ್ನು ನಡೆಸುವಂತೆ ಸರ್ಕಾರ ಆದೇಶಿಸಿದೆ. </p><p>ದೆಹಲಿಯ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಶನಿವಾರ 431ಕ್ಕೆ ಏರಿಕೆಯಾಗಿದೆ. ಇದರ ನಂತರ ಕೇಂದ್ರ ಸರ್ಕಾರ ಜಿಆರ್ಎಪಿ 4ನೇ ಹಂತದ ನಿರ್ಬಂಧಗಳನ್ನು ಜಾರಿಗೆ ತರಲು ನಿರ್ಧರಿಸಿದೆ.</p><p>ನಗರವು ಸಂಪೂರ್ಣವಾಗಿ ಕಲುಷಿತ ಗಾಳಿಯಿಂದ ಆವೃತವಾಗಿದ್ದು, ಗೋಚರತೆಯ ಪ್ರಮಾಣವು ತೀವ್ರವಾಗಿ ಕುಸಿದಿದೆ. ಎಕ್ಯುಐ (ವಾಯು ಗುಣಮಟ್ಟ ಸೂಚ್ಯಂಕ) ಇಂದು (ಭಾನುವಾರ) ಬೆಳಿಗ್ಗೆ 491ರಷ್ಟು (400ರಿಂದ 500 ತೀವ್ರ ಕಳಪೆ) ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದ ಮಟ್ಟ ಗಣನೀಯವಾಗಿ ಏರಿಕೆಯಾದ ಕಾರಣ, 11ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಹೈಬ್ರಿಡ್ ಮಾದರಿಯಲ್ಲಿ ತರಗತಿಗಳನ್ನು ನಡೆಸುವಂತೆ ದೆಹಲಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. </p><p>ಕೇಂದ್ರ ಸರ್ಕಾರವು ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆಯ (ಜಿಆರ್ಎಪಿ) 4ನೇ ಹಂತದ ಅಡಿಯಲ್ಲಿ ಮಾಲಿನ್ಯ ವಿರೋಧಿ ನಿರ್ಬಂಧಗಳನ್ನು ಜಾರಿಗೆ ತಂದ ನಂತರ ಈ ಆದೇಶ ಬಂದಿದೆ.</p><p>ಶಿಕ್ಷಣ ನಿರ್ದೇಶನಾಲಯ, ಎನ್ಡಿಎಂಸಿ, ಎಂಸಿಡಿ ಮತ್ತು ದೆಹಲಿ ಕಂಟೋನ್ಮೆಂಟ್ ಮಂಡಳಿಯ ಅಡಿಯಲ್ಲಿ ಬರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಮಾನ್ಯತೆ ಪಡೆದ ಖಾಸಗಿ ಶಾಲೆಗಳು ಮುಂದಿನ ಆದೇಶದವರೆಗೆ ಭೌತಿಕವಾಗಿ ಮತ್ತು ಸಾಧ್ಯವಿರುವಲ್ಲಿ ಆನ್ಲೈನ್ ತರಗತಿಗಳನ್ನು ನಡೆಸುವಂತೆ ಸರ್ಕಾರ ಆದೇಶಿಸಿದೆ. </p><p>ದೆಹಲಿಯ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಶನಿವಾರ 431ಕ್ಕೆ ಏರಿಕೆಯಾಗಿದೆ. ಇದರ ನಂತರ ಕೇಂದ್ರ ಸರ್ಕಾರ ಜಿಆರ್ಎಪಿ 4ನೇ ಹಂತದ ನಿರ್ಬಂಧಗಳನ್ನು ಜಾರಿಗೆ ತರಲು ನಿರ್ಧರಿಸಿದೆ.</p><p>ನಗರವು ಸಂಪೂರ್ಣವಾಗಿ ಕಲುಷಿತ ಗಾಳಿಯಿಂದ ಆವೃತವಾಗಿದ್ದು, ಗೋಚರತೆಯ ಪ್ರಮಾಣವು ತೀವ್ರವಾಗಿ ಕುಸಿದಿದೆ. ಎಕ್ಯುಐ (ವಾಯು ಗುಣಮಟ್ಟ ಸೂಚ್ಯಂಕ) ಇಂದು (ಭಾನುವಾರ) ಬೆಳಿಗ್ಗೆ 491ರಷ್ಟು (400ರಿಂದ 500 ತೀವ್ರ ಕಳಪೆ) ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>