<p><strong>ನವದೆಹಲಿ</strong>: ನವೆಂಬರ್ 27ರಿಂದ ಸಿಎನ್ಜಿ ಹಾಗೂ ಎಲೆಕ್ಟ್ರಿಕ್ ವಾಹನಗಳಿಗೆ ಮಾತ್ರ ನಗರದೊಳಗೆ ಪ್ರವೇಶಿಸಲು ಅನುಮತಿ ನೀಡಲಾಗುವುದು ಎಂದು ದೆಹಲಿ ಸರ್ಕಾರ ಬುಧವಾರ ಹೇಳಿದೆ.</p>.<p>ಉಳಿದ ವಾಹನಗಳ ಪ್ರವೇಶವನ್ನು ಡಿಸೆಂಬರ್ 3ರ ವರೆಗೆ ನಿಷೇಧಿಸಲಾಗುವುದು ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.</p>.<p>ಇದರ ಜೊತೆಗೆ, ರಾಷ್ಟ್ರ ರಾಜಧಾನಿಯಲ್ಲಿ ಶಾಲಾ–ಕಾಲೇಜುಗಳು ಮತ್ತು ಎಲ್ಲಾ ಸರ್ಕಾರಿ ಕಚೇರಿಗಳು ನವೆಂಬರ್ 29 ರಂದು ಮತ್ತೆ ತೆರೆಯಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ಮಾಲಿನ್ಯವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸರ್ಕಾರಿ ಸಿಬ್ಬಂದಿಗೆ ರೈ ಸೂಚಿಸಿದ್ದಾರೆ. ನೌಕರರಿಗಾಗಿ ವಿಶೇಷ ಬಸ್ಗಳನ್ನು ನಿಯೋಜಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.</p>.<p>ದೆಹಲಿಯಲ್ಲಿ ಶಾಲೆ, ಕಾಲೇಜು ಮತ್ತು ಇತರೆ ಶೈಕ್ಷಣಿಕ ಸಂಸ್ಥೆಗಳ ಭೌತಿಕ ತರಗತಿಗಳನ್ನು ಬಂದ್ ಮಾಡುವಂತೆ ವಾಯು ಗುಣಮಟ್ಟ ನಿರ್ವಹಣಾ ಸಮಿತಿ(ಸಿಎಕ್ಯುಎಂ) ನವೆಂಬರ್ 17ರಂದು ನಿರ್ದೇಶನ ನೀಡಿತ್ತು.</p>.<p>ಅಗತ್ಯ ಸೇವೆಗಳನ್ನು ಹೊರತುಪಡಿಸಿ ದೆಹಲಿಯ ಎಲ್ಲ ಸರ್ಕಾರಿ ಕಚೇರಿಗಳು, ಸ್ವಾಯತ್ತ ಸಂಸ್ಥೆಗಳ ನೌಕರರಿಗೆ ವರ್ಕ್ ಫ್ರಂ ಹೋಮ್ ನೀಡಲಾಗಿತ್ತು.</p>.<p>ವಾಯುಮಾಲಿನ್ಯ ತಡೆಯುವ ನಿಟ್ಟಿನಲ್ಲಿ ದೆಹಲಿ ಮತ್ತು ಎನ್ಸಿಆರ್ ವ್ಯಾಪ್ತಿಯ ರಾಜ್ಯಗಳಿಗೆ ನವೆಂಬರ್ 21ರವರೆಗೆ ಕಟ್ಟಡ ಕಾಮಗಾರಿ, ಕಟ್ಟಡ ತೆರವು ಕಾರ್ಯಾಚರಣೆಗಳನ್ನು ನಡೆಸದಂತೆ ಸಮಿತಿ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನವೆಂಬರ್ 27ರಿಂದ ಸಿಎನ್ಜಿ ಹಾಗೂ ಎಲೆಕ್ಟ್ರಿಕ್ ವಾಹನಗಳಿಗೆ ಮಾತ್ರ ನಗರದೊಳಗೆ ಪ್ರವೇಶಿಸಲು ಅನುಮತಿ ನೀಡಲಾಗುವುದು ಎಂದು ದೆಹಲಿ ಸರ್ಕಾರ ಬುಧವಾರ ಹೇಳಿದೆ.</p>.<p>ಉಳಿದ ವಾಹನಗಳ ಪ್ರವೇಶವನ್ನು ಡಿಸೆಂಬರ್ 3ರ ವರೆಗೆ ನಿಷೇಧಿಸಲಾಗುವುದು ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.</p>.<p>ಇದರ ಜೊತೆಗೆ, ರಾಷ್ಟ್ರ ರಾಜಧಾನಿಯಲ್ಲಿ ಶಾಲಾ–ಕಾಲೇಜುಗಳು ಮತ್ತು ಎಲ್ಲಾ ಸರ್ಕಾರಿ ಕಚೇರಿಗಳು ನವೆಂಬರ್ 29 ರಂದು ಮತ್ತೆ ತೆರೆಯಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ಮಾಲಿನ್ಯವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸರ್ಕಾರಿ ಸಿಬ್ಬಂದಿಗೆ ರೈ ಸೂಚಿಸಿದ್ದಾರೆ. ನೌಕರರಿಗಾಗಿ ವಿಶೇಷ ಬಸ್ಗಳನ್ನು ನಿಯೋಜಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.</p>.<p>ದೆಹಲಿಯಲ್ಲಿ ಶಾಲೆ, ಕಾಲೇಜು ಮತ್ತು ಇತರೆ ಶೈಕ್ಷಣಿಕ ಸಂಸ್ಥೆಗಳ ಭೌತಿಕ ತರಗತಿಗಳನ್ನು ಬಂದ್ ಮಾಡುವಂತೆ ವಾಯು ಗುಣಮಟ್ಟ ನಿರ್ವಹಣಾ ಸಮಿತಿ(ಸಿಎಕ್ಯುಎಂ) ನವೆಂಬರ್ 17ರಂದು ನಿರ್ದೇಶನ ನೀಡಿತ್ತು.</p>.<p>ಅಗತ್ಯ ಸೇವೆಗಳನ್ನು ಹೊರತುಪಡಿಸಿ ದೆಹಲಿಯ ಎಲ್ಲ ಸರ್ಕಾರಿ ಕಚೇರಿಗಳು, ಸ್ವಾಯತ್ತ ಸಂಸ್ಥೆಗಳ ನೌಕರರಿಗೆ ವರ್ಕ್ ಫ್ರಂ ಹೋಮ್ ನೀಡಲಾಗಿತ್ತು.</p>.<p>ವಾಯುಮಾಲಿನ್ಯ ತಡೆಯುವ ನಿಟ್ಟಿನಲ್ಲಿ ದೆಹಲಿ ಮತ್ತು ಎನ್ಸಿಆರ್ ವ್ಯಾಪ್ತಿಯ ರಾಜ್ಯಗಳಿಗೆ ನವೆಂಬರ್ 21ರವರೆಗೆ ಕಟ್ಟಡ ಕಾಮಗಾರಿ, ಕಟ್ಟಡ ತೆರವು ಕಾರ್ಯಾಚರಣೆಗಳನ್ನು ನಡೆಸದಂತೆ ಸಮಿತಿ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>