<p><strong>ನವದೆಹಲಿ:</strong> ದೆಹಲಿ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಚುನಾವಣಾ ಕಾವು ರಂಗೇರುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಚುನಾವಣೆ ಪ್ರಯುಕ್ತ ಬಿಜೆಪಿ ಇಂದು (ಭಾನುವಾರ) ‘ದಿಲ್ ವಾಲೋ ಕಿ ದೆಹಲಿ ಕೋ ಅಬ್ ಬಿಜೆಪಿ ಸರ್ಕಾರ್ ಚಾಹಿಯೇ’ (ಹೃದಯವಂತ ದೆಹಲಿ ಜನರಿಗೆ ಬಿಜೆಪಿ ಸರ್ಕಾರ ಬೇಕು) ಎಂಬ ಹೊಸ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದೆ.</p><p>ಬಿಜೆಪಿ ಸಂಸದ ಮನೋಜ್ ತಿವಾರಿ ಅವರು ದೆಹಲಿ ವಿಧಾನಸಭೆ ಚುನಾವಣೆ ಪ್ರಯುಕ್ತ ಪಕ್ಷದ ನಾಲ್ಕನೇ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದ್ದಾರೆ. </p><p>ಹಿರಿಯ ಬಿಜೆಪಿ ನಾಯಕ ನೀಲ್ ಕಾಂತ್ ಬಕ್ಷಿ ಅವರ ಸಂಗೀತ ನಿರ್ದೇಶನವಿರುವ ‘ದಿಲ್ ವಾಲೋ ಕಿ ದಿಲ್ಲಿ ಕೋ ಅಬ್ ಬಿಜೆಪಿ ಸರ್ಕಾರ್ ಚಾಹಿಯೇ’ ಹಾಡನ್ನು ಮಾಜಿ ಸಂಸದ ದಿನೇಶ್ ಲಾಲ್ ಯಾದವ್ ಹಾಡಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿದ ತಿವಾರಿ, ‘ದೆಹಲಿಯ ನಿವಾಸಿಗಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮತ್ತೊಂದು ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದ್ದೇವೆ. ಜತೆಗೆ, ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿರುವ ಎಲ್ಲಾ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದೆ’ ಎಂದು ತಿಳಿಸಿದ್ದಾರೆ. </p><p>‘ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಯಾವ ಭರವಸೆಗಳನ್ನು ಉಲ್ಲೇಖಿಸಲಾಗಿದೆಯೋ ಅದನ್ನು ಈಗಾಗಲೇ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಜಾರಿಗೊಳಿಸಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ. </p><p>‘ನಿನ್ನೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2025-26 ಸಾಲಿನ ಬಜೆಟ್ನಲ್ಲಿ ಮಧ್ಯಮ ವರ್ಗದ ಬಹುನಿರೀಕ್ಷಿತ ಆದಾಯ ತೆರಿಗೆ ರಿಯಾಯಿತಿಗೆ ಸ್ಪಂದನೆ ಸಿಕ್ಕಿದ್ದು, ₹12 ಲಕ್ಷದ ವರೆಗಿನ ಆದಾಯ ತೆರಿಗೆಗೆ (ಕ್ಯಾಪಿಟಲ್ ಗೇನ್ ಹೊರತಾಗಿ) ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಬಿಜೆಪಿ ಜನರ ಪರ ಇದೆ ಎಂಬುದಕ್ಕೆ ಇದುವೇ ಸಾಕ್ಷಿ’ ಎಂದು ತಿವಾರಿ ತಿಳಿಸಿದ್ದಾರೆ. </p><p>70 ಸದಸ್ಯ ಬಲದ ದೆಹಲಿಯಲ್ಲಿ ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಫೆ.8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಚುನಾವಣಾ ಕಾವು ರಂಗೇರುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಚುನಾವಣೆ ಪ್ರಯುಕ್ತ ಬಿಜೆಪಿ ಇಂದು (ಭಾನುವಾರ) ‘ದಿಲ್ ವಾಲೋ ಕಿ ದೆಹಲಿ ಕೋ ಅಬ್ ಬಿಜೆಪಿ ಸರ್ಕಾರ್ ಚಾಹಿಯೇ’ (ಹೃದಯವಂತ ದೆಹಲಿ ಜನರಿಗೆ ಬಿಜೆಪಿ ಸರ್ಕಾರ ಬೇಕು) ಎಂಬ ಹೊಸ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದೆ.</p><p>ಬಿಜೆಪಿ ಸಂಸದ ಮನೋಜ್ ತಿವಾರಿ ಅವರು ದೆಹಲಿ ವಿಧಾನಸಭೆ ಚುನಾವಣೆ ಪ್ರಯುಕ್ತ ಪಕ್ಷದ ನಾಲ್ಕನೇ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದ್ದಾರೆ. </p><p>ಹಿರಿಯ ಬಿಜೆಪಿ ನಾಯಕ ನೀಲ್ ಕಾಂತ್ ಬಕ್ಷಿ ಅವರ ಸಂಗೀತ ನಿರ್ದೇಶನವಿರುವ ‘ದಿಲ್ ವಾಲೋ ಕಿ ದಿಲ್ಲಿ ಕೋ ಅಬ್ ಬಿಜೆಪಿ ಸರ್ಕಾರ್ ಚಾಹಿಯೇ’ ಹಾಡನ್ನು ಮಾಜಿ ಸಂಸದ ದಿನೇಶ್ ಲಾಲ್ ಯಾದವ್ ಹಾಡಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿದ ತಿವಾರಿ, ‘ದೆಹಲಿಯ ನಿವಾಸಿಗಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮತ್ತೊಂದು ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದ್ದೇವೆ. ಜತೆಗೆ, ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿರುವ ಎಲ್ಲಾ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದೆ’ ಎಂದು ತಿಳಿಸಿದ್ದಾರೆ. </p><p>‘ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಯಾವ ಭರವಸೆಗಳನ್ನು ಉಲ್ಲೇಖಿಸಲಾಗಿದೆಯೋ ಅದನ್ನು ಈಗಾಗಲೇ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಜಾರಿಗೊಳಿಸಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ. </p><p>‘ನಿನ್ನೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2025-26 ಸಾಲಿನ ಬಜೆಟ್ನಲ್ಲಿ ಮಧ್ಯಮ ವರ್ಗದ ಬಹುನಿರೀಕ್ಷಿತ ಆದಾಯ ತೆರಿಗೆ ರಿಯಾಯಿತಿಗೆ ಸ್ಪಂದನೆ ಸಿಕ್ಕಿದ್ದು, ₹12 ಲಕ್ಷದ ವರೆಗಿನ ಆದಾಯ ತೆರಿಗೆಗೆ (ಕ್ಯಾಪಿಟಲ್ ಗೇನ್ ಹೊರತಾಗಿ) ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಬಿಜೆಪಿ ಜನರ ಪರ ಇದೆ ಎಂಬುದಕ್ಕೆ ಇದುವೇ ಸಾಕ್ಷಿ’ ಎಂದು ತಿವಾರಿ ತಿಳಿಸಿದ್ದಾರೆ. </p><p>70 ಸದಸ್ಯ ಬಲದ ದೆಹಲಿಯಲ್ಲಿ ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಫೆ.8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>