<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ವಿಧಾನಸಭೆ ಚುನಾವಣೆ ಮೇಲೆ ಪರಿಣಾಮ ಬೀರಲು ಬಿಜೆಪಿಯು ಗೂಂಡಾಗಳನ್ನು ಹಾಗೂ ಪೊಲೀಸರನ್ನು ಬಳಸಿಕೊಳ್ಳಲು ಯತ್ನಿಸುತ್ತಿದೆ. ಅವರ ದುಷ್ಕೃತ್ಯಗಳನ್ನು ಸೆರೆಹಿಡಿಯಲು ಸ್ಪೈ ಕ್ಯಾಮೆರಾಗಳೊಂದಿಗೆ ತಂಡ ನಿಯೋಜಿಸಿದ್ದೇವೆ ಎಂದು ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.</p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆದು, 8ರಂದು ಫಲಿತಾಂಶ ಪ್ರಕಟವಾಗಲಿದೆ. 699 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಎಪಿಯು ಸತತ ಮೂರನೇ ಅವಧಿಗೆ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದೆ.</p><p>ಬಹಿರಂಗ ಪ್ರಚಾರದ ಕೊನೇ ದಿನವಾದ ಇಂದು ವಿಡಿಯೊ ಸಂದೇಶ ಹಂಚಿಕೊಂಡಿರುವ ಕೇಜ್ರಿವಾಲ್, 'ಹೀನಾಯ ಸೋಲಿನತ್ತ ಮುಖ ಮಾಡಿರುವ ಬಿಜೆಪಿ, ತಂತ್ರಗಾರಿಕೆಯ ಮೊರೆ ಹೋಗಿದೆ. ಅದರ ಹೊರತಾಗಿಯೂ ಎಎಪಿ ಐತಿಹಾಸಿಕ ಗೆಲುವು ಸಾಧಿಸಲಿದೆ' ಎಂದು ಹೇಳಿದ್ದಾರೆ.</p><p>'ಬಿಜೆಪಿಯು ಚುನಾವಣೆಯನ್ನು ಗೆಲ್ಲಲು ಗೂಂಡಾಗಳನ್ನು, ದೆಹಲಿ ಪೊಲೀಸರನ್ನು ಭಾರಿ ಪ್ರಮಾಣದಲ್ಲಿ ಬಳಸುತ್ತದೆ. ಅವರು ಮತದಾರರನ್ನು ಅದರಲ್ಲೂ ಕೊಳಗೇರಿಗಳ ನಿವಾಸಿಗಳನ್ನು ಬೆದರಿಸಲು ಪ್ರಯತ್ನಿಸುತ್ತಾರೆ' ಎಂದು ದೂರಿದ್ದಾರೆ.</p><p>ದೆಹಲಿಯ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕೇಜ್ರಿವಾಲ್, 'ಬಿಜೆಪಿ ಕಾರ್ಯಕರ್ತರು ಕೊಳಗೇರಿ ಹಾಗೂ ಆರ್ಥಿಕವಾಗಿ ಹಿಂದುಳಿದ ಜನರಿಗೆ ₹ 3,000ರಿಂದ ₹ 5,000 ಆಮಿಷ ಒಡ್ಡುತ್ತಿದ್ದಾರೆ. ಬೆರಳಿಗೆ ಶಾಯಿ ಹಾಕಿ ಅವರನ್ನು ಮತದಾನದಿಂದ ದೂರ ಉಳಿಯುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ' ಎಂಬುದಾಗಿ ಆರೋಪಿಸಿದ್ದಾರೆ.</p>.Delhi Elections 205 | ದೆಹಲಿಯಲ್ಲಿ ಎಎಪಿ ವಿರೋಧಿ ಅಲೆ: ಅಮಿತ್ ಶಾ.Delhi Election | ಬಿಜೆಪಿ ಗೂಂಡಾಗಿರಿಯಲ್ಲಿ ತೊಡಗಿದೆ: ಕೇಜ್ರಿವಾಲ್ ವಾಗ್ದಾಳಿ.<p>ಕೇಜ್ರಿವಾಲ್ ಅವರು, ಯಾವುದೇ ಪಕ್ಷದ ಹೆಸರು ಉಲ್ಲೇಖಿಸದೆ ವಿರೋಧ ಪಕ್ಷಗಳ ವಿರುದ್ಧ ಕಿಡಿಕಾರುತ್ತಾ ಇಂಥದೇ ಆರೋಪವನ್ನು ಭಾನುವಾರವೂ ಮಾಡಿದ್ದರು. ಇಂದು ಬಿಜೆಪಿಯನ್ನು ಗುರಿಯಾಗಿಸಿ ಟೀಕಿಸಿದ್ದಾರೆ.</p><p>'ಹಣ ಕೊಟ್ಟರೆ ಪಡೆಯಿರಿ. ಆದರೆ, ನಿಮ್ಮ ಬೆರಳಿಗೆ ಶಾಯಿ ಹಾಕಿಸಿಕೊಳ್ಳಬೇಡಿ' ಎಂದು ಕಿವಿಮಾತು ಹೇಳಿರುವ ಕೇಜ್ರಿವಾಲ್, 'ಎಎಪಿಯು ಕ್ಷಿಪ್ರ ಕಾರ್ಯ ಪಡೆಗಳನ್ನು ನಿಯೋಜಿಸಿದೆ. ಬಿಜೆಪಿಯ ಗೂಂಡಾಗಳು ಅಕ್ರಮವೆಸಗುವುದನ್ನು ಸೆರೆ ಹಿಡಿಯಲು ಕೊಳಗೇರಿಗಳಲ್ಲಿ ಸ್ಪೈ ಕ್ಯಾಮೆರಾ ಹಾಗೂ ಬಾಡಿ ಕ್ಯಾಮೆರಾಗಳನ್ನು ವಿತರಿಸಿದೆ' ಎಂದು ತಿಳಿಸಿದ್ದಾರೆ.</p><p>ಬಿಜೆಪಿಯ ದೃಷ್ಕೃತ್ಯಗಳ ವಿರುದ್ಧ ಜನರಿಗೆ ಎಚ್ಚರಿಕೆ ನೀಡಿರುವ ಅವರು, 'ಬಿಜೆಪಿ ಅಧಿಕಾರಕ್ಕೇರಿದರೆ ಕೊಳಗೇರಿಗಳನ್ನು ನಾಶ ಮಾಡಲಿದೆ' ಎಂದು ಆರೋಪಿಸಿದ್ದಾರೆ. ಹಾಗೆಯೇ, 'ಮತಗಳನ್ನು ಮಾರಿಕೊಳ್ಳುವುದು, ನೀವು ನಿಮ್ಮದೇ ಡೆತ್ ವಾರಂಟ್ಗೆ ಸಹಿ ಮಾಡಿದಂತೆ' ಎಂದು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ವಿಧಾನಸಭೆ ಚುನಾವಣೆ ಮೇಲೆ ಪರಿಣಾಮ ಬೀರಲು ಬಿಜೆಪಿಯು ಗೂಂಡಾಗಳನ್ನು ಹಾಗೂ ಪೊಲೀಸರನ್ನು ಬಳಸಿಕೊಳ್ಳಲು ಯತ್ನಿಸುತ್ತಿದೆ. ಅವರ ದುಷ್ಕೃತ್ಯಗಳನ್ನು ಸೆರೆಹಿಡಿಯಲು ಸ್ಪೈ ಕ್ಯಾಮೆರಾಗಳೊಂದಿಗೆ ತಂಡ ನಿಯೋಜಿಸಿದ್ದೇವೆ ಎಂದು ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.</p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆದು, 8ರಂದು ಫಲಿತಾಂಶ ಪ್ರಕಟವಾಗಲಿದೆ. 699 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಎಪಿಯು ಸತತ ಮೂರನೇ ಅವಧಿಗೆ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದೆ.</p><p>ಬಹಿರಂಗ ಪ್ರಚಾರದ ಕೊನೇ ದಿನವಾದ ಇಂದು ವಿಡಿಯೊ ಸಂದೇಶ ಹಂಚಿಕೊಂಡಿರುವ ಕೇಜ್ರಿವಾಲ್, 'ಹೀನಾಯ ಸೋಲಿನತ್ತ ಮುಖ ಮಾಡಿರುವ ಬಿಜೆಪಿ, ತಂತ್ರಗಾರಿಕೆಯ ಮೊರೆ ಹೋಗಿದೆ. ಅದರ ಹೊರತಾಗಿಯೂ ಎಎಪಿ ಐತಿಹಾಸಿಕ ಗೆಲುವು ಸಾಧಿಸಲಿದೆ' ಎಂದು ಹೇಳಿದ್ದಾರೆ.</p><p>'ಬಿಜೆಪಿಯು ಚುನಾವಣೆಯನ್ನು ಗೆಲ್ಲಲು ಗೂಂಡಾಗಳನ್ನು, ದೆಹಲಿ ಪೊಲೀಸರನ್ನು ಭಾರಿ ಪ್ರಮಾಣದಲ್ಲಿ ಬಳಸುತ್ತದೆ. ಅವರು ಮತದಾರರನ್ನು ಅದರಲ್ಲೂ ಕೊಳಗೇರಿಗಳ ನಿವಾಸಿಗಳನ್ನು ಬೆದರಿಸಲು ಪ್ರಯತ್ನಿಸುತ್ತಾರೆ' ಎಂದು ದೂರಿದ್ದಾರೆ.</p><p>ದೆಹಲಿಯ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕೇಜ್ರಿವಾಲ್, 'ಬಿಜೆಪಿ ಕಾರ್ಯಕರ್ತರು ಕೊಳಗೇರಿ ಹಾಗೂ ಆರ್ಥಿಕವಾಗಿ ಹಿಂದುಳಿದ ಜನರಿಗೆ ₹ 3,000ರಿಂದ ₹ 5,000 ಆಮಿಷ ಒಡ್ಡುತ್ತಿದ್ದಾರೆ. ಬೆರಳಿಗೆ ಶಾಯಿ ಹಾಕಿ ಅವರನ್ನು ಮತದಾನದಿಂದ ದೂರ ಉಳಿಯುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ' ಎಂಬುದಾಗಿ ಆರೋಪಿಸಿದ್ದಾರೆ.</p>.Delhi Elections 205 | ದೆಹಲಿಯಲ್ಲಿ ಎಎಪಿ ವಿರೋಧಿ ಅಲೆ: ಅಮಿತ್ ಶಾ.Delhi Election | ಬಿಜೆಪಿ ಗೂಂಡಾಗಿರಿಯಲ್ಲಿ ತೊಡಗಿದೆ: ಕೇಜ್ರಿವಾಲ್ ವಾಗ್ದಾಳಿ.<p>ಕೇಜ್ರಿವಾಲ್ ಅವರು, ಯಾವುದೇ ಪಕ್ಷದ ಹೆಸರು ಉಲ್ಲೇಖಿಸದೆ ವಿರೋಧ ಪಕ್ಷಗಳ ವಿರುದ್ಧ ಕಿಡಿಕಾರುತ್ತಾ ಇಂಥದೇ ಆರೋಪವನ್ನು ಭಾನುವಾರವೂ ಮಾಡಿದ್ದರು. ಇಂದು ಬಿಜೆಪಿಯನ್ನು ಗುರಿಯಾಗಿಸಿ ಟೀಕಿಸಿದ್ದಾರೆ.</p><p>'ಹಣ ಕೊಟ್ಟರೆ ಪಡೆಯಿರಿ. ಆದರೆ, ನಿಮ್ಮ ಬೆರಳಿಗೆ ಶಾಯಿ ಹಾಕಿಸಿಕೊಳ್ಳಬೇಡಿ' ಎಂದು ಕಿವಿಮಾತು ಹೇಳಿರುವ ಕೇಜ್ರಿವಾಲ್, 'ಎಎಪಿಯು ಕ್ಷಿಪ್ರ ಕಾರ್ಯ ಪಡೆಗಳನ್ನು ನಿಯೋಜಿಸಿದೆ. ಬಿಜೆಪಿಯ ಗೂಂಡಾಗಳು ಅಕ್ರಮವೆಸಗುವುದನ್ನು ಸೆರೆ ಹಿಡಿಯಲು ಕೊಳಗೇರಿಗಳಲ್ಲಿ ಸ್ಪೈ ಕ್ಯಾಮೆರಾ ಹಾಗೂ ಬಾಡಿ ಕ್ಯಾಮೆರಾಗಳನ್ನು ವಿತರಿಸಿದೆ' ಎಂದು ತಿಳಿಸಿದ್ದಾರೆ.</p><p>ಬಿಜೆಪಿಯ ದೃಷ್ಕೃತ್ಯಗಳ ವಿರುದ್ಧ ಜನರಿಗೆ ಎಚ್ಚರಿಕೆ ನೀಡಿರುವ ಅವರು, 'ಬಿಜೆಪಿ ಅಧಿಕಾರಕ್ಕೇರಿದರೆ ಕೊಳಗೇರಿಗಳನ್ನು ನಾಶ ಮಾಡಲಿದೆ' ಎಂದು ಆರೋಪಿಸಿದ್ದಾರೆ. ಹಾಗೆಯೇ, 'ಮತಗಳನ್ನು ಮಾರಿಕೊಳ್ಳುವುದು, ನೀವು ನಿಮ್ಮದೇ ಡೆತ್ ವಾರಂಟ್ಗೆ ಸಹಿ ಮಾಡಿದಂತೆ' ಎಂದು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>