<p><strong>ನವದೆಹಲಿ</strong>: ರಾಜಸ್ಥಾನ ಸಂಸದ ಹುನಮಾನ್ ಬೆನಿವಾಲ್ ಅವರ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ (ಆರ್ಎಲ್ಪಿ) ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಬೆಂಬಲಿಸುವುದಾಗಿ ಘೋಷಿಸಿದೆ. ಅದರೊಂದಿಗೆ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಸಮಾಜವಾದಿ ಪಕ್ಷಗಳ (ಎಸ್ಪಿ) ಹಾದಿಯಲ್ಲಿ ಸಾಗಿದೆ.</p><p>ರಾಜ್ಯಸಭೆಯಲ್ಲಿ ಎಎಪಿ ನಾಯಕರಾಗಿರುವ ಸಂಜಯ್ ಸಿಂಗ್ ಅವರನ್ನು ನಗರದಲ್ಲಿ ಭೇಟಿಯಾದ ಬಳಿಕ ಬೆನಿವಾಲ್ ಅವರು ತಮ್ಮ ಪಕ್ಷದ ನಿಲುವು ಪ್ರಕಟಿಸಿದ್ದಾರೆ.</p><p>ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು, ದೇಶದಾದ್ಯಂತ ಮೀಸಲಾತಿ ಪಟ್ಟಿಯಲ್ಲಿ ಜಾಟ್ ಸಮುದಾಯವನ್ನು ಒಬಿಸಿ ವರ್ಗಕ್ಕೆ ಸೇರಿಸಬೇಕು ಎಂದು ಕೇಂದ್ರವನ್ನು ಒತ್ತಾಯಿಸುತ್ತಿದ್ದಾರೆ. ಇದಕ್ಕೆ, ಬೆನಿವಾಲ್ ಬೆಂಬಲ ಸೂಚಿಸಿದ್ದಾರೆ.</p><p>'ಕಾಂಗ್ರೆಸ್ ಪಕ್ಷವು, ಹಲವು ವರ್ಷಗಳಿಂದ ಯಾವುದೇ ಸ್ಥಾನಗಳನ್ನು ಗೆಲ್ಲಲು ವಿಫಲವಾಗಿದೆ. ಹೀಗಾಗಿ, ದೆಹಲಿ ಚುನಾವಣೆಯಲ್ಲಿ ಎಎಪಿ ವಿರುದ್ಧ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕಿತ್ತು' ಎಂದು ಬೆನಿವಾಲ್ ಹೇಳಿದ್ದಾರೆ.</p><p>ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಶಿವಸೇನಾ (ಯುಬಿಟಿ) ಸಹ ಈಗಾಗಲೇ ಎಎಪಿಗೆ ಬೆಂಬಲ ಸೂಚಿಸಿದೆ. ಟಿಎಂಸಿ ಮತ್ತು ಎಸ್ಪಿಯೂ ಈಗಾಗಲೇ ಈ ತೀರ್ಮಾನ ಮಾಡಿವೆ. ಇದರೊಂದಿಗೆ, ಇಂಡಿಯಾ ಮೈತ್ರಿಕೂಟದಲ್ಲಿರುವ ಪ್ರಮುಖ ಪಕ್ಷ ಕಾಂಗ್ರೆಸ್ ಭಾರಿ ಹಿನ್ನಡೆ ಎದುರಾದಂತಾಗಿದೆ.</p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಮೂರು ದಿನಗಳ ಬಳಿಕ (ಜ.8ರಂದು) ಫಲಿತಾಂಶ ಪ್ರಕಟವಾಗಲಿದೆ.</p>.Delhi: 26 ವರ್ಷಗಳ ನಂತರ ಅಧಿಕಾರಕ್ಕೆ ಮರಳಲು BJP; ಉಳಿಸಿಕೊಳ್ಳಲು AAP ಕಸರತ್ತು.ದೆಹಲಿ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಪಾಲಿಗೆ ಅಂತಿಮಯಾತ್ರೆ: ಬಿಜೆಪಿ ವ್ಯಂಗ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಜಸ್ಥಾನ ಸಂಸದ ಹುನಮಾನ್ ಬೆನಿವಾಲ್ ಅವರ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ (ಆರ್ಎಲ್ಪಿ) ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಬೆಂಬಲಿಸುವುದಾಗಿ ಘೋಷಿಸಿದೆ. ಅದರೊಂದಿಗೆ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಸಮಾಜವಾದಿ ಪಕ್ಷಗಳ (ಎಸ್ಪಿ) ಹಾದಿಯಲ್ಲಿ ಸಾಗಿದೆ.</p><p>ರಾಜ್ಯಸಭೆಯಲ್ಲಿ ಎಎಪಿ ನಾಯಕರಾಗಿರುವ ಸಂಜಯ್ ಸಿಂಗ್ ಅವರನ್ನು ನಗರದಲ್ಲಿ ಭೇಟಿಯಾದ ಬಳಿಕ ಬೆನಿವಾಲ್ ಅವರು ತಮ್ಮ ಪಕ್ಷದ ನಿಲುವು ಪ್ರಕಟಿಸಿದ್ದಾರೆ.</p><p>ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು, ದೇಶದಾದ್ಯಂತ ಮೀಸಲಾತಿ ಪಟ್ಟಿಯಲ್ಲಿ ಜಾಟ್ ಸಮುದಾಯವನ್ನು ಒಬಿಸಿ ವರ್ಗಕ್ಕೆ ಸೇರಿಸಬೇಕು ಎಂದು ಕೇಂದ್ರವನ್ನು ಒತ್ತಾಯಿಸುತ್ತಿದ್ದಾರೆ. ಇದಕ್ಕೆ, ಬೆನಿವಾಲ್ ಬೆಂಬಲ ಸೂಚಿಸಿದ್ದಾರೆ.</p><p>'ಕಾಂಗ್ರೆಸ್ ಪಕ್ಷವು, ಹಲವು ವರ್ಷಗಳಿಂದ ಯಾವುದೇ ಸ್ಥಾನಗಳನ್ನು ಗೆಲ್ಲಲು ವಿಫಲವಾಗಿದೆ. ಹೀಗಾಗಿ, ದೆಹಲಿ ಚುನಾವಣೆಯಲ್ಲಿ ಎಎಪಿ ವಿರುದ್ಧ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕಿತ್ತು' ಎಂದು ಬೆನಿವಾಲ್ ಹೇಳಿದ್ದಾರೆ.</p><p>ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಶಿವಸೇನಾ (ಯುಬಿಟಿ) ಸಹ ಈಗಾಗಲೇ ಎಎಪಿಗೆ ಬೆಂಬಲ ಸೂಚಿಸಿದೆ. ಟಿಎಂಸಿ ಮತ್ತು ಎಸ್ಪಿಯೂ ಈಗಾಗಲೇ ಈ ತೀರ್ಮಾನ ಮಾಡಿವೆ. ಇದರೊಂದಿಗೆ, ಇಂಡಿಯಾ ಮೈತ್ರಿಕೂಟದಲ್ಲಿರುವ ಪ್ರಮುಖ ಪಕ್ಷ ಕಾಂಗ್ರೆಸ್ ಭಾರಿ ಹಿನ್ನಡೆ ಎದುರಾದಂತಾಗಿದೆ.</p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಮೂರು ದಿನಗಳ ಬಳಿಕ (ಜ.8ರಂದು) ಫಲಿತಾಂಶ ಪ್ರಕಟವಾಗಲಿದೆ.</p>.Delhi: 26 ವರ್ಷಗಳ ನಂತರ ಅಧಿಕಾರಕ್ಕೆ ಮರಳಲು BJP; ಉಳಿಸಿಕೊಳ್ಳಲು AAP ಕಸರತ್ತು.ದೆಹಲಿ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಪಾಲಿಗೆ ಅಂತಿಮಯಾತ್ರೆ: ಬಿಜೆಪಿ ವ್ಯಂಗ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>