<p><strong>ನವದೆಹಲಿ: </strong>ದೆಹಲಿಯ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದನ್ನು ಪಕ್ಷದ ಹಿರಿಯ ನಾಯಕರು ತೀರ್ಮಾನಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪರ್ವೇಶ್ ವರ್ಮಾ ಹೇಳಿದ್ದಾರೆ.</p><p>ಪರ್ವೇಶ್ ಅವರು ಎಎಪಿ ಮುಖ್ಯಸ್ಥ ಹಾಗೂ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ ನವದೆಹಲಿ ಕ್ಷೇತ್ರದಲ್ಲಿ ಜಯ ಸಾಧಿಸಿದ್ದಾರೆ.</p><p>70 ಸದಸ್ಯ ಬಲದ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದೆ. 48 ಸ್ಥಾನಗಳಲ್ಲಿ ಮುನ್ನಡೆ (41 ಜಯ) ಸಾಧಿಸಿರುವ ಬಿಜೆಪಿ ಭಾರಿ ಬಹುಮತ ಸಾಧಿಸಿದೆ. ಮಾಜಿ ಮಖ್ಯಮಂತ್ರಿ ಸಾಹಿಬ್ ಸಿಂಗ್ ವರ್ಮಾ ಅವರ ಪುತ್ರ ಪರ್ವೇಶ್ ಈ ಜಯವನ್ನು, 'ರಾಷ್ಟ್ರ ರಾಜಧಾನಿಯ ಜನರ ಗೆಲುವು' ಎಂದು ಬಣ್ಣಿಸಿದ್ದಾರೆ.</p><p>'ಇದು ಕೇವಲ ಗೆಲುವಲ್ಲ. ಸುಳ್ಳನ್ನು ತ್ಯಜಿಸಿ ಸತ್ಯವನ್ನು, ಗಿಮಿಕ್ಗಳ ಬದಲು ಸಮರ್ಥ ಆಡಳಿತವನ್ನು, ವಂಚನೆಯ ಬದಲು ಅಭಿವೃದ್ಧಿಯನ್ನು ಆಯ್ಕೆ ಮಾಡಿದ ದೆಹಲಿ ಜನರ ಗೆಲುವು. ನಮ್ಮ ಮೇಲೆ ಭರವಸೆ ಇಟ್ಟ ಪ್ರತಿಯೊಬ್ಬ ಮತದಾರನಿಗೂ ಧನ್ಯವಾದ ಹೇಳುತ್ತೇನೆ' ಎಂದಿದ್ದಾರೆ.</p><p>'ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಬಲಿಷ್ಠ ನಾಯಕತ್ವದಲ್ಲಿ, ದೆಹಲಿಯಲ್ಲಿ ನಿಜವಾದ ಬದಲಾವಣೆಯನ್ನು ತರಲು ಅವಿರತವಾಗಿ ಶ್ರಮಿಸಲಿದ್ದೇವೆ. ಈ ಜನಾದೇಶವು, ಜನರು ಪ್ರಾಮಾಣಿಕ, ಪಾರದರ್ಶಕ ಮತ್ತು ಅಭಿವೃದ್ಧಿಗೆ ಪೂರಕವಾದ ರಾಜಕಾರಣವನ್ನು ಬಯಸುತ್ತಾರೆ ಎಂಬ ಸಂದೇಶವನ್ನು ನೀಡಿದೆ. ಸೇವೆ ಮಾಡುವ ನಮ್ಮ ಬದ್ಧತೆಯು ಅಚಲವಾಗಿದೆ' ಎಂದು ತಿಳಿಸಿದ್ದಾರೆ.</p><p>ಪಶ್ಚಿಮ ದೆಹಲಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ವರ್ಮಾ, 'ದೆಹಲಿ ಪಾಲಿಗೆ ಹೊಸ ಅಧ್ಯಾಯ ಆರಂಭವಾಗಿದೆ. ಎಲ್ಲರೂ ಒಟ್ಟಾಗಿ, ಉಜ್ವಲ ಭವಿಷ್ಯ ನಿರ್ಮಿಸೋಣ' ಎಂದು ಕರೆ ನೀಡಿದ್ದಾರೆ.</p><p>ನವದೆಹಲಿ ಕ್ಷೇತ್ರದಲ್ಲಿ 2013, 2015 ಹಾಗೂ 2020ರಲ್ಲಿ ಗೆಲುವು ಸಾಧಿಸಿದ್ದ ಕೇಜ್ರಿವಾಲ್, ಈ ಬಾರಿ ವರ್ಮಾ ಎದುರು 4,089 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೆಹಲಿಯ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದನ್ನು ಪಕ್ಷದ ಹಿರಿಯ ನಾಯಕರು ತೀರ್ಮಾನಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪರ್ವೇಶ್ ವರ್ಮಾ ಹೇಳಿದ್ದಾರೆ.</p><p>ಪರ್ವೇಶ್ ಅವರು ಎಎಪಿ ಮುಖ್ಯಸ್ಥ ಹಾಗೂ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ ನವದೆಹಲಿ ಕ್ಷೇತ್ರದಲ್ಲಿ ಜಯ ಸಾಧಿಸಿದ್ದಾರೆ.</p><p>70 ಸದಸ್ಯ ಬಲದ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದೆ. 48 ಸ್ಥಾನಗಳಲ್ಲಿ ಮುನ್ನಡೆ (41 ಜಯ) ಸಾಧಿಸಿರುವ ಬಿಜೆಪಿ ಭಾರಿ ಬಹುಮತ ಸಾಧಿಸಿದೆ. ಮಾಜಿ ಮಖ್ಯಮಂತ್ರಿ ಸಾಹಿಬ್ ಸಿಂಗ್ ವರ್ಮಾ ಅವರ ಪುತ್ರ ಪರ್ವೇಶ್ ಈ ಜಯವನ್ನು, 'ರಾಷ್ಟ್ರ ರಾಜಧಾನಿಯ ಜನರ ಗೆಲುವು' ಎಂದು ಬಣ್ಣಿಸಿದ್ದಾರೆ.</p><p>'ಇದು ಕೇವಲ ಗೆಲುವಲ್ಲ. ಸುಳ್ಳನ್ನು ತ್ಯಜಿಸಿ ಸತ್ಯವನ್ನು, ಗಿಮಿಕ್ಗಳ ಬದಲು ಸಮರ್ಥ ಆಡಳಿತವನ್ನು, ವಂಚನೆಯ ಬದಲು ಅಭಿವೃದ್ಧಿಯನ್ನು ಆಯ್ಕೆ ಮಾಡಿದ ದೆಹಲಿ ಜನರ ಗೆಲುವು. ನಮ್ಮ ಮೇಲೆ ಭರವಸೆ ಇಟ್ಟ ಪ್ರತಿಯೊಬ್ಬ ಮತದಾರನಿಗೂ ಧನ್ಯವಾದ ಹೇಳುತ್ತೇನೆ' ಎಂದಿದ್ದಾರೆ.</p><p>'ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಬಲಿಷ್ಠ ನಾಯಕತ್ವದಲ್ಲಿ, ದೆಹಲಿಯಲ್ಲಿ ನಿಜವಾದ ಬದಲಾವಣೆಯನ್ನು ತರಲು ಅವಿರತವಾಗಿ ಶ್ರಮಿಸಲಿದ್ದೇವೆ. ಈ ಜನಾದೇಶವು, ಜನರು ಪ್ರಾಮಾಣಿಕ, ಪಾರದರ್ಶಕ ಮತ್ತು ಅಭಿವೃದ್ಧಿಗೆ ಪೂರಕವಾದ ರಾಜಕಾರಣವನ್ನು ಬಯಸುತ್ತಾರೆ ಎಂಬ ಸಂದೇಶವನ್ನು ನೀಡಿದೆ. ಸೇವೆ ಮಾಡುವ ನಮ್ಮ ಬದ್ಧತೆಯು ಅಚಲವಾಗಿದೆ' ಎಂದು ತಿಳಿಸಿದ್ದಾರೆ.</p><p>ಪಶ್ಚಿಮ ದೆಹಲಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ವರ್ಮಾ, 'ದೆಹಲಿ ಪಾಲಿಗೆ ಹೊಸ ಅಧ್ಯಾಯ ಆರಂಭವಾಗಿದೆ. ಎಲ್ಲರೂ ಒಟ್ಟಾಗಿ, ಉಜ್ವಲ ಭವಿಷ್ಯ ನಿರ್ಮಿಸೋಣ' ಎಂದು ಕರೆ ನೀಡಿದ್ದಾರೆ.</p><p>ನವದೆಹಲಿ ಕ್ಷೇತ್ರದಲ್ಲಿ 2013, 2015 ಹಾಗೂ 2020ರಲ್ಲಿ ಗೆಲುವು ಸಾಧಿಸಿದ್ದ ಕೇಜ್ರಿವಾಲ್, ಈ ಬಾರಿ ವರ್ಮಾ ಎದುರು 4,089 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>