<p><strong>ನವದೆಹಲಿ:</strong> ದೆಹಲಿಯ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಗರಿಗೆದರಿರುವ ಹೊತ್ತಿನಲ್ಲಿ, ಬಿಜೆಪಿ ನಾಯಕ ಪರ್ವೇಶ್ ವರ್ಮಾ ಅವರು ಲೆಫ್ಟೆನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ಭೇಟಿಯಾಗಿದ್ದಾರೆ.</p><p>ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಶನಿವಾರ ಪ್ರಕಟವಾಗಿದೆ. 70 ವಿಧಾನಸಭೆ ಕ್ಷೇತ್ರಗಳ ಪೈಕಿ 48 ರಲ್ಲಿ ಗೆದ್ದಿರುವ ಬಿಜೆಪಿ, ಭಾರಿ ಬಹುಮತದೊಂದಿಗೆ ಸರ್ಕಾರ ರಚನೆಗೆ ಸಜ್ಜಾಗಿದೆ.</p><p>ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಚರ್ಚೆ ಚಾಲ್ತಿಯಲ್ಲಿರುವಾಗಲೇ ಪರ್ವೇಶ್ ಅವರು, ಲೆಫ್ಟೆನೆಂಟ್ ಗವರ್ನರ್ ಅವರ ಅಧಿಕೃತ 'ರಾಜ ನಿವಾಸ'ಕ್ಕೆ ಭೇಟಿ ನೀಡಿದ್ದಾರೆ.</p>.<p>ಎಎಪಿ ಮುಖ್ಯಸ್ಥ ಹಾಗೂ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ ನವದೆಹಲಿ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಪರ್ವೇಶ್, 4,089 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.</p><p>ಫಲಿತಾಂಶದ ಬಳಿಕ ಮಾತನಾಡಿದ್ದ ಅವರು, 'ದೆಹಲಿ ಪಾಲಿಗೆ ಹೊಸ ಅಧ್ಯಾಯ ಆರಂಭವಾಗಿದೆ. ಎಲ್ಲರೂ ಒಟ್ಟಾಗಿ, ಉಜ್ವಲ ಭವಿಷ್ಯ ನಿರ್ಮಿಸೋಣ' ಎಂದು ಕರೆ ನೀಡಿದ್ದರು.</p><p>ಬಿಜೆಪಿಯ ಗೆಲುವನ್ನು 'ರಾಷ್ಟ್ರ ರಾಜಧಾನಿಯ ಜನರ ಗೆಲುವು' ಎಂದು ಬಣ್ಣಿಸಿದ್ದ ಅವರು, 'ಇದು ಕೇವಲ ಗೆಲುವಲ್ಲ. ಸುಳ್ಳನ್ನು ತ್ಯಜಿಸಿ ಸತ್ಯವನ್ನು, ಗಿಮಿಕ್ಗಳ ಬದಲು ಸಮರ್ಥ ಆಡಳಿತವನ್ನು, ವಂಚನೆಯ ಬದಲು ಅಭಿವೃದ್ಧಿಯನ್ನು ಆಯ್ಕೆ ಮಾಡಿದ ದೆಹಲಿ ಜನರ ಗೆಲುವು' ಎಂದು ಹೇಳಿದ್ದರು.</p><p>ಹಾಗೆಯೇ, ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದನ್ನು ಪಕ್ಷದ ಉನ್ನತ ಮಟ್ಟದ ನಾಯಕರು ತೀರ್ಮಾನಿಸಲಿದ್ದಾರೆ ಎಂದು ತಿಳಿಸಿದ್ದರು.</p>.Delhi Elections: ದೆಹಲಿಯಲ್ಲಿ ಬಿಜೆಪಿಗೆ ಭರ್ಜರಿ ಜಯ; RSS ನೆರವಾದದ್ದು ಹೇಗೆ?.ದೆಹಲಿಯ ಮುಂದಿನ ಸಿಎಂ ಯಾರು? ಕೇಜ್ರಿವಾಲ್ ಎದುರು ಗೆದ್ದ ಪರ್ವೇಶ್ ಹೇಳಿದ್ದೇನು?.Delhi Elections: ತೀವ್ರ ಮುಖಭಂಗದ ನಡುವೆ ಕಾಂಗ್ರೆಸ್ಗೆ ಎಎಪಿ ಸೋಲಿನ ಸಮಾಧಾನ.Delhi Election Result: ‘ಪಂದ್ಯಶ್ರೇಷ್ಠ’ ಪರ್ವೇಶ್ಗೆ ಸಿಎಂ ಗಾದಿ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿಯ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಗರಿಗೆದರಿರುವ ಹೊತ್ತಿನಲ್ಲಿ, ಬಿಜೆಪಿ ನಾಯಕ ಪರ್ವೇಶ್ ವರ್ಮಾ ಅವರು ಲೆಫ್ಟೆನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ಭೇಟಿಯಾಗಿದ್ದಾರೆ.</p><p>ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಶನಿವಾರ ಪ್ರಕಟವಾಗಿದೆ. 70 ವಿಧಾನಸಭೆ ಕ್ಷೇತ್ರಗಳ ಪೈಕಿ 48 ರಲ್ಲಿ ಗೆದ್ದಿರುವ ಬಿಜೆಪಿ, ಭಾರಿ ಬಹುಮತದೊಂದಿಗೆ ಸರ್ಕಾರ ರಚನೆಗೆ ಸಜ್ಜಾಗಿದೆ.</p><p>ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಚರ್ಚೆ ಚಾಲ್ತಿಯಲ್ಲಿರುವಾಗಲೇ ಪರ್ವೇಶ್ ಅವರು, ಲೆಫ್ಟೆನೆಂಟ್ ಗವರ್ನರ್ ಅವರ ಅಧಿಕೃತ 'ರಾಜ ನಿವಾಸ'ಕ್ಕೆ ಭೇಟಿ ನೀಡಿದ್ದಾರೆ.</p>.<p>ಎಎಪಿ ಮುಖ್ಯಸ್ಥ ಹಾಗೂ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ ನವದೆಹಲಿ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಪರ್ವೇಶ್, 4,089 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.</p><p>ಫಲಿತಾಂಶದ ಬಳಿಕ ಮಾತನಾಡಿದ್ದ ಅವರು, 'ದೆಹಲಿ ಪಾಲಿಗೆ ಹೊಸ ಅಧ್ಯಾಯ ಆರಂಭವಾಗಿದೆ. ಎಲ್ಲರೂ ಒಟ್ಟಾಗಿ, ಉಜ್ವಲ ಭವಿಷ್ಯ ನಿರ್ಮಿಸೋಣ' ಎಂದು ಕರೆ ನೀಡಿದ್ದರು.</p><p>ಬಿಜೆಪಿಯ ಗೆಲುವನ್ನು 'ರಾಷ್ಟ್ರ ರಾಜಧಾನಿಯ ಜನರ ಗೆಲುವು' ಎಂದು ಬಣ್ಣಿಸಿದ್ದ ಅವರು, 'ಇದು ಕೇವಲ ಗೆಲುವಲ್ಲ. ಸುಳ್ಳನ್ನು ತ್ಯಜಿಸಿ ಸತ್ಯವನ್ನು, ಗಿಮಿಕ್ಗಳ ಬದಲು ಸಮರ್ಥ ಆಡಳಿತವನ್ನು, ವಂಚನೆಯ ಬದಲು ಅಭಿವೃದ್ಧಿಯನ್ನು ಆಯ್ಕೆ ಮಾಡಿದ ದೆಹಲಿ ಜನರ ಗೆಲುವು' ಎಂದು ಹೇಳಿದ್ದರು.</p><p>ಹಾಗೆಯೇ, ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದನ್ನು ಪಕ್ಷದ ಉನ್ನತ ಮಟ್ಟದ ನಾಯಕರು ತೀರ್ಮಾನಿಸಲಿದ್ದಾರೆ ಎಂದು ತಿಳಿಸಿದ್ದರು.</p>.Delhi Elections: ದೆಹಲಿಯಲ್ಲಿ ಬಿಜೆಪಿಗೆ ಭರ್ಜರಿ ಜಯ; RSS ನೆರವಾದದ್ದು ಹೇಗೆ?.ದೆಹಲಿಯ ಮುಂದಿನ ಸಿಎಂ ಯಾರು? ಕೇಜ್ರಿವಾಲ್ ಎದುರು ಗೆದ್ದ ಪರ್ವೇಶ್ ಹೇಳಿದ್ದೇನು?.Delhi Elections: ತೀವ್ರ ಮುಖಭಂಗದ ನಡುವೆ ಕಾಂಗ್ರೆಸ್ಗೆ ಎಎಪಿ ಸೋಲಿನ ಸಮಾಧಾನ.Delhi Election Result: ‘ಪಂದ್ಯಶ್ರೇಷ್ಠ’ ಪರ್ವೇಶ್ಗೆ ಸಿಎಂ ಗಾದಿ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>