<p>ನವದೆಹಲಿ: ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲ ದಿನದ ಕಲಾಪವು ಬಿಜೆಪಿ ಶಾಸಕರ ಗದ್ದಲ ಹಾಗೂ ಅವರ ವಿರುದ್ಧ ನಿರ್ಣಯ ಅಂಗೀಕರಿಸುವುದಕ್ಕೆ ಸಾಕ್ಷಿಯಾಯಿತು. </p>.<p>ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರ ಭಾಷಣಕ್ಕೆ ಅಡ್ಡಿಪಡಿಸುವ ಮೂಲಕ ಬಿಜೆಪಿ ಶಾಸಕರು ಸದನದ ಸಂಪ್ರದಾಯವನ್ನು ಉಲ್ಲಂಘಿಸಿದ್ದಾರೆ. ಅಲ್ಲದೇ, ಬಿಜೆಪಿ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಸಂಬಂಧ ಈ ವಿಷಯವನ್ನು ಸದನದ ನೀತಿಸಂಹಿತೆ ಸಮಿತಿಗೆ ಒಪ್ಪಿಸಬೇಕು ಎಂಬ ನಿರ್ಣಯವನ್ನು ಶುಕ್ರವಾರ ಅಂಗೀಕರಿಸಲಾಯಿತು.</p>.<p>ಕಲಾಪ ಆರಂಭಗೊಳ್ಳುತ್ತಿದ್ದಂತೆಯೇ ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಅವರು ಸದನವನ್ನು ಉದ್ದೇಶಿಸಿ ಭಾಷಣ ಆರಂಭಿಸಿದರು. ಆಗ, ರದ್ದುಗೊಳಿಸಿರುವ ದೆಹಲಿ ಅಬಕಾರಿ ನೀತಿಯನ್ನು ಪ್ರಸ್ತಾಪಿಸಿದ ಬಿಜೆಪಿ ಶಾಸಕರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲು ಆರಂಭಿಸಿದರು.</p>.<p>‘ದೆಹಲಿ ಅಬಕಾರಿ ನೀತಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿರುವ ಆರೋಪಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಕೂಡಲೇ ರಾಜೀನಾಮೆ ನೀಡಬೇಕು’ ಎಂದೂ ಆಗ್ರಹಿಸಿದರು.</p>.<p>ಗದ್ದಲ ಜೋರಾದ ಹಿನ್ನೆಲೆಯಲ್ಲಿ ಸ್ಪೀಕರ್ ರಾಮನಿವಾಸ್ ಗೋಯೆಲ್ ಅವರ ಸೂಚನೆಯಂತೆ, ಮೂವರು ಬಿಜೆಪಿ ಶಾಸಕರನ್ನು ಮಾರ್ಷಲ್ಗಳು ಸದನದಿಂದ ಹೊರಹಾಕಿದರೆ, ಉಳಿದ ಶಾಸಕರು ಸಭಾತ್ಯಾಗ ಮಾಡಿದರು. ನಂತರ, ಲೆಫ್ಟಿನೆಂಟ್ ಗವರ್ನರ್ ತಮ್ಮ ಭಾಷಣ ಮುಂದುವರಿಸಿದರು.</p>.<p>ನಂತರ ಮಾತನಾಡಿದ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್, ‘ಬಿಜೆಪಿ ಶಾಸಕರು ಲೆಫ್ಟಿನೆಂಟ್ ಗವರ್ನರ್ ಅವರ ಭಾಷಣಕ್ಕೆ ಅಡ್ಡಿಪಡಿಸಿದ ವಿಷಯವನ್ನು ನೀತಿಸಂಹಿತೆ ಸಮಿತಿಗೆ ವಹಿಸಲಾಗುವುದು’ ಎಂಬ ನಿರ್ಣಯವನ್ನು ಮಂಡಿಸಿದರು.</p>.<p>ಸಾಧನೆಗಳ ಪಟ್ಟಿ: ಬಜೆಟ್ ಅಧಿವೇಶವನ್ನು ಉದ್ದೇಶಿಸಿ ಮಾತನಾಡಿದ ಲೆಫ್ಟಿನೆಂಟ್ ಗವರ್ನರ ವಿ.ಕೆ.ಸಕ್ಸೇನಾ ಅವರು, ದೆಹಲಿ ಸರ್ಕಾರದ ಸಾಧನೆಗಳನ್ನು ಸದನದ ಮುಂದಿಟ್ಟರು.</p>.<p>‘ಬರುವ ದಿನಗಳಲ್ಲಿ ದೆಹಲಿಯು ಅಭಿವೃದ್ಧಿ ಹೊಂದಿದ ಜಾಗತಿಕ ನಗರವಾಗಿ ಹೊರಹೊಮ್ಮಲಿದೆ’ ಎಂದು ವಿಶ್ವಾಸವ್ಯಕ್ತಪಡಿಸಿದರು.</p>.<p>‘ಶಾಲೆಗಳು ಹಾಗೂ ಶಿಕ್ಷಣ ಪದ್ಧತಿಯಲ್ಲಿ ತಂದ ಸುಧಾರಣೆಗಳ ಫಲವಾಗಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ವಿಶ್ವದರ್ಜೆಯ ಗುಣಮಟ್ಟದ ಹೊಂದಿದ ಶಾಲೆಗಳನ್ನು ಸ್ಥಾಪಿಸಲಾಗಿದ್ದು, ‘ಮಿಷನ್ ಬುನಿಯಾದ್’ ಕಾರ್ಯಕ್ರಮದಿಂದಾಗಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಸುಧಾರಿಸಿದೆ’ ಎಂದು ಹೇಳಿದರು.</p>.<p>‘ಹೊಸದಾಗಿ 20,000 ಕೊಠಡಿಗಳನ್ನು ನಿರ್ಮಾಣವೂ ಸೇರಿದಂತೆ ಶೈಕ್ಷಣಿಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದರು.</p>.<p>ಆರೋಗ್ಯ ಕ್ಷೇತ್ರದ ಯೋಜನೆಗಳನ್ನು ಪ್ರಸ್ತಾಪಿಸಿದ ಅವರು, ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಬರುವ ದಿನಗಳಲ್ಲಿ 16 ಸಾವಿರಕ್ಕೂ ಹೆಚ್ಚು ಹಾಸಿಗೆಗಳನ್ನು ಒದಗಿಸಲಾಗುವುದು ಎಂದು ಹೇಳಿದರು.</p>.<p>ಸಾರಿಗೆ, ಪರಿಸರ ಸಂರಕ್ಷಣೆ, ಪ್ರವಾಸೋದ್ಯಮ ಹಾಗೂ ಇತರ ಕ್ಷೇತ್ರಗಳಲ್ಲಿನ ಸಾಧನೆಗಳನ್ನು ಅವರು ಸದನದ ಮುಂದಿಟ್ಟರು.</p>.<p>‘ಇತ್ತೀಚಿನ ದಿನಗಳಲ್ಲಿ ಮಾತಿನಲ್ಲಿ ಹಿಡಿತ ತಪ್ಪುತ್ತಿದ್ದು, ಘನತೆ ಕುಂದುತ್ತಿದೆ’ ಎಂದು ಹೇಳುವ ಮೂಲಕ ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಅವರು ಸದನದಿಂದ ನಿರ್ಗಮಿಸಿದರು.</p>.<p>ದೆಹಲಿ ಶಾಲೆಗಳ ಶಿಕ್ಷಕರನ್ನು ತರಬೇತಿಗಾಗಿ ವಿದೇಶಗಳಿಗೆ ಕಳುಹಿಸುವುದು ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿ ಲೆಫ್ಟಿನೆಂಟ್ ಗವರ್ನರ್ ಹಾಗೂ ಸರ್ಕಾರದ ನಡುವೆ ಇತ್ತೀಚೆಗೆ ವಾಕ್ಸಮರ ನಡೆದಿತ್ತು. ಈ ಹಿನ್ನೆಲೆಯಲ್ಲಿ ಸಕ್ಸೇನಾ ಅವರಿಂದ ಈ ಮಾತುಗಳನ್ನಾಡಿದರು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲ ದಿನದ ಕಲಾಪವು ಬಿಜೆಪಿ ಶಾಸಕರ ಗದ್ದಲ ಹಾಗೂ ಅವರ ವಿರುದ್ಧ ನಿರ್ಣಯ ಅಂಗೀಕರಿಸುವುದಕ್ಕೆ ಸಾಕ್ಷಿಯಾಯಿತು. </p>.<p>ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರ ಭಾಷಣಕ್ಕೆ ಅಡ್ಡಿಪಡಿಸುವ ಮೂಲಕ ಬಿಜೆಪಿ ಶಾಸಕರು ಸದನದ ಸಂಪ್ರದಾಯವನ್ನು ಉಲ್ಲಂಘಿಸಿದ್ದಾರೆ. ಅಲ್ಲದೇ, ಬಿಜೆಪಿ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಸಂಬಂಧ ಈ ವಿಷಯವನ್ನು ಸದನದ ನೀತಿಸಂಹಿತೆ ಸಮಿತಿಗೆ ಒಪ್ಪಿಸಬೇಕು ಎಂಬ ನಿರ್ಣಯವನ್ನು ಶುಕ್ರವಾರ ಅಂಗೀಕರಿಸಲಾಯಿತು.</p>.<p>ಕಲಾಪ ಆರಂಭಗೊಳ್ಳುತ್ತಿದ್ದಂತೆಯೇ ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಅವರು ಸದನವನ್ನು ಉದ್ದೇಶಿಸಿ ಭಾಷಣ ಆರಂಭಿಸಿದರು. ಆಗ, ರದ್ದುಗೊಳಿಸಿರುವ ದೆಹಲಿ ಅಬಕಾರಿ ನೀತಿಯನ್ನು ಪ್ರಸ್ತಾಪಿಸಿದ ಬಿಜೆಪಿ ಶಾಸಕರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲು ಆರಂಭಿಸಿದರು.</p>.<p>‘ದೆಹಲಿ ಅಬಕಾರಿ ನೀತಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿರುವ ಆರೋಪಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಕೂಡಲೇ ರಾಜೀನಾಮೆ ನೀಡಬೇಕು’ ಎಂದೂ ಆಗ್ರಹಿಸಿದರು.</p>.<p>ಗದ್ದಲ ಜೋರಾದ ಹಿನ್ನೆಲೆಯಲ್ಲಿ ಸ್ಪೀಕರ್ ರಾಮನಿವಾಸ್ ಗೋಯೆಲ್ ಅವರ ಸೂಚನೆಯಂತೆ, ಮೂವರು ಬಿಜೆಪಿ ಶಾಸಕರನ್ನು ಮಾರ್ಷಲ್ಗಳು ಸದನದಿಂದ ಹೊರಹಾಕಿದರೆ, ಉಳಿದ ಶಾಸಕರು ಸಭಾತ್ಯಾಗ ಮಾಡಿದರು. ನಂತರ, ಲೆಫ್ಟಿನೆಂಟ್ ಗವರ್ನರ್ ತಮ್ಮ ಭಾಷಣ ಮುಂದುವರಿಸಿದರು.</p>.<p>ನಂತರ ಮಾತನಾಡಿದ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್, ‘ಬಿಜೆಪಿ ಶಾಸಕರು ಲೆಫ್ಟಿನೆಂಟ್ ಗವರ್ನರ್ ಅವರ ಭಾಷಣಕ್ಕೆ ಅಡ್ಡಿಪಡಿಸಿದ ವಿಷಯವನ್ನು ನೀತಿಸಂಹಿತೆ ಸಮಿತಿಗೆ ವಹಿಸಲಾಗುವುದು’ ಎಂಬ ನಿರ್ಣಯವನ್ನು ಮಂಡಿಸಿದರು.</p>.<p>ಸಾಧನೆಗಳ ಪಟ್ಟಿ: ಬಜೆಟ್ ಅಧಿವೇಶವನ್ನು ಉದ್ದೇಶಿಸಿ ಮಾತನಾಡಿದ ಲೆಫ್ಟಿನೆಂಟ್ ಗವರ್ನರ ವಿ.ಕೆ.ಸಕ್ಸೇನಾ ಅವರು, ದೆಹಲಿ ಸರ್ಕಾರದ ಸಾಧನೆಗಳನ್ನು ಸದನದ ಮುಂದಿಟ್ಟರು.</p>.<p>‘ಬರುವ ದಿನಗಳಲ್ಲಿ ದೆಹಲಿಯು ಅಭಿವೃದ್ಧಿ ಹೊಂದಿದ ಜಾಗತಿಕ ನಗರವಾಗಿ ಹೊರಹೊಮ್ಮಲಿದೆ’ ಎಂದು ವಿಶ್ವಾಸವ್ಯಕ್ತಪಡಿಸಿದರು.</p>.<p>‘ಶಾಲೆಗಳು ಹಾಗೂ ಶಿಕ್ಷಣ ಪದ್ಧತಿಯಲ್ಲಿ ತಂದ ಸುಧಾರಣೆಗಳ ಫಲವಾಗಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ವಿಶ್ವದರ್ಜೆಯ ಗುಣಮಟ್ಟದ ಹೊಂದಿದ ಶಾಲೆಗಳನ್ನು ಸ್ಥಾಪಿಸಲಾಗಿದ್ದು, ‘ಮಿಷನ್ ಬುನಿಯಾದ್’ ಕಾರ್ಯಕ್ರಮದಿಂದಾಗಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಸುಧಾರಿಸಿದೆ’ ಎಂದು ಹೇಳಿದರು.</p>.<p>‘ಹೊಸದಾಗಿ 20,000 ಕೊಠಡಿಗಳನ್ನು ನಿರ್ಮಾಣವೂ ಸೇರಿದಂತೆ ಶೈಕ್ಷಣಿಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದರು.</p>.<p>ಆರೋಗ್ಯ ಕ್ಷೇತ್ರದ ಯೋಜನೆಗಳನ್ನು ಪ್ರಸ್ತಾಪಿಸಿದ ಅವರು, ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಬರುವ ದಿನಗಳಲ್ಲಿ 16 ಸಾವಿರಕ್ಕೂ ಹೆಚ್ಚು ಹಾಸಿಗೆಗಳನ್ನು ಒದಗಿಸಲಾಗುವುದು ಎಂದು ಹೇಳಿದರು.</p>.<p>ಸಾರಿಗೆ, ಪರಿಸರ ಸಂರಕ್ಷಣೆ, ಪ್ರವಾಸೋದ್ಯಮ ಹಾಗೂ ಇತರ ಕ್ಷೇತ್ರಗಳಲ್ಲಿನ ಸಾಧನೆಗಳನ್ನು ಅವರು ಸದನದ ಮುಂದಿಟ್ಟರು.</p>.<p>‘ಇತ್ತೀಚಿನ ದಿನಗಳಲ್ಲಿ ಮಾತಿನಲ್ಲಿ ಹಿಡಿತ ತಪ್ಪುತ್ತಿದ್ದು, ಘನತೆ ಕುಂದುತ್ತಿದೆ’ ಎಂದು ಹೇಳುವ ಮೂಲಕ ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಅವರು ಸದನದಿಂದ ನಿರ್ಗಮಿಸಿದರು.</p>.<p>ದೆಹಲಿ ಶಾಲೆಗಳ ಶಿಕ್ಷಕರನ್ನು ತರಬೇತಿಗಾಗಿ ವಿದೇಶಗಳಿಗೆ ಕಳುಹಿಸುವುದು ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿ ಲೆಫ್ಟಿನೆಂಟ್ ಗವರ್ನರ್ ಹಾಗೂ ಸರ್ಕಾರದ ನಡುವೆ ಇತ್ತೀಚೆಗೆ ವಾಕ್ಸಮರ ನಡೆದಿತ್ತು. ಈ ಹಿನ್ನೆಲೆಯಲ್ಲಿ ಸಕ್ಸೇನಾ ಅವರಿಂದ ಈ ಮಾತುಗಳನ್ನಾಡಿದರು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>