<p><strong>ನವದೆಹಲಿ: </strong>ಮುಸುಕುಧಾರಿ ವ್ಯಕ್ತಿಯೊಬ್ಬ ತನ್ನ ಎಸ್ಯುವಿ ಕಾರಿನಲ್ಲಿ ದೆಹಲಿ ವಿಧಾನಸಭೆಯ ಗೇಟು ಮುರಿದು ಒಳನುಗ್ಗಿ ಸ್ಪೀಕರ್ ಕಚೇರಿಯ ಹೊರಭಾಗದಲ್ಲಿ ಹೂಗುಚ್ಛ ಇಟ್ಟು, ನಂತರ ಬಂದ ಮಾರ್ಗದಲ್ಲಿಯೇ ಪರಾರಿಯಾಗಿದ್ದಾನೆ. ಭದ್ರತಾ ಸಿಬ್ಬಂದಿಯ ಸಮ್ಮುಖದಲ್ಲಿಯೇ ಮಧ್ಯಾಹ್ನ ಘಟನೆ ನಡೆದಿದ್ದು, ಭಾರಿ ಭದ್ರತಾ ವೈಫಲ್ಯದ ಪ್ರಶ್ನೆ ಎದುರಾಗಿದೆ.</p><p>ಸ್ಥಳಕ್ಕೆ ಧಾವಿಸಿದ ಪೊಲೀಸರ ತಂಡಗಳು, ಬಾಂಬ್ ನಿಷ್ಕ್ರಿಯ ತಂಡ ಹೂಗುಚ್ಛ ಇಟ್ಟ ಪ್ರದೇಶ ಸೇರಿದಂತೆ ಹಲವೆಡೆ ಪರಿಶೀಲನೆ ನಡೆಸಿದವು. ಇಡೀ ನಗರದಲ್ಲಿ ಕಟ್ಟೆಚ್ಚರ ಘೋಷಿಸಲಾಯಿತು.</p><p>‘ಉತ್ತರ ಪ್ರದೇಶದ ನೋಂದಣಿ ಸಂಖ್ಯೆ ಹೊಂದಿದ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಮಧ್ಯಾಹ್ನ 2 ಗಂಟೆ ವೇಳೆಗೆ ಗೇಟ್ ನಂ.2ರಿಂದ ಒಳಪ್ರವೇಶಿಸಿದ್ದ. ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಕಚೇರಿ ಮುಂದೆ ಹೂಗುಚ್ಛ ಇಟ್ಟು ಅಲ್ಲಿಂದ ಪರಾರಿಯಾದ’ ಎಂದು ದೆಹಲಿ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಪೊಲೀಸ್ ವಿಶೇಷ ಆಯುಕ್ತ (ಕಾನೂನು ಹಾಗೂ ಸುವ್ಯವಸ್ಥೆ) ರವೀಂದ್ರ ಯಾದವ್ ಅವರು ಸ್ಥಳಕ್ಕೆ ಧಾವಿಸಿ, ಘಟನೆಯ ಕುರಿತಂತೆ ಮಾಹಿತಿ ಕಲೆಹಾಕಿದರು.</p><p>‘ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಉತ್ತರ ದೆಹಲಿಯಲ್ಲಿ ಬಂಧಿಸಲಾಗಿದೆ. ಕಾರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಪಿಎನ್ಜಿಗೆ ಅರ್ಜಿ ಸಲ್ಲಿಸಿದರೆ ಮಾತ್ರ ಉದ್ಯಮಗಳಿಗೆ LPG ಪೂರೈಕೆ: ದೆಹಲಿ ಸರ್ಕಾರ.ಮಿಲಿಟರಿ ಸಾಮರ್ಥ್ಯವನ್ನೇ ಬದಲಿಸಬಲ್ಲ ಭಾರತದ 1,000-ಕಿಲೋ ಬಾಂಬ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮುಸುಕುಧಾರಿ ವ್ಯಕ್ತಿಯೊಬ್ಬ ತನ್ನ ಎಸ್ಯುವಿ ಕಾರಿನಲ್ಲಿ ದೆಹಲಿ ವಿಧಾನಸಭೆಯ ಗೇಟು ಮುರಿದು ಒಳನುಗ್ಗಿ ಸ್ಪೀಕರ್ ಕಚೇರಿಯ ಹೊರಭಾಗದಲ್ಲಿ ಹೂಗುಚ್ಛ ಇಟ್ಟು, ನಂತರ ಬಂದ ಮಾರ್ಗದಲ್ಲಿಯೇ ಪರಾರಿಯಾಗಿದ್ದಾನೆ. ಭದ್ರತಾ ಸಿಬ್ಬಂದಿಯ ಸಮ್ಮುಖದಲ್ಲಿಯೇ ಮಧ್ಯಾಹ್ನ ಘಟನೆ ನಡೆದಿದ್ದು, ಭಾರಿ ಭದ್ರತಾ ವೈಫಲ್ಯದ ಪ್ರಶ್ನೆ ಎದುರಾಗಿದೆ.</p><p>ಸ್ಥಳಕ್ಕೆ ಧಾವಿಸಿದ ಪೊಲೀಸರ ತಂಡಗಳು, ಬಾಂಬ್ ನಿಷ್ಕ್ರಿಯ ತಂಡ ಹೂಗುಚ್ಛ ಇಟ್ಟ ಪ್ರದೇಶ ಸೇರಿದಂತೆ ಹಲವೆಡೆ ಪರಿಶೀಲನೆ ನಡೆಸಿದವು. ಇಡೀ ನಗರದಲ್ಲಿ ಕಟ್ಟೆಚ್ಚರ ಘೋಷಿಸಲಾಯಿತು.</p><p>‘ಉತ್ತರ ಪ್ರದೇಶದ ನೋಂದಣಿ ಸಂಖ್ಯೆ ಹೊಂದಿದ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಮಧ್ಯಾಹ್ನ 2 ಗಂಟೆ ವೇಳೆಗೆ ಗೇಟ್ ನಂ.2ರಿಂದ ಒಳಪ್ರವೇಶಿಸಿದ್ದ. ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಕಚೇರಿ ಮುಂದೆ ಹೂಗುಚ್ಛ ಇಟ್ಟು ಅಲ್ಲಿಂದ ಪರಾರಿಯಾದ’ ಎಂದು ದೆಹಲಿ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಪೊಲೀಸ್ ವಿಶೇಷ ಆಯುಕ್ತ (ಕಾನೂನು ಹಾಗೂ ಸುವ್ಯವಸ್ಥೆ) ರವೀಂದ್ರ ಯಾದವ್ ಅವರು ಸ್ಥಳಕ್ಕೆ ಧಾವಿಸಿ, ಘಟನೆಯ ಕುರಿತಂತೆ ಮಾಹಿತಿ ಕಲೆಹಾಕಿದರು.</p><p>‘ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಉತ್ತರ ದೆಹಲಿಯಲ್ಲಿ ಬಂಧಿಸಲಾಗಿದೆ. ಕಾರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಪಿಎನ್ಜಿಗೆ ಅರ್ಜಿ ಸಲ್ಲಿಸಿದರೆ ಮಾತ್ರ ಉದ್ಯಮಗಳಿಗೆ LPG ಪೂರೈಕೆ: ದೆಹಲಿ ಸರ್ಕಾರ.ಮಿಲಿಟರಿ ಸಾಮರ್ಥ್ಯವನ್ನೇ ಬದಲಿಸಬಲ್ಲ ಭಾರತದ 1,000-ಕಿಲೋ ಬಾಂಬ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>