<p><strong>ಗುರುಗ್ರಾಮ</strong>: ದೆಹಲಿ ಕೆಂಪುಕೋಟೆ ಬಳಿ ಸ್ಫೋಟಗೊಂಡ ಕಾರಿನ ಮೊದಲ ಮಾಲೀಕರಿಗೆ ಬಾಡಿಗೆ ಮನೆ ನೀಡಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.</p>.<p>ಹರಿಯಾಣದಲ್ಲಿ ನೋಂದಣಿಯಾಗಿರುವ ಕಾರಿನ ಮೊದಲ ಮಾಲೀಕ ಮೊಹಮ್ಮದ್ ಸಲ್ಮಾನ್ ಅವರು 2016ರಿಂದ 2020ರವರೆಗೆ ಗುರುಗ್ರಾಮದ ಬಾಡಿಗೆ ಮನೆಯೊಂದರಲ್ಲಿದ್ದರು. ಆ ಮನೆಯ ಮಾಲೀಕ ದಿನೇಶ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ.</p>.<p>‘ನಮ್ಮ ಶಾಂತಿನಗರದ ಮನೆಯಲ್ಲಿ ಸಲ್ಮಾನ್, ಅವರ ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳ ಜೊತೆ ನಾಲ್ಕು ವರ್ಷ ವಾಸಿಸಿದ್ದರು. ಬಳಿಕ ಗುರುಗ್ರಾಮದಲ್ಲಿನ ತಮ್ಮ ಸ್ವಂತ ಫ್ಲ್ಯಾಟ್ಗೆ ಸ್ಥಳಾಂತರಗೊಂಡಿದ್ದರು’ ಎಂದು ದಿನೇಶ್ ಕುಟುಂಬಸ್ಥರು ತಿಳಿಸಿದ್ದಾರೆ.</p>.<p>ಸಲ್ಮಾನ್ ಅವರು ತಮ್ಮ ಕಾರನ್ನು ದೆಹಲಿಯ ಓಕ್ಲಾ ನಿವಾಸಿ ದೇವೇಂದ್ರ ಅವರಿಗೆ ಮಾರಾಟ ಮಾಡಿದ್ದರು. ದೇವೇಂದ್ರ ಅವರಿಂದ ಅದೇ ಕಾರನ್ನು ಖರೀದಿಸಿದ್ದ ಅಂಬಾಲದ ನಿವಾಸಿಯೊಬ್ಬರು ಪುಲ್ವಾಮದ ತಾರೀಕ್ ಎಂಬವರಿಗೆ ಮಾರಾಟ ಮಾಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುರುಗ್ರಾಮ</strong>: ದೆಹಲಿ ಕೆಂಪುಕೋಟೆ ಬಳಿ ಸ್ಫೋಟಗೊಂಡ ಕಾರಿನ ಮೊದಲ ಮಾಲೀಕರಿಗೆ ಬಾಡಿಗೆ ಮನೆ ನೀಡಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.</p>.<p>ಹರಿಯಾಣದಲ್ಲಿ ನೋಂದಣಿಯಾಗಿರುವ ಕಾರಿನ ಮೊದಲ ಮಾಲೀಕ ಮೊಹಮ್ಮದ್ ಸಲ್ಮಾನ್ ಅವರು 2016ರಿಂದ 2020ರವರೆಗೆ ಗುರುಗ್ರಾಮದ ಬಾಡಿಗೆ ಮನೆಯೊಂದರಲ್ಲಿದ್ದರು. ಆ ಮನೆಯ ಮಾಲೀಕ ದಿನೇಶ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ.</p>.<p>‘ನಮ್ಮ ಶಾಂತಿನಗರದ ಮನೆಯಲ್ಲಿ ಸಲ್ಮಾನ್, ಅವರ ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳ ಜೊತೆ ನಾಲ್ಕು ವರ್ಷ ವಾಸಿಸಿದ್ದರು. ಬಳಿಕ ಗುರುಗ್ರಾಮದಲ್ಲಿನ ತಮ್ಮ ಸ್ವಂತ ಫ್ಲ್ಯಾಟ್ಗೆ ಸ್ಥಳಾಂತರಗೊಂಡಿದ್ದರು’ ಎಂದು ದಿನೇಶ್ ಕುಟುಂಬಸ್ಥರು ತಿಳಿಸಿದ್ದಾರೆ.</p>.<p>ಸಲ್ಮಾನ್ ಅವರು ತಮ್ಮ ಕಾರನ್ನು ದೆಹಲಿಯ ಓಕ್ಲಾ ನಿವಾಸಿ ದೇವೇಂದ್ರ ಅವರಿಗೆ ಮಾರಾಟ ಮಾಡಿದ್ದರು. ದೇವೇಂದ್ರ ಅವರಿಂದ ಅದೇ ಕಾರನ್ನು ಖರೀದಿಸಿದ್ದ ಅಂಬಾಲದ ನಿವಾಸಿಯೊಬ್ಬರು ಪುಲ್ವಾಮದ ತಾರೀಕ್ ಎಂಬವರಿಗೆ ಮಾರಾಟ ಮಾಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>