<p><strong>ನವದೆಹಲಿ</strong>: ದೇಶದ ರಾಜಧಾನಿ ನವದೆಹಲಿಯ ಕೆಂಪು ಕೋಟೆ ಸಮೀಪದ ಮೆಟ್ರೊ ನಿಲ್ದಾಣ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರದ ಗೃಹ ವ್ಯವಹಾರಗಳ ಸಚಿವಾಲಯವು(ಎಂಎಚ್ಎ) ರಾಷ್ಟ್ರೀಯ ತನಿಖಾ ಸಂಸ್ಥೆಗೆ(ಎನ್ಐಎ) ವರ್ಗಾಯಿಸಿದೆ ಎಂದು ಮೂಲಗಳು ತಿಳಿಸಿವೆ.</p><p>ಸ್ಫೋಟದಲ್ಲಿ 12 ಮಂದಿ ಮೃತಪಟ್ಟಿದ್ದು, ಇದೊಂದು ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಿರುವ ಕೇಂದ್ರ ಸರ್ಕಾರ, ಎನ್ಐಎಗೆ ಪ್ರಕರಣ ವರ್ಗಾಯಿಸಿದೆ ಎಂದು ಮೂಲಗಳು ತಿಳಿಸಿವೆ.</p><p>ಸ್ಫೋಟದ ಬೆನ್ನಲ್ಲೇ ಕೇಂದ್ರದ ಗೃಹ ಸಚಿವ ಅಮಿತ್ ಶಾ ರಾಜಧಾನಿ ದೆಹಲಿ ಮತ್ತು ದೇಶದ ವಿವಿಧೆಡೆ ಭದ್ರತಾ ಪರಿಶೀಲನೆ ನಡೆಸಿದ ಕೆಲ ಗಂಟೆಗಳ ಬಳಿಕ ಈ ಆದೇಶ ಬಂದಿದೆ.</p><p>ಇದೇವೇಳೆ, ಮಂಗಳವಾರ ಮಧ್ಯಾಹ್ನ ಅಮಿತ್ ಶಾ ಮತ್ತೊಂದು ಭದ್ರತಾ ಸಭೆ ನಡೆಸಿದ್ದಾರೆ.</p><p>ಸ್ಫೋಟ ಕುರಿತಂತೆ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿದ್ದು, ಆಳಕ್ಕೆ ಇಳಿದು ಪರಿಶೀಲನೆ ನಡೆಸಲಿವೆ ಎಂದು ಶಾ ಹೇಳಿದ್ದಾರೆ.</p><p>ಸೋಮವಾರ ಸಂಜೆ ಕೇಂಪುಕೋಟೆ ಮೆಟ್ರೊ ನಿಲ್ದಾಣ ಬಳಿಯ ಸಿಗ್ನಲ್ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರು ಸ್ಫೋಟಗೊಂಡಿದೆ, ಘಟನೆಯಲ್ಲಿ 12 ಮಂದಿ ಮೃತಪಟ್ಟರೆ, ಹಲವರು ಗಾಯಗೊಂಡಿದ್ದರು.</p> .ದೆಹಲಿ ಸ್ಫೋಟ ಪ್ರಕರಣ: ಕಾರು ಚಲಾಯಿಸುತ್ತಿದ್ದ ವ್ಯಕ್ತಿಯ ತಾಯಿಯ ಡಿಎನ್ಎ ಪರೀಕ್ಷೆ.ಸಾವನ್ನು ಕಣ್ಣಾರೆ ಕಂಡೆ.. ಭಯಾನಕ ಸ್ಫೋಟದಲ್ಲಿ ಬದುಕುಳಿದ ಪ್ರತಾಪ್ ಮಾತು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದ ರಾಜಧಾನಿ ನವದೆಹಲಿಯ ಕೆಂಪು ಕೋಟೆ ಸಮೀಪದ ಮೆಟ್ರೊ ನಿಲ್ದಾಣ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರದ ಗೃಹ ವ್ಯವಹಾರಗಳ ಸಚಿವಾಲಯವು(ಎಂಎಚ್ಎ) ರಾಷ್ಟ್ರೀಯ ತನಿಖಾ ಸಂಸ್ಥೆಗೆ(ಎನ್ಐಎ) ವರ್ಗಾಯಿಸಿದೆ ಎಂದು ಮೂಲಗಳು ತಿಳಿಸಿವೆ.</p><p>ಸ್ಫೋಟದಲ್ಲಿ 12 ಮಂದಿ ಮೃತಪಟ್ಟಿದ್ದು, ಇದೊಂದು ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಿರುವ ಕೇಂದ್ರ ಸರ್ಕಾರ, ಎನ್ಐಎಗೆ ಪ್ರಕರಣ ವರ್ಗಾಯಿಸಿದೆ ಎಂದು ಮೂಲಗಳು ತಿಳಿಸಿವೆ.</p><p>ಸ್ಫೋಟದ ಬೆನ್ನಲ್ಲೇ ಕೇಂದ್ರದ ಗೃಹ ಸಚಿವ ಅಮಿತ್ ಶಾ ರಾಜಧಾನಿ ದೆಹಲಿ ಮತ್ತು ದೇಶದ ವಿವಿಧೆಡೆ ಭದ್ರತಾ ಪರಿಶೀಲನೆ ನಡೆಸಿದ ಕೆಲ ಗಂಟೆಗಳ ಬಳಿಕ ಈ ಆದೇಶ ಬಂದಿದೆ.</p><p>ಇದೇವೇಳೆ, ಮಂಗಳವಾರ ಮಧ್ಯಾಹ್ನ ಅಮಿತ್ ಶಾ ಮತ್ತೊಂದು ಭದ್ರತಾ ಸಭೆ ನಡೆಸಿದ್ದಾರೆ.</p><p>ಸ್ಫೋಟ ಕುರಿತಂತೆ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿದ್ದು, ಆಳಕ್ಕೆ ಇಳಿದು ಪರಿಶೀಲನೆ ನಡೆಸಲಿವೆ ಎಂದು ಶಾ ಹೇಳಿದ್ದಾರೆ.</p><p>ಸೋಮವಾರ ಸಂಜೆ ಕೇಂಪುಕೋಟೆ ಮೆಟ್ರೊ ನಿಲ್ದಾಣ ಬಳಿಯ ಸಿಗ್ನಲ್ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರು ಸ್ಫೋಟಗೊಂಡಿದೆ, ಘಟನೆಯಲ್ಲಿ 12 ಮಂದಿ ಮೃತಪಟ್ಟರೆ, ಹಲವರು ಗಾಯಗೊಂಡಿದ್ದರು.</p> .ದೆಹಲಿ ಸ್ಫೋಟ ಪ್ರಕರಣ: ಕಾರು ಚಲಾಯಿಸುತ್ತಿದ್ದ ವ್ಯಕ್ತಿಯ ತಾಯಿಯ ಡಿಎನ್ಎ ಪರೀಕ್ಷೆ.ಸಾವನ್ನು ಕಣ್ಣಾರೆ ಕಂಡೆ.. ಭಯಾನಕ ಸ್ಫೋಟದಲ್ಲಿ ಬದುಕುಳಿದ ಪ್ರತಾಪ್ ಮಾತು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>