<p><strong>ನವದೆಹಲಿ</strong>: ಇಲ್ಲಿನ ಕೆಂಪುಕೋಟೆ ಮೆಟ್ರೊ ರೈಲು ನಿಲ್ದಾಣದ ಸಮೀಪ ಸೋಮವಾರ ಸಂಭವಿಸಿದ್ದ ಕಾರಿನಲ್ಲಿ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಹಾಗೂ ಇತರ ನ್ಯಾಯಾಧೀಶರು ಮಂಗಳವಾರ ಸಾಂತ್ವನ ಹೇಳಿದ್ದಾರೆ.</p>.<p>‘ಕಾರು ಸ್ಫೋಟವು ಹೇಡಿತನದ ಕೃತ್ಯ. ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾವು ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇವೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇವೆ’ ಎಂದು ಸಿಜೆಐ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.</p>.<p>‘ಜೀವಹಾನಿಯ ನೋವನ್ನು ಯಾವುದೇ ಪದಗಳು ಕಡಿಮೆ ಮಾಡಲು ಸಾಧ್ಯವಿಲ್ಲ. ಆದರೆ, ಈ ದುಃಖದ ಸಮಯದಲ್ಲಿ ರಾಷ್ಟ್ರದ ಸಾಮೂಹಿಕ ಸಹಾನುಭೂತಿ ಮತ್ತು ಒಗ್ಗಟ್ಟು ಸ್ವಲ್ಪ ಸಾಂತ್ವನ ನೀಡುತ್ತದೆ. ಈ ಕ್ಷಣದಲ್ಲಿ ನಾವು ದುಃಖಿತರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಇಲ್ಲಿನ ಕೆಂಪುಕೋಟೆ ಮೆಟ್ರೊ ರೈಲು ನಿಲ್ದಾಣದ ಸಮೀಪ ಸೋಮವಾರ ಸಂಭವಿಸಿದ್ದ ಕಾರಿನಲ್ಲಿ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಹಾಗೂ ಇತರ ನ್ಯಾಯಾಧೀಶರು ಮಂಗಳವಾರ ಸಾಂತ್ವನ ಹೇಳಿದ್ದಾರೆ.</p>.<p>‘ಕಾರು ಸ್ಫೋಟವು ಹೇಡಿತನದ ಕೃತ್ಯ. ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾವು ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇವೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇವೆ’ ಎಂದು ಸಿಜೆಐ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.</p>.<p>‘ಜೀವಹಾನಿಯ ನೋವನ್ನು ಯಾವುದೇ ಪದಗಳು ಕಡಿಮೆ ಮಾಡಲು ಸಾಧ್ಯವಿಲ್ಲ. ಆದರೆ, ಈ ದುಃಖದ ಸಮಯದಲ್ಲಿ ರಾಷ್ಟ್ರದ ಸಾಮೂಹಿಕ ಸಹಾನುಭೂತಿ ಮತ್ತು ಒಗ್ಗಟ್ಟು ಸ್ವಲ್ಪ ಸಾಂತ್ವನ ನೀಡುತ್ತದೆ. ಈ ಕ್ಷಣದಲ್ಲಿ ನಾವು ದುಃಖಿತರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>