<p><strong>ನವದೆಹಲಿ:</strong> ಇಲ್ಲಿನ ಕೆಂಪುಕೋಟೆ ಬಳಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣವೇ ಸರ್ವಪಕ್ಷ ಸಭೆ ಕರೆದು, ಚರ್ಚೆ ನಡೆಸಬೇಕು. ಜತೆಗೆ ಡಿಸೆಂಬರ್ 1ರಿಂದ ಪ್ರಾರಂಭವಾಗಲಿರುವ ಸಂಸತ್ ಚಳಿಗಾಲದ ಅಧಿವೇಶನವನ್ನು ಮುಂಚಿತವಾಗಿಯೇ ಆರಂಭಿಸಬೇಕು ಎಂದು ಕಾಂಗ್ರೆಸ್ ಗುರುವಾರ ಆಗ್ರಹಿಸಿದೆ.</p>.<p>ಕಾಂಗ್ರೆಸ್ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥರಾದ ಪವನ್ ಖೇರಾ ಅವರು ಈ ಬಗ್ಗೆ ಮಾತನಾಡಿ, ‘ಪೆಹಲ್ಗಾಮ್ ದಾಳಿಯ ಬಳಿಕ ಮುಂದಿನ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧ ಎಂದು ಪರಿಗಣಿಸಲಾಗುತ್ತದೆ ಎಂಬ ನೀತಿಯನ್ನು ಕೇಂದ್ರ ಸರ್ಕಾರ ಘೋಷಿಸಿತ್ತು. ಈಗ ಅದೇ ನೀತಿಗೆ ಸರ್ಕಾರ ಬದ್ಧವಾಗಿದೆಯೇ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಸ್ಫೋಟ ನಡೆದು 48 ಗಂಟೆಗಳಾದ ಬಳಿಕ ಕೇಂದ್ರ ಸಂಪುಟವು ಇದು ಭಯೋತ್ಪಾದಕ ಕೃತ್ಯ ಎಂಬುದನ್ನು ಹೇಳಿದೆ. ಈ ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ ಮುಂಬೈ ದಾಳಿ ನಡೆದಾಗ ಅಂದಿನ ಗೃಹ ಸಚಿವರಾಗಿದ್ದ ಶಿವರಾಜ್ ಪಾಟಿಲ್ ಅವರು ಘಟನೆಯ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಈಗ ಸರ್ಕಾರದ ಯಾರಾದರು ಒಬ್ಬರು ಈ ಘಟನೆಯ ಹೊಣೆಗಾರಿಕೆ ಹೊರಲೇಬೇಕು’ ಎಂದೂ ಖೇರಾ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇಲ್ಲಿನ ಕೆಂಪುಕೋಟೆ ಬಳಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣವೇ ಸರ್ವಪಕ್ಷ ಸಭೆ ಕರೆದು, ಚರ್ಚೆ ನಡೆಸಬೇಕು. ಜತೆಗೆ ಡಿಸೆಂಬರ್ 1ರಿಂದ ಪ್ರಾರಂಭವಾಗಲಿರುವ ಸಂಸತ್ ಚಳಿಗಾಲದ ಅಧಿವೇಶನವನ್ನು ಮುಂಚಿತವಾಗಿಯೇ ಆರಂಭಿಸಬೇಕು ಎಂದು ಕಾಂಗ್ರೆಸ್ ಗುರುವಾರ ಆಗ್ರಹಿಸಿದೆ.</p>.<p>ಕಾಂಗ್ರೆಸ್ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥರಾದ ಪವನ್ ಖೇರಾ ಅವರು ಈ ಬಗ್ಗೆ ಮಾತನಾಡಿ, ‘ಪೆಹಲ್ಗಾಮ್ ದಾಳಿಯ ಬಳಿಕ ಮುಂದಿನ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧ ಎಂದು ಪರಿಗಣಿಸಲಾಗುತ್ತದೆ ಎಂಬ ನೀತಿಯನ್ನು ಕೇಂದ್ರ ಸರ್ಕಾರ ಘೋಷಿಸಿತ್ತು. ಈಗ ಅದೇ ನೀತಿಗೆ ಸರ್ಕಾರ ಬದ್ಧವಾಗಿದೆಯೇ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಸ್ಫೋಟ ನಡೆದು 48 ಗಂಟೆಗಳಾದ ಬಳಿಕ ಕೇಂದ್ರ ಸಂಪುಟವು ಇದು ಭಯೋತ್ಪಾದಕ ಕೃತ್ಯ ಎಂಬುದನ್ನು ಹೇಳಿದೆ. ಈ ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ ಮುಂಬೈ ದಾಳಿ ನಡೆದಾಗ ಅಂದಿನ ಗೃಹ ಸಚಿವರಾಗಿದ್ದ ಶಿವರಾಜ್ ಪಾಟಿಲ್ ಅವರು ಘಟನೆಯ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಈಗ ಸರ್ಕಾರದ ಯಾರಾದರು ಒಬ್ಬರು ಈ ಘಟನೆಯ ಹೊಣೆಗಾರಿಕೆ ಹೊರಲೇಬೇಕು’ ಎಂದೂ ಖೇರಾ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>