<p><strong>ಶ್ರೀನಗರ:</strong> ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ್ದ ಕಾರು ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಸೋಮವಾರ ಕಾಶ್ಮೀರ ಕಣಿವೆಯಾದ್ಯಂತ ಹಲವು ಸ್ಥಳಗಳಲ್ಲಿ ಶೋಧಕಾರ್ಯ ನಡೆಸಿದ್ದಾರೆ ಎಂದು ವರದಿಯಾಗಿದೆ.</p><p>ಕಾಶ್ಮೀರದ ಶೋಪಿಯಾನ್, ಪುಲ್ವಾಮಾ, ಕುಲ್ಗಾಮ್ ಜಿಲ್ಲೆಗಳ ಎಂಟು ಸ್ಥಳಗಳಲ್ಲಿ ಶೋಧ ಕಾರ್ಯ ನಡೆದಿದೆ. ಪುಲ್ವಾಮಾ ಜಿಲ್ಲೆಯ ಕೊಯಿಲ್, ಚಂದ್ಗಮ್, ಮಲಂಗ್ಪೋರಾ ಮತ್ತು ಸಂಬೂರಾ ಪ್ರದೇಶಗಳಲ್ಲಿಯೂ ದಾಳಿ ನಡೆಸಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.</p><p>ಭಯೋತ್ಪಾದಕ ಜಾಲ ಮತ್ತು ಅದಕ್ಕೆ ಬೆಂಬಲ ನೀಡುವ ವ್ಯವಸ್ಥೆಗಳನ್ನು ಭೇದಿಸುವ ಪ್ರಯತ್ನಗಳ ಭಾಗವಾಗಿ ಜೆಇಐ ಸದಸ್ಯರು ಹಾಗೂ ಅವರ ಸಹಚರರಿಗೆ ಸೇರಿದ ಮನೆಗಳು, ಇತರ ತಾಣಗಳನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.</p><p>ಎನ್ಐಎ ಅಧಿಕಾರಿಗಳು ಶೋಪಿಯಾನ್ನಲ್ಲಿರುವ ಮೌಲ್ವಿ ಇರ್ಫಾನ್ ಅಹ್ಮದ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಇರ್ಫಾನ್ ಅಹ್ಮದ್, ಫರೀದಾಬಾದ್ನ ಅಲ್–ಫಲಾಹ್ ವಿಶ್ವವಿದ್ಯಾಲಯದ ‘ವೈಟ್ ಕಾಲರ್’ ಭಯೋತ್ಪಾದನೆಯ ಜಾಲದ ಮಾಸ್ಟರ್ ಮೈಂಡ್ ಎಂದು ಗುರುತಿಸಲಾಗಿದೆ.</p><p>ನವೆಂಬರ್ 10ರಂದು ದೆಹಲಿಯ ಕೆಂಪುಕೋಟೆ ಬಳಿ ನಡೆದಿದ್ದ ಕಾರು ಸ್ಫೋಟದಲ್ಲಿ 15 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಈವರೆಗೆ ಏಳು ಜನರನ್ನು ಬಂಧಿಸಲಾಗಿದೆ. ಜಮ್ಮು– ಕಾಶ್ಮೀರ ಮತ್ತು ಉತ್ತರ ಪ್ರದೇಶದಾದ್ಯಂತ ತನಿಖೆಯನ್ನು ವಿಸ್ತರಿಸಲಾಗಿದೆ.</p>.ದೆಹಲಿ ಕಾರು ಸ್ಫೋಟ ಪ್ರಕರಣ: ಜಸೀರ್ ಎನ್ಐಎ ಕಸ್ಟಡಿ: ಏಳು ದಿನ ವಿಸ್ತರಣೆ.ದೆಹಲಿ ಸ್ಫೋಟ: ‘ರಸಗೊಬ್ಬರ’ ಎಂದು ಹೇಳಿ ಸ್ಫೋಟಕ ಸಂಗ್ರಹಿಸಿದ್ದರು .ದೆಹಲಿ ಸ್ಫೋಟ: ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ ಸೇರಿ 25 ಸ್ಥಳಗಳಲ್ಲಿ ED ದಾಳಿ.ದೆಹಲಿ ಸ್ಫೋಟ: ಪ್ರಮುಖ ಸಂಚುಕೋರನ ಬಂಧಿಸಿದ ಎನ್ಐಎ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ್ದ ಕಾರು ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಸೋಮವಾರ ಕಾಶ್ಮೀರ ಕಣಿವೆಯಾದ್ಯಂತ ಹಲವು ಸ್ಥಳಗಳಲ್ಲಿ ಶೋಧಕಾರ್ಯ ನಡೆಸಿದ್ದಾರೆ ಎಂದು ವರದಿಯಾಗಿದೆ.</p><p>ಕಾಶ್ಮೀರದ ಶೋಪಿಯಾನ್, ಪುಲ್ವಾಮಾ, ಕುಲ್ಗಾಮ್ ಜಿಲ್ಲೆಗಳ ಎಂಟು ಸ್ಥಳಗಳಲ್ಲಿ ಶೋಧ ಕಾರ್ಯ ನಡೆದಿದೆ. ಪುಲ್ವಾಮಾ ಜಿಲ್ಲೆಯ ಕೊಯಿಲ್, ಚಂದ್ಗಮ್, ಮಲಂಗ್ಪೋರಾ ಮತ್ತು ಸಂಬೂರಾ ಪ್ರದೇಶಗಳಲ್ಲಿಯೂ ದಾಳಿ ನಡೆಸಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.</p><p>ಭಯೋತ್ಪಾದಕ ಜಾಲ ಮತ್ತು ಅದಕ್ಕೆ ಬೆಂಬಲ ನೀಡುವ ವ್ಯವಸ್ಥೆಗಳನ್ನು ಭೇದಿಸುವ ಪ್ರಯತ್ನಗಳ ಭಾಗವಾಗಿ ಜೆಇಐ ಸದಸ್ಯರು ಹಾಗೂ ಅವರ ಸಹಚರರಿಗೆ ಸೇರಿದ ಮನೆಗಳು, ಇತರ ತಾಣಗಳನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.</p><p>ಎನ್ಐಎ ಅಧಿಕಾರಿಗಳು ಶೋಪಿಯಾನ್ನಲ್ಲಿರುವ ಮೌಲ್ವಿ ಇರ್ಫಾನ್ ಅಹ್ಮದ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಇರ್ಫಾನ್ ಅಹ್ಮದ್, ಫರೀದಾಬಾದ್ನ ಅಲ್–ಫಲಾಹ್ ವಿಶ್ವವಿದ್ಯಾಲಯದ ‘ವೈಟ್ ಕಾಲರ್’ ಭಯೋತ್ಪಾದನೆಯ ಜಾಲದ ಮಾಸ್ಟರ್ ಮೈಂಡ್ ಎಂದು ಗುರುತಿಸಲಾಗಿದೆ.</p><p>ನವೆಂಬರ್ 10ರಂದು ದೆಹಲಿಯ ಕೆಂಪುಕೋಟೆ ಬಳಿ ನಡೆದಿದ್ದ ಕಾರು ಸ್ಫೋಟದಲ್ಲಿ 15 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಈವರೆಗೆ ಏಳು ಜನರನ್ನು ಬಂಧಿಸಲಾಗಿದೆ. ಜಮ್ಮು– ಕಾಶ್ಮೀರ ಮತ್ತು ಉತ್ತರ ಪ್ರದೇಶದಾದ್ಯಂತ ತನಿಖೆಯನ್ನು ವಿಸ್ತರಿಸಲಾಗಿದೆ.</p>.ದೆಹಲಿ ಕಾರು ಸ್ಫೋಟ ಪ್ರಕರಣ: ಜಸೀರ್ ಎನ್ಐಎ ಕಸ್ಟಡಿ: ಏಳು ದಿನ ವಿಸ್ತರಣೆ.ದೆಹಲಿ ಸ್ಫೋಟ: ‘ರಸಗೊಬ್ಬರ’ ಎಂದು ಹೇಳಿ ಸ್ಫೋಟಕ ಸಂಗ್ರಹಿಸಿದ್ದರು .ದೆಹಲಿ ಸ್ಫೋಟ: ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ ಸೇರಿ 25 ಸ್ಥಳಗಳಲ್ಲಿ ED ದಾಳಿ.ದೆಹಲಿ ಸ್ಫೋಟ: ಪ್ರಮುಖ ಸಂಚುಕೋರನ ಬಂಧಿಸಿದ ಎನ್ಐಎ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>