<p><strong>ನವದೆಹಲಿ:</strong> ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದ ವಿಚಾರವು ಬುಧವಾರ ನಡೆದ ಗೃಹ ವ್ಯವಹಾರಗಳ ಕುರಿತ ಸಂಸದೀಯ ಸ್ಥಾಯಿ ಸಮಿತಿ ಸಭೆಯಲ್ಲಿ ಪ್ರಸ್ತಾಪಗೊಂಡಿತು. ಆದರೆ, ಈ ಕುರಿತು ಚರ್ಚೆ ನಡೆಸಲು ಅವಕಾಶ ನೀಡಲು ಸಮಿತಿ ಅಧ್ಯಕ್ಷರು ನಿರಾಕರಿಸಿದರು ಎಂದು ಮೂಲಗಳು ಹೇಳಿವೆ.</p>.<p>‘ಸಮಿತಿ ಅಧ್ಯಕ್ಷರಾದ ರಾಧಾಮೋಹನ್ ಅಗರ್ವಾಲ್ ಅವರು ಈ ವಿಚಾರ ಕುರಿತು ಚರ್ಚೆ ನಡೆಸಬೇಕು ಎಂಬ ಬೇಡಿಕೆಯನ್ನು ತಿರಸ್ಕರಿಸಿದರು. ಸ್ಫೋಟ ಕುರಿತು ಯಾವುದೇ ಸ್ವಯಂ ಪ್ರೇರಿತ ಹೇಳಿಕೆಗಳನ್ನು ನೀಡುವುದಕ್ಕೂ ಅನುಮತಿ ನೀಡಲಿಲ್ಲ’ ಎಂದು ಮೂಲಗಳು ಹೇಳಿವೆ.</p>.<p>‘ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟ ಕುರಿತು ಟಿಎಂಸಿ ಸಂಸದರೊಬ್ಬರು ಸಮಿತಿ ಸಭೆಯಲ್ಲಿ ಪ್ರಸ್ತಾಪಿಸಿದರು. ಈ ವಿಚಾರದಲ್ಲಿ ಗುಪ್ತಚರ ಸಂಸ್ಥೆಯಿಂದಾದ ವೈಫಲ್ಯದ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದರು’ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಸಮಿತಿ ಸದಸ್ಯರೊಬ್ಬರು ಹೇಳಿದ್ದಾರೆ.</p>.<p>‘ವಿಪತ್ತು ನಿರ್ವಹಣೆ’ ಕುರಿತು ಚರ್ಚಿಸುವುದಕ್ಕಾಗಿ ಸಂಸದೀಯ ಸ್ಥಾಯಿ ಸಮಿತಿ ಸಭೆ ನಡೆಯಿತು. ಈ ವಿಚಾರವಾಗಿ ಗೃಹ ಸಚಿವಾಲಯ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಎನ್ಡಿಎಂಎ), ರಾಷ್ಟ್ರೀಯ ವಿಪತ್ತು ಸ್ಪಂದನೆ ಪಡೆ(ಎನ್ಡಿಆರ್ಎಫ್), ರಾಷ್ಟ್ರೀಯ ವಿಪತ್ತು ನಿರ್ವಹಣೆ ಸಂಸ್ಥೆ(ಎನ್ಐಡಿಎಂ) ಹಾಗೂ ಅಗ್ನಿಶಾಮಕ ಸೇವೆಗಳು, ಗೃಹರಕ್ಷಕ ದಳ ಹಾಗೂ ನಾಗರಿಕ ರಕ್ಷಣೆ ಮಹಾನಿರ್ದೇಶನಾಲಯದ ಅಭಿಪ್ರಾಯಗಳನ್ನು ಸಮಿತಿಯು ಆಲಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದ ವಿಚಾರವು ಬುಧವಾರ ನಡೆದ ಗೃಹ ವ್ಯವಹಾರಗಳ ಕುರಿತ ಸಂಸದೀಯ ಸ್ಥಾಯಿ ಸಮಿತಿ ಸಭೆಯಲ್ಲಿ ಪ್ರಸ್ತಾಪಗೊಂಡಿತು. ಆದರೆ, ಈ ಕುರಿತು ಚರ್ಚೆ ನಡೆಸಲು ಅವಕಾಶ ನೀಡಲು ಸಮಿತಿ ಅಧ್ಯಕ್ಷರು ನಿರಾಕರಿಸಿದರು ಎಂದು ಮೂಲಗಳು ಹೇಳಿವೆ.</p>.<p>‘ಸಮಿತಿ ಅಧ್ಯಕ್ಷರಾದ ರಾಧಾಮೋಹನ್ ಅಗರ್ವಾಲ್ ಅವರು ಈ ವಿಚಾರ ಕುರಿತು ಚರ್ಚೆ ನಡೆಸಬೇಕು ಎಂಬ ಬೇಡಿಕೆಯನ್ನು ತಿರಸ್ಕರಿಸಿದರು. ಸ್ಫೋಟ ಕುರಿತು ಯಾವುದೇ ಸ್ವಯಂ ಪ್ರೇರಿತ ಹೇಳಿಕೆಗಳನ್ನು ನೀಡುವುದಕ್ಕೂ ಅನುಮತಿ ನೀಡಲಿಲ್ಲ’ ಎಂದು ಮೂಲಗಳು ಹೇಳಿವೆ.</p>.<p>‘ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟ ಕುರಿತು ಟಿಎಂಸಿ ಸಂಸದರೊಬ್ಬರು ಸಮಿತಿ ಸಭೆಯಲ್ಲಿ ಪ್ರಸ್ತಾಪಿಸಿದರು. ಈ ವಿಚಾರದಲ್ಲಿ ಗುಪ್ತಚರ ಸಂಸ್ಥೆಯಿಂದಾದ ವೈಫಲ್ಯದ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದರು’ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಸಮಿತಿ ಸದಸ್ಯರೊಬ್ಬರು ಹೇಳಿದ್ದಾರೆ.</p>.<p>‘ವಿಪತ್ತು ನಿರ್ವಹಣೆ’ ಕುರಿತು ಚರ್ಚಿಸುವುದಕ್ಕಾಗಿ ಸಂಸದೀಯ ಸ್ಥಾಯಿ ಸಮಿತಿ ಸಭೆ ನಡೆಯಿತು. ಈ ವಿಚಾರವಾಗಿ ಗೃಹ ಸಚಿವಾಲಯ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಎನ್ಡಿಎಂಎ), ರಾಷ್ಟ್ರೀಯ ವಿಪತ್ತು ಸ್ಪಂದನೆ ಪಡೆ(ಎನ್ಡಿಆರ್ಎಫ್), ರಾಷ್ಟ್ರೀಯ ವಿಪತ್ತು ನಿರ್ವಹಣೆ ಸಂಸ್ಥೆ(ಎನ್ಐಡಿಎಂ) ಹಾಗೂ ಅಗ್ನಿಶಾಮಕ ಸೇವೆಗಳು, ಗೃಹರಕ್ಷಕ ದಳ ಹಾಗೂ ನಾಗರಿಕ ರಕ್ಷಣೆ ಮಹಾನಿರ್ದೇಶನಾಲಯದ ಅಭಿಪ್ರಾಯಗಳನ್ನು ಸಮಿತಿಯು ಆಲಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>