<p>ಶ್ರೀನಗರ: ನವದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಲಾಯಿಸುತ್ತಿದ್ದ ವ್ಯಕ್ತಿಯ ತಾಯಿಯನ್ನು ಡಿಎನ್ಎ ಪರೀಕ್ಷೆಗಾಗಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಿಂದ ಪೊಲೀಸರು ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>‘ಸ್ಫೋಟದ ಸ್ಥಳದಲ್ಲಿ ಪತ್ತೆಯಾದ ಶಂಕಿತನ ದೇಹದ ಭಾಗಗಳನ್ನು ಸಂಗ್ರಹಿಸಿದ್ದು, ಶಂಕಿತನ ಡಿಎನ್ಎಗೆ ಆತನ ತಾಯಿ ಎನ್ನಲಾದ ಮಹಿಳೆಯ ಡಿಎನ್ಎ ಹೊಂದಾಣಿಕೆ ಆಗುತ್ತದೆಯೇ ಎಂಬುದನ್ನು ಪರೀಕ್ಷಿಸಲು ಆಕೆಯನ್ನು ಕರೆದೊಯ್ದಿದ್ದೇವೆ’ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಕೆಂಪು ಕೋಟೆಯ ಮೆಟ್ರೊ ನಿಲ್ದಾಣದ ಪಾರ್ಕಿಂಗ್ ಪ್ರದೇಶದ ಬಳಿ ಸೊಮವಾರ ಸಂಭವಿಸಿದ ಸ್ಫೋಟದಲ್ಲಿ ಬಳಸಲಾದ ಹುಂಡೈ ಐ20 ಕಾರನ್ನು ಡಾ. ಉಮರ್ ನಬಿ ಎಂಬಾತ ಚಾಲನೆ ಮಾಡುತ್ತಿದ್ದನು ಎಂದು ಹೇಳಲಾಗಿದ್ದು, ಈ ವಿಧ್ವಂಸಕ ಕೃತ್ಯದಲ್ಲಿ ಕನಿಷ್ಠ 12 ಜನರು ಮೃತಪಟ್ಟಿದ್ದಾರೆ. ಆತ ಪುಲ್ವಾಮಾದ ಕೊಯಿಲ್ ಗ್ರಾಮದವನು ಎಂದೂ ಅವರು ತಿಳಿಸಿದ್ದಾರೆ.</p><p>ಶಂಕಿತನ ಇಬ್ಬರು ಸಹೋದರರೂ ತಾಯಿಯೊಂದಿಗೆ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸ್ಫೋಟ ಗೊಂಡ ಕಾರಿನ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.</p>.ದೆಹಲಿ ಸ್ಫೋಟ: ಕಾರು ಓಡಿಸುತ್ತಿದ್ದ ವೈದ್ಯ; ವೈಟ್ ಕಾಲರ್ ಭಯೋತ್ಪಾದನೆಯ ಶಂಕೆ.Red Fort Blast: ಕಾರು ಚಾಲನೆ ಮಾಡಿದ್ದ ಶಂಕಿತ ವ್ಯಕ್ತಿಯ ಸಿಸಿಟಿವಿ ದೃಶ್ಯ ಸೆರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಗರ: ನವದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಲಾಯಿಸುತ್ತಿದ್ದ ವ್ಯಕ್ತಿಯ ತಾಯಿಯನ್ನು ಡಿಎನ್ಎ ಪರೀಕ್ಷೆಗಾಗಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಿಂದ ಪೊಲೀಸರು ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>‘ಸ್ಫೋಟದ ಸ್ಥಳದಲ್ಲಿ ಪತ್ತೆಯಾದ ಶಂಕಿತನ ದೇಹದ ಭಾಗಗಳನ್ನು ಸಂಗ್ರಹಿಸಿದ್ದು, ಶಂಕಿತನ ಡಿಎನ್ಎಗೆ ಆತನ ತಾಯಿ ಎನ್ನಲಾದ ಮಹಿಳೆಯ ಡಿಎನ್ಎ ಹೊಂದಾಣಿಕೆ ಆಗುತ್ತದೆಯೇ ಎಂಬುದನ್ನು ಪರೀಕ್ಷಿಸಲು ಆಕೆಯನ್ನು ಕರೆದೊಯ್ದಿದ್ದೇವೆ’ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಕೆಂಪು ಕೋಟೆಯ ಮೆಟ್ರೊ ನಿಲ್ದಾಣದ ಪಾರ್ಕಿಂಗ್ ಪ್ರದೇಶದ ಬಳಿ ಸೊಮವಾರ ಸಂಭವಿಸಿದ ಸ್ಫೋಟದಲ್ಲಿ ಬಳಸಲಾದ ಹುಂಡೈ ಐ20 ಕಾರನ್ನು ಡಾ. ಉಮರ್ ನಬಿ ಎಂಬಾತ ಚಾಲನೆ ಮಾಡುತ್ತಿದ್ದನು ಎಂದು ಹೇಳಲಾಗಿದ್ದು, ಈ ವಿಧ್ವಂಸಕ ಕೃತ್ಯದಲ್ಲಿ ಕನಿಷ್ಠ 12 ಜನರು ಮೃತಪಟ್ಟಿದ್ದಾರೆ. ಆತ ಪುಲ್ವಾಮಾದ ಕೊಯಿಲ್ ಗ್ರಾಮದವನು ಎಂದೂ ಅವರು ತಿಳಿಸಿದ್ದಾರೆ.</p><p>ಶಂಕಿತನ ಇಬ್ಬರು ಸಹೋದರರೂ ತಾಯಿಯೊಂದಿಗೆ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸ್ಫೋಟ ಗೊಂಡ ಕಾರಿನ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.</p>.ದೆಹಲಿ ಸ್ಫೋಟ: ಕಾರು ಓಡಿಸುತ್ತಿದ್ದ ವೈದ್ಯ; ವೈಟ್ ಕಾಲರ್ ಭಯೋತ್ಪಾದನೆಯ ಶಂಕೆ.Red Fort Blast: ಕಾರು ಚಾಲನೆ ಮಾಡಿದ್ದ ಶಂಕಿತ ವ್ಯಕ್ತಿಯ ಸಿಸಿಟಿವಿ ದೃಶ್ಯ ಸೆರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>