<p><strong>ದೆಹಲಿ:</strong> 'ದೆಹಲಿ ಸ್ಫೋಟಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ' ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಇಂದು (ಮಂಗಳವಾರ) ಹೇಳಿದ್ದಾರೆ. </p><p>ದೆಹಲಿಯ ಕೆಂಪುಕೋಟೆ ಮೆಟ್ರೊ ನಿಲ್ದಾಣದ ಟ್ರಾಫಿಕ್ ಸಿಗ್ನಲ್ ಬಳಿ ಸೋಮವಾರ ಸಂಜೆ ಸಂಭವಿಸಿದ್ದ ಕಾರು ಸ್ಫೋಟದಲ್ಲಿ 12 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. </p><p>'ದೆಹಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳು ತ್ವರಿತ ಹಾಗೂ ಸಮಗ್ರ ತನಿಖೆ ನಡೆಸುತ್ತಿವೆ' ಎಂದು ರಾಜನಾಥ ಸಿಂಗ್ ಹೇಳಿದ್ದಾರೆ. </p><p>ಈ ಸ್ಫೋಟದ ಹಿಂದಿನ ಕಾರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟೇ ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ. </p><p>'ತನಿಖೆಯ ವಿವರಗಳನ್ನು ಬೇಗನೇ ಬಹಿರಂಗಪಡಿಸಲಾಗುವುದು. ಸ್ಫೋಟಕ್ಕೆ ಕಾರಣರಾದವರನ್ನು ನ್ಯಾಯಾಲಯದ ಕಟಕಟೆಗೆ ತರಲಾಗುವುದು. ಯಾವ ಕಾರಣಕ್ಕೂ ಬಿಡಲಾಗುವುದಿಲ್ಲ ಎಂದು ನಾನು ದೇಶದ ಜನತೆಗೆ ಭರವಸೆ ನೀಡಲು ಬಯಸುತ್ತೇನೆ' ಎಂದು ರಾಜನಾಥ ಹೇಳಿದ್ದಾರೆ. </p><p>ಈ ಸಂದರ್ಭದಲ್ಲಿ ಸ್ಫೋಟದಲ್ಲಿ ಮೃತಪಟ್ಟವರಿಗೆ ರಕ್ಷಣಾ ಸಚಿವರು ಸಂತಾಪ ಸೂಚಿಸಿದ್ದಾರೆ. 'ಈ ಕಠಿಣ ಸಮಯದಲ್ಲಿ ಮೃತರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ದೇವರು ದಯಪಾಲಿಸಲಿ' ಎಂದು ಹೇಳಿದ್ದಾರೆ. </p>.ದೆಹಲಿ– ಚಲಿಸುತ್ತಿದ್ದ ಕಾರಿನಲ್ಲಿ ಸ್ಫೋಟ: ಕೆಂಪುಕೋಟೆ ಬಳಿ ರಕ್ತದೋಕುಳಿ; 12 ಸಾವು.ಮಕ್ಕಳ ಸಾವಿಗೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ: ಆದಿತ್ಯನಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೆಹಲಿ:</strong> 'ದೆಹಲಿ ಸ್ಫೋಟಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ' ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಇಂದು (ಮಂಗಳವಾರ) ಹೇಳಿದ್ದಾರೆ. </p><p>ದೆಹಲಿಯ ಕೆಂಪುಕೋಟೆ ಮೆಟ್ರೊ ನಿಲ್ದಾಣದ ಟ್ರಾಫಿಕ್ ಸಿಗ್ನಲ್ ಬಳಿ ಸೋಮವಾರ ಸಂಜೆ ಸಂಭವಿಸಿದ್ದ ಕಾರು ಸ್ಫೋಟದಲ್ಲಿ 12 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. </p><p>'ದೆಹಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳು ತ್ವರಿತ ಹಾಗೂ ಸಮಗ್ರ ತನಿಖೆ ನಡೆಸುತ್ತಿವೆ' ಎಂದು ರಾಜನಾಥ ಸಿಂಗ್ ಹೇಳಿದ್ದಾರೆ. </p><p>ಈ ಸ್ಫೋಟದ ಹಿಂದಿನ ಕಾರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟೇ ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ. </p><p>'ತನಿಖೆಯ ವಿವರಗಳನ್ನು ಬೇಗನೇ ಬಹಿರಂಗಪಡಿಸಲಾಗುವುದು. ಸ್ಫೋಟಕ್ಕೆ ಕಾರಣರಾದವರನ್ನು ನ್ಯಾಯಾಲಯದ ಕಟಕಟೆಗೆ ತರಲಾಗುವುದು. ಯಾವ ಕಾರಣಕ್ಕೂ ಬಿಡಲಾಗುವುದಿಲ್ಲ ಎಂದು ನಾನು ದೇಶದ ಜನತೆಗೆ ಭರವಸೆ ನೀಡಲು ಬಯಸುತ್ತೇನೆ' ಎಂದು ರಾಜನಾಥ ಹೇಳಿದ್ದಾರೆ. </p><p>ಈ ಸಂದರ್ಭದಲ್ಲಿ ಸ್ಫೋಟದಲ್ಲಿ ಮೃತಪಟ್ಟವರಿಗೆ ರಕ್ಷಣಾ ಸಚಿವರು ಸಂತಾಪ ಸೂಚಿಸಿದ್ದಾರೆ. 'ಈ ಕಠಿಣ ಸಮಯದಲ್ಲಿ ಮೃತರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ದೇವರು ದಯಪಾಲಿಸಲಿ' ಎಂದು ಹೇಳಿದ್ದಾರೆ. </p>.ದೆಹಲಿ– ಚಲಿಸುತ್ತಿದ್ದ ಕಾರಿನಲ್ಲಿ ಸ್ಫೋಟ: ಕೆಂಪುಕೋಟೆ ಬಳಿ ರಕ್ತದೋಕುಳಿ; 12 ಸಾವು.ಮಕ್ಕಳ ಸಾವಿಗೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ: ಆದಿತ್ಯನಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>