<p><strong>ನವದೆಹಲಿ:</strong> ದೇಶವನ್ನೇ ಬೆಚ್ಚಿಬೀಳಿಸಿರುವ ದೆಹಲಿಯ ಕೆಂಪು ಕೋಟೆ ಬಳಿ ನಡೆದಿರುವ ಸ್ಫೋಟದಲ್ಲಿ 12 ಜನ ಮೃತಪಟ್ಟಿದ್ದು, ಕೆಲವರ ಗುರುತು ಪತ್ತೆಯಾಗಿದೆ.</p><p>ಉತ್ತರ ಪ್ರದೇಶ ಮೂಲದ 18 ವರ್ಷದ ನುಮಾನ್ ಅನ್ಸಾರಿ ತನ್ನ ಅಂಗಡಿಗೆ ಸೌಂದರ್ಯವರ್ಧಕಗಳನ್ನು ಖರೀದಿಸಲು ಕೆಂಪುಕೋಟೆ ಬಳಿ ಬಂದಿದ್ದರು. ಇದೇ ವೇಳೆ ಕಾರು ಸ್ಫೋಟಗೊಂಡಿದೆ. ಕುಟುಂಬವನ್ನು ಸಲಹುವ ಜವಾಬ್ದಾರಿ ಹೊತ್ತಿದ್ದ ಅನ್ಸಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>‘ಅನ್ಸಾರಿ ಜತೆ ಬಂದಿದ್ದ ಸ್ನೇಹಿತ ತೀವ್ರವಾಗಿ ಗಾಯಗೊಂಡಿದ್ದು, ಲೋಕ ನಾಯಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಅನ್ಸಾರಿ ಅವರ ಸಂಬಂಧಿ ಪಿಟಿಐಗೆ ತಿಳಿಸಿದ್ದಾರೆ. </p><p>ಸ್ಫೋಟದಲ್ಲಿ ಮೃತಪಟ್ಟ ಇತರರನ್ನು ಅಮ್ರೋಹಾ ಜಿಲ್ಲೆಯ 34 ವರ್ಷದ ಡಿಟಿಸಿ (ದೆಹಲಿ ಸಾರಿಗೆ ನಿಗಮ) ಕಂಡಕ್ಟರ್ ಅಶೋಕ್ ಕುಮಾರ್, 22 ವರ್ಷದ ಟ್ಯಾಕ್ಸಿ ಚಾಲಕ ಪಂಕಜ್ ಸಹಾನಿ ಎಂದು ಗುರುತಿಸಲಾಗಿದೆ.</p><p>ವರದಿ ಪ್ರಕಾರ, ಅಮ್ರೋಹಾ ಜಿಲ್ಲೆಯ ಲೋಕೇಶ್ ಅಗರ್ವಾಲ್ ಮತ್ತು ಅಶೋಕ್ ಅಗರ್ವಾಲ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.</p><p>ಇವರಲ್ಲದೆ, ಪ್ರಿಂಟಿಂಗ್ ಪ್ರೆಸ್ನಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ಮೂಲದ ದಿನೇಶ್ ಮಿಶ್ರಾ, ಮೀರತ್ ಮೂಲದ ಆಟೋ ರಿಕ್ಷಾ ಚಾಲಕ ಮೌಸಿನ್ ಎನ್ನುವವರೂ ಮೃತಪಟ್ಟಿದ್ದಾರೆ.</p>.ದೆಹಲಿ– ಚಲಿಸುತ್ತಿದ್ದ ಕಾರಿನಲ್ಲಿ ಸ್ಫೋಟ: ಕೆಂಪುಕೋಟೆ ಬಳಿ ರಕ್ತದೋಕುಳಿ; 12 ಸಾವು.<p>ಸದಾ ಜನದಟ್ಟಣೆಯಿಂದ ಕೂಡಿರುವ ಐತಿಹಾಸಿಕ ಕೆಂಪುಕೋಟೆಯ ಬಳಿ ಚಲಿಸುತ್ತಿದ್ದ ಹುಂಡೈ ಐ–20 ಕಾರಿನಲ್ಲಿ ಸೋಮವಾರ ಸಂಜೆ ಭಾರಿ ಸ್ಫೋಟ ಸಂಭವಿಸಿ 12 ಮಂದಿ ಮೃತಪಟ್ಟಿದ್ದಾರೆ. 24ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.</p><p>ಘಟನೆಯ ಬಗ್ಗೆ ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆ (ನಿಯಂತ್ರಣ) ಕಾಯ್ದೆ (ಯುಎಪಿಎ) ಹಾಗೂ ಸ್ಫೋಟಕ ಕಾಯ್ದೆಯಡಿ ಎಫ್ಐಆರ್ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ. </p><p>ಇನ್ನೊಂದೆಡೆ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ ಗೃಹ ಸಚಿವ ಅಮಿತ್ ಶಾ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿದ್ದಾರೆ.</p>.ದೆಹಲಿ ಸ್ಫೋಟ: ಚದುರಿಬಿದ್ದ ಮಾನವ ಅವಶೇಷ; ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿಗಳು.ದೆಹಲಿ ಸ್ಫೋಟ: ಕಾರು ಓಡಿಸುತ್ತಿದ್ದ ವೈದ್ಯ; ವೈಟ್ ಕಾಲರ್ ಭಯೋತ್ಪಾದನೆಯ ಶಂಕೆ.Delhi Blast | ಕೃತ್ಯದ ಆಳಕ್ಕಿಳಿದು ಶೋಧಿಸಲಿವೆ ತನಿಖಾ ಸಂಸ್ಥೆಗಳು: PM ಮೋದಿ.Delhi Red Fort blast: ಭೀಕರ ಸ್ಫೋಟದ ಚಿತ್ರಗಳು ಇಲ್ಲಿವೆ...<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶವನ್ನೇ ಬೆಚ್ಚಿಬೀಳಿಸಿರುವ ದೆಹಲಿಯ ಕೆಂಪು ಕೋಟೆ ಬಳಿ ನಡೆದಿರುವ ಸ್ಫೋಟದಲ್ಲಿ 12 ಜನ ಮೃತಪಟ್ಟಿದ್ದು, ಕೆಲವರ ಗುರುತು ಪತ್ತೆಯಾಗಿದೆ.</p><p>ಉತ್ತರ ಪ್ರದೇಶ ಮೂಲದ 18 ವರ್ಷದ ನುಮಾನ್ ಅನ್ಸಾರಿ ತನ್ನ ಅಂಗಡಿಗೆ ಸೌಂದರ್ಯವರ್ಧಕಗಳನ್ನು ಖರೀದಿಸಲು ಕೆಂಪುಕೋಟೆ ಬಳಿ ಬಂದಿದ್ದರು. ಇದೇ ವೇಳೆ ಕಾರು ಸ್ಫೋಟಗೊಂಡಿದೆ. ಕುಟುಂಬವನ್ನು ಸಲಹುವ ಜವಾಬ್ದಾರಿ ಹೊತ್ತಿದ್ದ ಅನ್ಸಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>‘ಅನ್ಸಾರಿ ಜತೆ ಬಂದಿದ್ದ ಸ್ನೇಹಿತ ತೀವ್ರವಾಗಿ ಗಾಯಗೊಂಡಿದ್ದು, ಲೋಕ ನಾಯಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಅನ್ಸಾರಿ ಅವರ ಸಂಬಂಧಿ ಪಿಟಿಐಗೆ ತಿಳಿಸಿದ್ದಾರೆ. </p><p>ಸ್ಫೋಟದಲ್ಲಿ ಮೃತಪಟ್ಟ ಇತರರನ್ನು ಅಮ್ರೋಹಾ ಜಿಲ್ಲೆಯ 34 ವರ್ಷದ ಡಿಟಿಸಿ (ದೆಹಲಿ ಸಾರಿಗೆ ನಿಗಮ) ಕಂಡಕ್ಟರ್ ಅಶೋಕ್ ಕುಮಾರ್, 22 ವರ್ಷದ ಟ್ಯಾಕ್ಸಿ ಚಾಲಕ ಪಂಕಜ್ ಸಹಾನಿ ಎಂದು ಗುರುತಿಸಲಾಗಿದೆ.</p><p>ವರದಿ ಪ್ರಕಾರ, ಅಮ್ರೋಹಾ ಜಿಲ್ಲೆಯ ಲೋಕೇಶ್ ಅಗರ್ವಾಲ್ ಮತ್ತು ಅಶೋಕ್ ಅಗರ್ವಾಲ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.</p><p>ಇವರಲ್ಲದೆ, ಪ್ರಿಂಟಿಂಗ್ ಪ್ರೆಸ್ನಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ಮೂಲದ ದಿನೇಶ್ ಮಿಶ್ರಾ, ಮೀರತ್ ಮೂಲದ ಆಟೋ ರಿಕ್ಷಾ ಚಾಲಕ ಮೌಸಿನ್ ಎನ್ನುವವರೂ ಮೃತಪಟ್ಟಿದ್ದಾರೆ.</p>.ದೆಹಲಿ– ಚಲಿಸುತ್ತಿದ್ದ ಕಾರಿನಲ್ಲಿ ಸ್ಫೋಟ: ಕೆಂಪುಕೋಟೆ ಬಳಿ ರಕ್ತದೋಕುಳಿ; 12 ಸಾವು.<p>ಸದಾ ಜನದಟ್ಟಣೆಯಿಂದ ಕೂಡಿರುವ ಐತಿಹಾಸಿಕ ಕೆಂಪುಕೋಟೆಯ ಬಳಿ ಚಲಿಸುತ್ತಿದ್ದ ಹುಂಡೈ ಐ–20 ಕಾರಿನಲ್ಲಿ ಸೋಮವಾರ ಸಂಜೆ ಭಾರಿ ಸ್ಫೋಟ ಸಂಭವಿಸಿ 12 ಮಂದಿ ಮೃತಪಟ್ಟಿದ್ದಾರೆ. 24ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.</p><p>ಘಟನೆಯ ಬಗ್ಗೆ ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆ (ನಿಯಂತ್ರಣ) ಕಾಯ್ದೆ (ಯುಎಪಿಎ) ಹಾಗೂ ಸ್ಫೋಟಕ ಕಾಯ್ದೆಯಡಿ ಎಫ್ಐಆರ್ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ. </p><p>ಇನ್ನೊಂದೆಡೆ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ ಗೃಹ ಸಚಿವ ಅಮಿತ್ ಶಾ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿದ್ದಾರೆ.</p>.ದೆಹಲಿ ಸ್ಫೋಟ: ಚದುರಿಬಿದ್ದ ಮಾನವ ಅವಶೇಷ; ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿಗಳು.ದೆಹಲಿ ಸ್ಫೋಟ: ಕಾರು ಓಡಿಸುತ್ತಿದ್ದ ವೈದ್ಯ; ವೈಟ್ ಕಾಲರ್ ಭಯೋತ್ಪಾದನೆಯ ಶಂಕೆ.Delhi Blast | ಕೃತ್ಯದ ಆಳಕ್ಕಿಳಿದು ಶೋಧಿಸಲಿವೆ ತನಿಖಾ ಸಂಸ್ಥೆಗಳು: PM ಮೋದಿ.Delhi Red Fort blast: ಭೀಕರ ಸ್ಫೋಟದ ಚಿತ್ರಗಳು ಇಲ್ಲಿವೆ...<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>