<p><strong>ಇಂದೋರ್(ಮಧ್ಯಪ್ರದೇಶ):</strong> ವಿಸ್ತಾರ ವಿಮಾನದಲ್ಲಿ ದೆಹಲಿಯತ್ತ ಹೊರಟಿದ್ದ ಪ್ರಯಾಣಿಕರೊಬ್ಬರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡು, ಮೂರ್ಛೆ ತಪ್ಪಿದ ಕಾರಣ, ವಿಮಾನವನ್ನು ತುರ್ತಾಗಿ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.</p>.<p>ಬೆಂಗಳೂರಿನಿಂದ ಹೊರಟ ವಿಸ್ತಾರ ಯುಕೆ–818 ವಿಮಾನದಲ್ಲಿದ್ದ ಮನೋಜ್ ಕುಮಾರ್ ಅಗರವಾಲ್ ಎಂಬುವವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡು, ಮೂರ್ಚೆ ಹೋದರು. ಹೀಗಾಗಿ ದೆಹಲಿಯತ್ತ ಹೋಗುತ್ತಿದ್ದ ವಿಮಾನವನ್ನು ಗುರುವಾರ ರಾತ್ರಿ 9.30ಕ್ಕೆ ತುರ್ತಾಗಿ ಇಂದೋರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು.</p>.<p>ನಂತರ ಅಗರವಾಲ್ ಅವರನ್ನು ಸಮೀಪದ ಬಂಥಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ವಿಮಾನ ನಿಲ್ದಾಣದ ಉಸ್ತುವಾರಿ ನಿರ್ದೇಶಕ ಪ್ರಮೋದ್ ಕುಮಾರ್ ಶರ್ಮಾ ತಿಳಿಸಿದರು.</p>.<p>‘ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಸಾಗುವ ಮಾರ್ಗದಲ್ಲಿ ಅಗರವಾಲ್ ಸಾವನ್ನಪ್ಪಿದರು. ಅವರ ಸ್ಥಿತಿಯನ್ನು ಗಮನಿಸಿದಾಗ, ಹೃದಯಾಘಾತಕ್ಕೆ ಒಳಗಾಗಿರಬಹುದು ಎಂಬುದಾಗಿ ಅನಿಸುತ್ತದೆ‘ ಎಂದು ಆಸ್ಪತ್ರೆಯ ನಿರ್ದೇಶಕ ಡಾ ಸುನಿಲ್ ಬಂಥಿಯಾ ಹೇಳಿದರು.</p>.<p>‘ಅಗರವಾಲ್ ದೆಹಲಿ ಮೂಲದವರು. ಮರಣೋತ್ತರ ಪರೀಕ್ಷೆಯ ನಂತರ ದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು' ಎಂದು ವಿಮಾನ ನಿಲ್ದಾಣದ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್(ಮಧ್ಯಪ್ರದೇಶ):</strong> ವಿಸ್ತಾರ ವಿಮಾನದಲ್ಲಿ ದೆಹಲಿಯತ್ತ ಹೊರಟಿದ್ದ ಪ್ರಯಾಣಿಕರೊಬ್ಬರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡು, ಮೂರ್ಛೆ ತಪ್ಪಿದ ಕಾರಣ, ವಿಮಾನವನ್ನು ತುರ್ತಾಗಿ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.</p>.<p>ಬೆಂಗಳೂರಿನಿಂದ ಹೊರಟ ವಿಸ್ತಾರ ಯುಕೆ–818 ವಿಮಾನದಲ್ಲಿದ್ದ ಮನೋಜ್ ಕುಮಾರ್ ಅಗರವಾಲ್ ಎಂಬುವವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡು, ಮೂರ್ಚೆ ಹೋದರು. ಹೀಗಾಗಿ ದೆಹಲಿಯತ್ತ ಹೋಗುತ್ತಿದ್ದ ವಿಮಾನವನ್ನು ಗುರುವಾರ ರಾತ್ರಿ 9.30ಕ್ಕೆ ತುರ್ತಾಗಿ ಇಂದೋರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು.</p>.<p>ನಂತರ ಅಗರವಾಲ್ ಅವರನ್ನು ಸಮೀಪದ ಬಂಥಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ವಿಮಾನ ನಿಲ್ದಾಣದ ಉಸ್ತುವಾರಿ ನಿರ್ದೇಶಕ ಪ್ರಮೋದ್ ಕುಮಾರ್ ಶರ್ಮಾ ತಿಳಿಸಿದರು.</p>.<p>‘ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಸಾಗುವ ಮಾರ್ಗದಲ್ಲಿ ಅಗರವಾಲ್ ಸಾವನ್ನಪ್ಪಿದರು. ಅವರ ಸ್ಥಿತಿಯನ್ನು ಗಮನಿಸಿದಾಗ, ಹೃದಯಾಘಾತಕ್ಕೆ ಒಳಗಾಗಿರಬಹುದು ಎಂಬುದಾಗಿ ಅನಿಸುತ್ತದೆ‘ ಎಂದು ಆಸ್ಪತ್ರೆಯ ನಿರ್ದೇಶಕ ಡಾ ಸುನಿಲ್ ಬಂಥಿಯಾ ಹೇಳಿದರು.</p>.<p>‘ಅಗರವಾಲ್ ದೆಹಲಿ ಮೂಲದವರು. ಮರಣೋತ್ತರ ಪರೀಕ್ಷೆಯ ನಂತರ ದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು' ಎಂದು ವಿಮಾನ ನಿಲ್ದಾಣದ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>