<p><strong>ನವದೆಹಲಿ: </strong>ಈಶಾನ್ಯ ದೆಹಲಿಯಲ್ಲಿ ನಡೆದಿರುವ ಹಿಂಸಾಚಾರಕ್ಕೆ ಸಂಬಂಧಿಸಿದವರು ಯಾರೇ ಇದ್ದರೂ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಎಎಪಿ ನಾಯಕರಾರ ಸಂಜಯ್ ಸಿಂಗ್ ಮತ್ತು ಗೋಪಾಲ ರೈ ಗುರುವಾರ ಹೇಳಿದ್ದಾರೆ.</p>.<p>ಇಂಟೆಲಿಜೆನ್ಸ್ ಬ್ಯೂರೋ ನೌಕರ ಅಂಕಿತ್ ಶರ್ಮಾ ಹತ್ಯೆಗೆ ಎಎಪಿ ಕೌನ್ಸಿಲರ್ ತಹೀರ್ ಹುಸೇನ್ ಕಾರಣವೆಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಎಎಪಿ ತನ್ನ ನಿಲುವು ಸ್ಪಷ್ಟಪಡಿಸಿದೆ.</p>.<p>26 ವರ್ಷದ ಅಂಕಿತ್ ಶರ್ಮಾ ಅವರ ಹತ್ಯೆಯ ಹಿಂದೆ ಹುಸೇನ್ ಮತ್ತು ಅವರ ಸಹಚರರ ಕೈವಾಡ ಇದೆ ಎಂದು ಅಂಕಿತ್ ಕುಟುಂಬ ಸದಸ್ಯರು ಆರೋಪಿಸಿದ್ದರು. ಈ ಆರೋಪವನ್ನು ಹುಸೇನ್ ತಳ್ಳಿಹಾಕಿದ್ದರು. </p>.<p>‘ಧರ್ಮ, ಜಾತಿಗಳನ್ನು ಲೆಕ್ಕಿಸದೇ ಪ್ರಾಮಾಣಿಕವಾಗಿ ವಿಚಾರಣೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಅದು ಎಎಪಿಯ ತಹೀರ್ ಹುಸೇನ್ ಆಗಿರಬಹುದು, ಬಿಜೆಪಿಯ ಕಪಿಲ್ ಮಿಶ್ರಾ ಆಗಿರಬಹುದು‘ ಎಂದು ಎಎಪಿ ನಾಯಕ ಗೋಪಾಲ ರೈ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಈಶಾನ್ಯ ದೆಹಲಿಯಲ್ಲಿ ನಡೆದಿರುವ ಹಿಂಸಾಚಾರಕ್ಕೆ ಸಂಬಂಧಿಸಿದವರು ಯಾರೇ ಇದ್ದರೂ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಎಎಪಿ ನಾಯಕರಾರ ಸಂಜಯ್ ಸಿಂಗ್ ಮತ್ತು ಗೋಪಾಲ ರೈ ಗುರುವಾರ ಹೇಳಿದ್ದಾರೆ.</p>.<p>ಇಂಟೆಲಿಜೆನ್ಸ್ ಬ್ಯೂರೋ ನೌಕರ ಅಂಕಿತ್ ಶರ್ಮಾ ಹತ್ಯೆಗೆ ಎಎಪಿ ಕೌನ್ಸಿಲರ್ ತಹೀರ್ ಹುಸೇನ್ ಕಾರಣವೆಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಎಎಪಿ ತನ್ನ ನಿಲುವು ಸ್ಪಷ್ಟಪಡಿಸಿದೆ.</p>.<p>26 ವರ್ಷದ ಅಂಕಿತ್ ಶರ್ಮಾ ಅವರ ಹತ್ಯೆಯ ಹಿಂದೆ ಹುಸೇನ್ ಮತ್ತು ಅವರ ಸಹಚರರ ಕೈವಾಡ ಇದೆ ಎಂದು ಅಂಕಿತ್ ಕುಟುಂಬ ಸದಸ್ಯರು ಆರೋಪಿಸಿದ್ದರು. ಈ ಆರೋಪವನ್ನು ಹುಸೇನ್ ತಳ್ಳಿಹಾಕಿದ್ದರು. </p>.<p>‘ಧರ್ಮ, ಜಾತಿಗಳನ್ನು ಲೆಕ್ಕಿಸದೇ ಪ್ರಾಮಾಣಿಕವಾಗಿ ವಿಚಾರಣೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಅದು ಎಎಪಿಯ ತಹೀರ್ ಹುಸೇನ್ ಆಗಿರಬಹುದು, ಬಿಜೆಪಿಯ ಕಪಿಲ್ ಮಿಶ್ರಾ ಆಗಿರಬಹುದು‘ ಎಂದು ಎಎಪಿ ನಾಯಕ ಗೋಪಾಲ ರೈ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>