<p><strong>ಶ್ರೀನಗರ</strong>: ರಾಜಧಾನಿ ದೆಹಲಿಯ ಕೆಂಪು ಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟ ಪ್ರಕರಣದ ಆರೋಪಿ, ಕಾರು ಚಲಾಯಿಸುತ್ತಿದ್ದ ಡಾ. ಉಮರ್ ನಬಿ ಅವರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿದ್ದ ಮನೆಯನ್ನು ಭದ್ರತಾ ಪಡೆಗಳು ಉರುಳಿಸಿವೆ. </p><p>ಸೋಮವಾರ ರಾತ್ರಿ ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟದಲ್ಲಿ 13 ಮಂದಿ ಋತಪಟ್ಟಿ ದ್ದು, ಹಲವರು ಗಾಯಗೊಂಡಿದ್ದರು.</p><p>ಸ್ಫೋಟಕಗಳಿಂದ ತುಂಬಿದ್ದ ಹುಂಡೈ ಐ20 ಕಾರನ್ನು ಉಮರ್ ಚಲಾಯಿಸುತ್ತಿದ್ದರು. ಸ್ಫೋಟದ ಸ್ಥಳದಿಂದ ಸಂಗ್ರಹಿಸಲಾದ ಡಿಎನ್ಎ ಮಾದರಿಗಳು ಡಾ. ಉಮರ್ ಅವರ ತಾಯಿಯ ಡಿಎನ್ಎ ಮಾದರಿಗಳೊಂದಿಗೆ ಹೊಂದಿಕೆಯಾದ ನಂತರ ಅವರ ಗುರುತು ದೃಢಪಟ್ಟಿತ್ತು.</p><p>ತಾವು ವಾಸವಿದ್ದ ಪ್ರದೇಶದಲ್ಲಿ ಶೈಕ್ಷಣಿಕ ಸಾಧನೆ ಮೂಲಕ ಹೆಸರುವಾಸಿಯಾಗಿದ್ದ ಉಮರ್, ಕಳೆದ ಎರಡು ವರ್ಷಗಳಿಂದ ತೀವ್ರಗಾಮಿಯಾಗಿ ಮಾರ್ಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ತೀವ್ರಗಾಮಿ ಸಂದೇಶ ಕಳುಹಿಸುವ ಗ್ರೂಪ್ಗಳನ್ನು ಸೇರಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ರಾಜಧಾನಿ ದೆಹಲಿಯ ಕೆಂಪು ಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟ ಪ್ರಕರಣದ ಆರೋಪಿ, ಕಾರು ಚಲಾಯಿಸುತ್ತಿದ್ದ ಡಾ. ಉಮರ್ ನಬಿ ಅವರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿದ್ದ ಮನೆಯನ್ನು ಭದ್ರತಾ ಪಡೆಗಳು ಉರುಳಿಸಿವೆ. </p><p>ಸೋಮವಾರ ರಾತ್ರಿ ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟದಲ್ಲಿ 13 ಮಂದಿ ಋತಪಟ್ಟಿ ದ್ದು, ಹಲವರು ಗಾಯಗೊಂಡಿದ್ದರು.</p><p>ಸ್ಫೋಟಕಗಳಿಂದ ತುಂಬಿದ್ದ ಹುಂಡೈ ಐ20 ಕಾರನ್ನು ಉಮರ್ ಚಲಾಯಿಸುತ್ತಿದ್ದರು. ಸ್ಫೋಟದ ಸ್ಥಳದಿಂದ ಸಂಗ್ರಹಿಸಲಾದ ಡಿಎನ್ಎ ಮಾದರಿಗಳು ಡಾ. ಉಮರ್ ಅವರ ತಾಯಿಯ ಡಿಎನ್ಎ ಮಾದರಿಗಳೊಂದಿಗೆ ಹೊಂದಿಕೆಯಾದ ನಂತರ ಅವರ ಗುರುತು ದೃಢಪಟ್ಟಿತ್ತು.</p><p>ತಾವು ವಾಸವಿದ್ದ ಪ್ರದೇಶದಲ್ಲಿ ಶೈಕ್ಷಣಿಕ ಸಾಧನೆ ಮೂಲಕ ಹೆಸರುವಾಸಿಯಾಗಿದ್ದ ಉಮರ್, ಕಳೆದ ಎರಡು ವರ್ಷಗಳಿಂದ ತೀವ್ರಗಾಮಿಯಾಗಿ ಮಾರ್ಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ತೀವ್ರಗಾಮಿ ಸಂದೇಶ ಕಳುಹಿಸುವ ಗ್ರೂಪ್ಗಳನ್ನು ಸೇರಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>