<p><strong>ಅಂಬಾಲ</strong>: ಪಂಜಾಬ್ನ ಪಟಿಯಾಲ ಜಿಲ್ಲೆಯ ಶಂಭು ರೈಲು ನಿಲ್ದಾಣದ ಬಳಿ ರೈತರು ಹಳಿಗಳ ಮೇಲೆ ಸತತ ನಾಲ್ಕನೇ ದಿನವೂ ಪ್ರತಿಭಟನೆ ಮುಂದುವರಿಸಿದ್ದಾರೆ. ಇದರಿಂದಾಗಿ ಅಂಬಾಲ–ಅಮೃತಸರ ಮಾರ್ಗದ 54 ರೈಲುಗಳ ಸಂಚಾರವನ್ನು ಶನಿವಾರ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಪಂಜಾಬ್–ಹರಿಯಾಣ ಗಡಿಯ ಶಂಭುವಿನಲ್ಲಿ ಸಾಗುವ ಅಂಬಾಲ–ಲೂಧಿಯಾನ–ಅಮೃತಸರ ಮಾರ್ಗದಲ್ಲಿ ಹಳಿಗಳ ಮೇಲೆ ರೈತರು ಬುಧವಾರ ಪ್ರತಿಭಟನೆ ಆರಂಭಿಸಿದ್ದರು. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಅವರ ಬಿಡುಗಡೆಗೆ ಒತ್ತಾಯಿಸಿ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ.</p><p>ರೈತರ ಪ್ರತಿಭಟನೆಯಿಂದಾಗಿ 54 ರೈಲುಗಳ ಸಂಚಾರವನ್ನು ಇಂದು (ಶನಿವಾರ) ಸ್ಥಗಿತಗೊಳಿಸಲಾಗಿದೆ. ಕಳೆದ ಮೂರು ದಿನಗಳಲ್ಲಿ ಸುಮಾರು 380 ರೈಲುಗಳ ಸಂಚಾರದ ಮೇಲೆ ಪ್ರತಿಭಟನೆಯ ಬಿಸಿ ತಟ್ಟಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.</p><p>'ಸಂಯುಕ್ತ ಕಿಸಾನ್ ಮೋರ್ಚಾ' (ಎಸ್ಕೆಎಂ) ಹಾಗೂ 'ಕಿಸಾನ್ ಮಜ್ದೂರ್ ಮೋರ್ಚಾ' (ಕೆಎಂಎಂ) ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.</p><p>ಬಂಧಿತರ ಬಿಡುಗಡೆಯಾಗುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ರೈತ ನಾಯಕ ಸರವಣ್ ಸಿಂಗ್ ಪಂಧೇರ್ ಸ್ಪಷ್ಟಪಡಿಸಿದ್ದಾರೆ.</p><p>ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಒದಗಿಸಲು ಕಾನೂನು ಖಾತ್ರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಡುವ ಸಲುವಾಗಿ 'ದೆಹಲಿ ಚಲೋ' ಪ್ರತಿಭಟನಾ ಮೆರವಣಿಗೆ ನಡೆಸಲು ಎಸ್ಕೆಎಂ ಹಾಗೂ ಕೆಎಂಎಂ ರೈತ ಸಂಘಟನೆಗಳು ಇತ್ತೀಚೆಗೆ ಕರೆ ನೀಡಿದ್ದವು.</p><p>ಅದರಂತೆ, ದೆಹಲಿಗೆ ಮೆರವಣಿಗೆ ಹೊರಟಿದ್ದ ರೈತ ಹೋರಾಟಗಾರರನ್ನು ಪಂಜಾಬ್, ಹರಿಯಾಣ ನಡುವಣ ಶಂಭು ಮತ್ತು ಖನೌರಿ ಗಡಿ ಕೇಂದ್ರದ ಬಳಿ ಭದ್ರತಾ ಪಡೆಗಳು ಫೆಬ್ರುವರಿ 13ರಂದು ತಡೆದಿವೆ. ಆಗಿನಿಂದಲೂ ರೈತರು ಅಲ್ಲಿಯೇ ಬೀಡುಬಿಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಬಾಲ</strong>: ಪಂಜಾಬ್ನ ಪಟಿಯಾಲ ಜಿಲ್ಲೆಯ ಶಂಭು ರೈಲು ನಿಲ್ದಾಣದ ಬಳಿ ರೈತರು ಹಳಿಗಳ ಮೇಲೆ ಸತತ ನಾಲ್ಕನೇ ದಿನವೂ ಪ್ರತಿಭಟನೆ ಮುಂದುವರಿಸಿದ್ದಾರೆ. ಇದರಿಂದಾಗಿ ಅಂಬಾಲ–ಅಮೃತಸರ ಮಾರ್ಗದ 54 ರೈಲುಗಳ ಸಂಚಾರವನ್ನು ಶನಿವಾರ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಪಂಜಾಬ್–ಹರಿಯಾಣ ಗಡಿಯ ಶಂಭುವಿನಲ್ಲಿ ಸಾಗುವ ಅಂಬಾಲ–ಲೂಧಿಯಾನ–ಅಮೃತಸರ ಮಾರ್ಗದಲ್ಲಿ ಹಳಿಗಳ ಮೇಲೆ ರೈತರು ಬುಧವಾರ ಪ್ರತಿಭಟನೆ ಆರಂಭಿಸಿದ್ದರು. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಅವರ ಬಿಡುಗಡೆಗೆ ಒತ್ತಾಯಿಸಿ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ.</p><p>ರೈತರ ಪ್ರತಿಭಟನೆಯಿಂದಾಗಿ 54 ರೈಲುಗಳ ಸಂಚಾರವನ್ನು ಇಂದು (ಶನಿವಾರ) ಸ್ಥಗಿತಗೊಳಿಸಲಾಗಿದೆ. ಕಳೆದ ಮೂರು ದಿನಗಳಲ್ಲಿ ಸುಮಾರು 380 ರೈಲುಗಳ ಸಂಚಾರದ ಮೇಲೆ ಪ್ರತಿಭಟನೆಯ ಬಿಸಿ ತಟ್ಟಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.</p><p>'ಸಂಯುಕ್ತ ಕಿಸಾನ್ ಮೋರ್ಚಾ' (ಎಸ್ಕೆಎಂ) ಹಾಗೂ 'ಕಿಸಾನ್ ಮಜ್ದೂರ್ ಮೋರ್ಚಾ' (ಕೆಎಂಎಂ) ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.</p><p>ಬಂಧಿತರ ಬಿಡುಗಡೆಯಾಗುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ರೈತ ನಾಯಕ ಸರವಣ್ ಸಿಂಗ್ ಪಂಧೇರ್ ಸ್ಪಷ್ಟಪಡಿಸಿದ್ದಾರೆ.</p><p>ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಒದಗಿಸಲು ಕಾನೂನು ಖಾತ್ರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಡುವ ಸಲುವಾಗಿ 'ದೆಹಲಿ ಚಲೋ' ಪ್ರತಿಭಟನಾ ಮೆರವಣಿಗೆ ನಡೆಸಲು ಎಸ್ಕೆಎಂ ಹಾಗೂ ಕೆಎಂಎಂ ರೈತ ಸಂಘಟನೆಗಳು ಇತ್ತೀಚೆಗೆ ಕರೆ ನೀಡಿದ್ದವು.</p><p>ಅದರಂತೆ, ದೆಹಲಿಗೆ ಮೆರವಣಿಗೆ ಹೊರಟಿದ್ದ ರೈತ ಹೋರಾಟಗಾರರನ್ನು ಪಂಜಾಬ್, ಹರಿಯಾಣ ನಡುವಣ ಶಂಭು ಮತ್ತು ಖನೌರಿ ಗಡಿ ಕೇಂದ್ರದ ಬಳಿ ಭದ್ರತಾ ಪಡೆಗಳು ಫೆಬ್ರುವರಿ 13ರಂದು ತಡೆದಿವೆ. ಆಗಿನಿಂದಲೂ ರೈತರು ಅಲ್ಲಿಯೇ ಬೀಡುಬಿಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>