ಮಂಗಳವಾರ 35 ರೈತ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ನಡುವೆ ಮಾತುಕತೆ ನಡೆದಿದ್ದು, ತೀರ್ಮಾನಕ್ಕೆ ಬರಲಾಗಿಲ್ಲ. ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರ ತಿರಸ್ಕರಿಸಿದೆ. ಮಾತುಕತೆ ನಿಟ್ಟಿನಲ್ಲಿ ರೈತ ಸಂಘಟನೆಗಳ ಪ್ರತಿನಿಧಿಗಳ ಸಣ್ಣ ಸಮಿತಿ ರಚಿಸಿ ಎಂದು ಸಚಿವರು ನೀಡಿದ ಸಲಹೆಯನ್ನು ರೈತ ಸಂಘಟನೆಗಳೂ ತಿರಸ್ಕರಿಸಿವೆ.