<p><strong>ನವದೆಹಲಿ</strong>: ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ದುರಂತದ ಬಗ್ಗೆ ಮರುಕ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಇಂತಹ ಅವಘಡಗಳ ತಡೆಗೆ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p><p>ಬಕ್ಸರ್ ಜಿಲ್ಲೆಯ ರಘುನಾಥ್ಪುರ ನಿಲ್ದಾಣದ ಬಳಿ ಆನಂದ್ ವಿಹಾರ್–ಕಾಮಾಕ್ಯ ನಾರ್ತ್ ಈಸ್ಟ್ ಎಕ್ಸ್ಪ್ರೆಸ್ ರೈಲಿನ ಬೋಗಿಗಳು ಬುಧವಾರ ರಾತ್ರಿ ಹಳಿ ತಪ್ಪಿವೆ. ಪರಿಣಾಮವಾಗಿ ರೈಲಿನಲ್ಲಿದ್ದ ಹಲವರು ಗಾಯಗೊಂಡು, ಕನಿಷ್ಠ ನಾಲ್ಕು ಮಂದಿ ಮೃತಪಟ್ಟಿದ್ದಾರೆ.</p><p>ಈ ಬಗ್ಗೆ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕೇಜ್ರಿವಾಲ್, 'ಬಿಹಾರದ ಬಕ್ಸರ್ನಲ್ಲಿ ರೈಲು ದುರಂತ ಸಂಭವಿಸಿರುವುದು ಅತ್ಯಂತ ದುಃಖಕರ. ಅವಘಡದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂದಿದ್ದಾರೆ.</p>.PHOTOS | Bihar Train Accident: ಹಳಿ ತಪ್ಪಿದ 23 ಬೋಗಿಗಳು.<p>'ಇಂತಹ ದುರಂತಗಳು ಮತ್ತೆಮತ್ತೆ ಘಟಿಸುತ್ತಿರುವುದು ಕಳವಳಕಾರಿ. ಇವು ಮರುಕಳಿಸದಂತೆ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕು' ಎಂದು ಆಗ್ರಹಿಸಿದ್ದಾರೆ.</p><p><strong>ಬಾಲೇಶ್ವರ ರೈಲು ದುರಂತ<br></strong>ಇದೇ ವರ್ಷ ಜೂನ್ 2ರಂದು ರಾತ್ರಿ 7 ಗಂಟೆ ಹೊತ್ತಿಗೆ ಒಡಿಶಾದ ಬಾಲೇಶ್ವರದ ಬಳಿ ಕೋರಮಂಡಲ್ ಎಕ್ಸ್ಪ್ರೆಸ್, ಬೆಂಗಳೂರು-ಹೌರಾ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ಸರಣಿ ಅಪಘಾತ ಸಂಭವಿಸಿತ್ತು.</p><p>ದುರಂತದಲ್ಲಿ 297 ಮಂದಿ ಸಾವಿಗೀಡಾಗಿದ್ದರು. ಈ ಪೈಕಿ ವಾರಸುದಾರರು ಪತ್ತೆಯಾಗದ, ಗುರುತು ಸಿಗದ 28 ಶವಗಳಿಗೆ ಭುವನೇಶ್ವರ ಮಹಾನಗರ ಪಾಲಿಕೆ ವತಿಯಿಂದ ನಿನ್ನೆಯಷ್ಟೇ (ಬುಧವಾರ, ಅಕ್ಟೋಬರ್ 11) ಅಂತ್ಯಕ್ರಿಯೆ ನೆರವೇರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ದುರಂತದ ಬಗ್ಗೆ ಮರುಕ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಇಂತಹ ಅವಘಡಗಳ ತಡೆಗೆ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p><p>ಬಕ್ಸರ್ ಜಿಲ್ಲೆಯ ರಘುನಾಥ್ಪುರ ನಿಲ್ದಾಣದ ಬಳಿ ಆನಂದ್ ವಿಹಾರ್–ಕಾಮಾಕ್ಯ ನಾರ್ತ್ ಈಸ್ಟ್ ಎಕ್ಸ್ಪ್ರೆಸ್ ರೈಲಿನ ಬೋಗಿಗಳು ಬುಧವಾರ ರಾತ್ರಿ ಹಳಿ ತಪ್ಪಿವೆ. ಪರಿಣಾಮವಾಗಿ ರೈಲಿನಲ್ಲಿದ್ದ ಹಲವರು ಗಾಯಗೊಂಡು, ಕನಿಷ್ಠ ನಾಲ್ಕು ಮಂದಿ ಮೃತಪಟ್ಟಿದ್ದಾರೆ.</p><p>ಈ ಬಗ್ಗೆ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕೇಜ್ರಿವಾಲ್, 'ಬಿಹಾರದ ಬಕ್ಸರ್ನಲ್ಲಿ ರೈಲು ದುರಂತ ಸಂಭವಿಸಿರುವುದು ಅತ್ಯಂತ ದುಃಖಕರ. ಅವಘಡದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂದಿದ್ದಾರೆ.</p>.PHOTOS | Bihar Train Accident: ಹಳಿ ತಪ್ಪಿದ 23 ಬೋಗಿಗಳು.<p>'ಇಂತಹ ದುರಂತಗಳು ಮತ್ತೆಮತ್ತೆ ಘಟಿಸುತ್ತಿರುವುದು ಕಳವಳಕಾರಿ. ಇವು ಮರುಕಳಿಸದಂತೆ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕು' ಎಂದು ಆಗ್ರಹಿಸಿದ್ದಾರೆ.</p><p><strong>ಬಾಲೇಶ್ವರ ರೈಲು ದುರಂತ<br></strong>ಇದೇ ವರ್ಷ ಜೂನ್ 2ರಂದು ರಾತ್ರಿ 7 ಗಂಟೆ ಹೊತ್ತಿಗೆ ಒಡಿಶಾದ ಬಾಲೇಶ್ವರದ ಬಳಿ ಕೋರಮಂಡಲ್ ಎಕ್ಸ್ಪ್ರೆಸ್, ಬೆಂಗಳೂರು-ಹೌರಾ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ಸರಣಿ ಅಪಘಾತ ಸಂಭವಿಸಿತ್ತು.</p><p>ದುರಂತದಲ್ಲಿ 297 ಮಂದಿ ಸಾವಿಗೀಡಾಗಿದ್ದರು. ಈ ಪೈಕಿ ವಾರಸುದಾರರು ಪತ್ತೆಯಾಗದ, ಗುರುತು ಸಿಗದ 28 ಶವಗಳಿಗೆ ಭುವನೇಶ್ವರ ಮಹಾನಗರ ಪಾಲಿಕೆ ವತಿಯಿಂದ ನಿನ್ನೆಯಷ್ಟೇ (ಬುಧವಾರ, ಅಕ್ಟೋಬರ್ 11) ಅಂತ್ಯಕ್ರಿಯೆ ನೆರವೇರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>