ತಮಗೆ ಜಾರಿ ನಿರ್ದೇಶನಾಲಯ ನೀಡಿದ ಸರಣಿ ನೋಟಿಸ್ ಪ್ರಶ್ನಿಸಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ವಿವರಣೆ ಬಯಸಿ ಕೋರ್ಟ್ ಇ.ಡಿಗೆ ನೋಟಿಸ್ ಜಾರಿ ಮಾಡಿದೆ.
ಕೇಜ್ರಿವಾಲ್ ಅವರನ್ನು ಇ.ಡಿ ಬಂಧಿಸುವ ಆತಂಕ ಇದ್ದು, ಒಂದು ವೇಳೆ ರಕ್ಷಣೆ ನೀಡಿದರೆ ವಿಚಾರಣೆಗೆ ಹಾಜರಾಗಲು ಸಿದ್ದವಿದ್ದಾರೆ ಎಂದು ಅವರ ಪರ ವಕೀಲರು ಬುಧವಾರ ನ್ಯಾಯಾಲಯದಲ್ಲಿ ನುಡಿದಿದ್ದರು.