‘ಚುನಾವಣೆಗೂ ಮುನ್ನ ಯಾಕೆ ನೋಟಿಸ್ ಕಳಿಸಲಾಗಿದೆ? ಚುನಾವಣಾ ಪ್ರಚಾರದಲ್ಲಿ ಭಾಗಿಯಾಗದಂತೆ ತಡೆಯುವ ಉದ್ದೇಶದಿಂದ ಕೇಜ್ರಿವಾಲ್ ಅವರಿಗೆ ನೋಟಿಸ್ ಕಳಿಸಲಾಗುತ್ತಿದೆ’ ಎಂದು ಪಕ್ಷ ಹೇಳಿದೆ.
ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಇಂದು (ಡಿ.3) ವಿಚಾರಣೆಗೆ ಹಾಜರಾಗಬೇಕು ಎಂದು ಇ.ಡಿ, ಕೇಜ್ರಿವಾಲ್ ಅವರಿಗೆ ನೋಟಿಸ್ ನೀಡಿತ್ತು.
ಇದೇ ಪ್ರಕರಣ ಸಂಬಂಧ ಕೇಜ್ರಿವಾಲ್ ಅವರಿಗೆ ಮೂರು ನೋಟಿಸ್ ನೀಡಲಾಗಿದ್ದು, ಒಮ್ಮೆಯೂ ಅವರು ವಿಚಾರಣೆಗೆ ಹಾಜರಾಗಿಲ್ಲ.