<p><strong>ನವದೆಹಲಿ</strong>: ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸುತ್ತಿರುವ ವಿಚಾರಣೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಹಾಜರಾಗುವುದಿಲ್ಲ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮೂಲಗಳು ತಿಳಿಸಿವೆ.</p><p>ಸದ್ಯ ಹಿಂಪಡೆಯಲಾಗಿರುವ ಅಬಕಾರಿ ನೀತಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಗರಣದ ವಿಚಾರಣೆ ಸಂಬಂಧ ಕೇಜ್ರಿವಾಲ್ ಅವರಿಗೆ ಬುಧವಾರ 5ನೇ ಸಮನ್ಸ್/ನೋಟಿಸ್ ನೀಡಿದ್ದ ಇ.ಡಿ ಅಧಿಕಾರಿಗಳು, ಇಂದು (ಫೆ.2ರಂದು) ವಿಚಾರಣೆಗೆ ಬರುವಂತೆ ಸೂಚಿಸಿದ್ದರು.</p><p>ಕೇಜ್ರಿವಾಲ್ ಅವರನ್ನು ಬಂಧಿಸುವ ಸಲುವಾಗಿ ಜಾರಿ ನಿರ್ದೇಶನಾಲಯವು ಮತ್ತೆ ಮತ್ತೆ ನೋಟಿಸ್ ನೀಡುತ್ತಿದೆ. ಅವರು ವಿಚಾರಣೆಗೆ ಹಾಜರಾಗುವುದಿಲ್ಲ. ತನಿಖಾ ಸಂಸ್ಥೆಯ ನೋಟಿಸ್ಗಳು 'ಕಾನೂನುಬಾಹಿರ'ವಾಗಿವೆ ಎಂದು ಎಎಪಿ ದೂರಿದೆ.</p><p>ಬಿಜೆಪಿಯು ಕೇಜ್ರಿವಾಲ್ ಅವರನ್ನು ಬಂಧಿಸಿ, ದೆಹಲಿ ಸರ್ಕಾರವನ್ನು ಉರುಳಿಸಲು ಬಯಸುತ್ತಿದೆ. ಹೀಗಾಗಲು ಎಎಪಿ ಬಿಡುವುದಿಲ್ಲ ಎಂದೂ ಹೇಳಿದೆ.</p><p>ಇ.ಡಿ. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಕೇಜ್ರಿವಾಲ್ ಅವರಿಗೆ 2023ರ ನವೆಂಬರ್ 2, ಡಿಸೆಂಬರ್ 21 ಹಾಗೂ ಈ ವರ್ಷ ಜನವರಿ 3 ಮತ್ತು 18ರಂದು ನೋಟಿಸ್ ನೀಡಲಾಗಿತ್ತು. ಎಲ್ಲ ನೋಟಿಸ್ಗಳು ಕಾನೂನುಬಾಹಿರವಾಗಿವೆ ಎಂದು ಆರೋಪಿಸಿರುವ ಅವರು, ಒಮ್ಮೆಯೂ ವಿಚಾರಣೆಗೆ ಹಾಜರಾಗಿಲ್ಲ.</p><p><strong>ಎಎಪಿ ಪ್ರತಿಭಟನೆಗೆ ಕೇಜ್ರಿವಾಲ್<br></strong>ಚಂಡೀಗಢ ನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿ ಬಿಜೆಪಿಯ ಪ್ರಧಾನ ಕಚೇರಿ ಎದುರು ಎಎಪಿ ಇಂದು (ಫೆ.2ರಂದು) ನಡೆಸುತ್ತಿರುವ ಪ್ರತಿಭಟನೆಯಲ್ಲಿ ಕೇಜ್ರಿವಾಲ್ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11ಕ್ಕೆ ಸಮಯ ನಿಗದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸುತ್ತಿರುವ ವಿಚಾರಣೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಹಾಜರಾಗುವುದಿಲ್ಲ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮೂಲಗಳು ತಿಳಿಸಿವೆ.</p><p>ಸದ್ಯ ಹಿಂಪಡೆಯಲಾಗಿರುವ ಅಬಕಾರಿ ನೀತಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಗರಣದ ವಿಚಾರಣೆ ಸಂಬಂಧ ಕೇಜ್ರಿವಾಲ್ ಅವರಿಗೆ ಬುಧವಾರ 5ನೇ ಸಮನ್ಸ್/ನೋಟಿಸ್ ನೀಡಿದ್ದ ಇ.ಡಿ ಅಧಿಕಾರಿಗಳು, ಇಂದು (ಫೆ.2ರಂದು) ವಿಚಾರಣೆಗೆ ಬರುವಂತೆ ಸೂಚಿಸಿದ್ದರು.</p><p>ಕೇಜ್ರಿವಾಲ್ ಅವರನ್ನು ಬಂಧಿಸುವ ಸಲುವಾಗಿ ಜಾರಿ ನಿರ್ದೇಶನಾಲಯವು ಮತ್ತೆ ಮತ್ತೆ ನೋಟಿಸ್ ನೀಡುತ್ತಿದೆ. ಅವರು ವಿಚಾರಣೆಗೆ ಹಾಜರಾಗುವುದಿಲ್ಲ. ತನಿಖಾ ಸಂಸ್ಥೆಯ ನೋಟಿಸ್ಗಳು 'ಕಾನೂನುಬಾಹಿರ'ವಾಗಿವೆ ಎಂದು ಎಎಪಿ ದೂರಿದೆ.</p><p>ಬಿಜೆಪಿಯು ಕೇಜ್ರಿವಾಲ್ ಅವರನ್ನು ಬಂಧಿಸಿ, ದೆಹಲಿ ಸರ್ಕಾರವನ್ನು ಉರುಳಿಸಲು ಬಯಸುತ್ತಿದೆ. ಹೀಗಾಗಲು ಎಎಪಿ ಬಿಡುವುದಿಲ್ಲ ಎಂದೂ ಹೇಳಿದೆ.</p><p>ಇ.ಡಿ. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಕೇಜ್ರಿವಾಲ್ ಅವರಿಗೆ 2023ರ ನವೆಂಬರ್ 2, ಡಿಸೆಂಬರ್ 21 ಹಾಗೂ ಈ ವರ್ಷ ಜನವರಿ 3 ಮತ್ತು 18ರಂದು ನೋಟಿಸ್ ನೀಡಲಾಗಿತ್ತು. ಎಲ್ಲ ನೋಟಿಸ್ಗಳು ಕಾನೂನುಬಾಹಿರವಾಗಿವೆ ಎಂದು ಆರೋಪಿಸಿರುವ ಅವರು, ಒಮ್ಮೆಯೂ ವಿಚಾರಣೆಗೆ ಹಾಜರಾಗಿಲ್ಲ.</p><p><strong>ಎಎಪಿ ಪ್ರತಿಭಟನೆಗೆ ಕೇಜ್ರಿವಾಲ್<br></strong>ಚಂಡೀಗಢ ನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿ ಬಿಜೆಪಿಯ ಪ್ರಧಾನ ಕಚೇರಿ ಎದುರು ಎಎಪಿ ಇಂದು (ಫೆ.2ರಂದು) ನಡೆಸುತ್ತಿರುವ ಪ್ರತಿಭಟನೆಯಲ್ಲಿ ಕೇಜ್ರಿವಾಲ್ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11ಕ್ಕೆ ಸಮಯ ನಿಗದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>