ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ಮುಖ್ಯ ವಕ್ತಾರ ಸೌರಭ್ ಭಾರಧ್ವಾಜ್, ‘ದೆಹಲಿಯ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳಲ್ಲಿ ಸುಗ್ರೀವಾಜ್ಞೆಯನ್ನು ಸುಟ್ಟು ಹಾಕುತ್ತೇವೆ. ಜುಲೈ 3 ರಂದು ದೆಹಲಿ ಮುಖ್ಯಮಂತ್ರಿ, ಎಲ್ಲಾ ಸಚಿವ ಸಂಪುಟದ ಸದಸ್ಯರು ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಈ ಕರಾಳ ಸುಗ್ರೀವಾಜ್ಞೆಯನ್ನು ಸುಟ್ಟು ಹಾಕಲಿದ್ದಾರೆ‘ ಎಂದು ಅವರು ಹೇಳಿದರು.
ಜುಲೈ 5 ರಂದು ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ, ಜುಲೈ 6 ರಿಂದ 13ರ ವರೆಗೆ ದೆಹಲಿಯ ಮೂಲೆ ಮೂಲೆಗಳಲ್ಲಿ ಈ ಸುಗ್ರಿವಾಜ್ಞೆ ಪ್ರತಿಯನ್ನು ಸುಟ್ಟುಹಾಕಲಿದ್ದೇವೆ ಎಂದು ಅವರು ಹೇಳಿದರು.
ಈ ಕರಾಳ ಸುಗ್ರೀವಾಜ್ಞೆ ಮೂಲಕ ಕೇಂದ್ರ ಸರ್ಕಾರ ದೆಹಲಿ ಮೇಲೆ ಅನಧಿಕೃತವಾಗಿ ನಿಯಂತ್ರಣ ತೆಗೆದುಕೊಳ್ಳಲು ಮುಂದಾಗಿದೆ ಎಂದು ಅವರು ಆರೋಪಿಸಿದರು.