<p><strong>ನವದೆಹಲಿ</strong>: ಖ್ಯಾತ ಪರಿಸರವಾದಿ, ಚಿಪ್ಕೊ ಚಳವಳಿಯ ನೇತಾರ ದಿವಂಗತ ಸುಂದರ್ಲಾಲ್ ಬಹುಗುಣ ಅವರಿಗೆ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ’ಭಾರತ ರತ್ನ’ ನೀಡಿ ಗೌರವಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.</p>.<p>ದೆಹಲಿಯ ವಿಧಾನಸಭೆಯಲ್ಲಿ ಆಯೋಜಿಸಿದ್ದ ಖ್ಯಾತ ಪರಿಸರವಾದಿ ಸುಂದರ್ಲಾಲ್ ಬಹುಗುಣ ಅವರಿಗೆ ಗೌರವ ನಮನ ಅರ್ಪಿಸುವ ಕಾರ್ಯಕ್ರಮದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಅರವಿಂದ ಕೇಜ್ರಿವಾಲ್, ಈ ಕುರಿತು ಪ್ರಧಾನಿಯವರಿಗೆ ಪತ್ರ ಬರೆದಿದ್ದಾರೆ.</p>.<p>’ಸುಂದರ್ಲಾಲ್ ಬಹುಗುಣ ಅವರಿಗೆ ’ಭಾರತ ರತ್ನ’ ಪ್ರಶಸ್ತಿ ನೀಡಿದರೆ, ಆ ಪ್ರಶಸ್ತಿ ಮೌಲ್ಯವೇ ಹೆಚ್ಚಾಗುತ್ತದೆ ಎಂದು ಭಾವಿಸಿದ್ದೇವೆ’ ಎಂದು ಕೇಜ್ರಿವಾಲ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>’75ನೇ ವರ್ಷದ ಸ್ವಾತಂತ್ರೋತ್ಸವದಂದು ನಾವು ಸ್ವಾತಂತ್ರ್ಯ ಹೋರಾಟಗಾರರನ್ನು ಹಾಗೂ ದೇಶಕ್ಕೆ ಕೊಡುಗೆ ನೀಡಿದ ಶ್ರೇಷ್ಠ ವ್ಯಕ್ತಿಗಳನ್ನು ಗೌರವಿಸುತ್ತೇವೆ. ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟ ಸುಂದರಲಾಲ್ ಬಹುಗುಣ ಅವರನ್ನು ಭಾರತ ರತ್ನ ಪುರಸ್ಕಾರದೊಂದಿಗೆ ಗೌರವಿಸಬೇಕೆಂದು ದೆಹಲಿ ಸರ್ಕಾರದ ಪರವಾಗಿ ನಾನು ವಿನಂತಿಸುತ್ತೇನೆ’ ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.</p>.<p>ಬಹುಗುಣ ಅವರು ಕಣಿವೆ ರಾಜ್ಯ ಉತ್ತರಾಖಂಡದ ಪರಿಸರ ಸಂರಕ್ಷಣೆಗಾಗಿ ತಮ್ಮ ಜೀವನವನ್ನೇ ಮೀಸಲಿಟ್ಟಿದ್ದಾರೆ. ವೃಕ್ಷ ರಕ್ಷಣೆಯ ’ಚಿಪ್ಕೊ ಚಳವಳಿ’ಯಿಂದ ಆರಂಭವಾದ ಅವರ ಪರಿಸರ ಸಂರಕ್ಷಣಾ ಅಭಿಯಾನ, ಬೇರೆ ಬೇರೆ ರಾಜ್ಯಗಳಿಗೂ ವಿಸ್ತರಿಸಿತು. ಕಳೆದ ಮೇ 21ರಂದು 94ನೇ ವಯಸ್ಸಿನಲ್ಲಿ ಬಹುಗುಣ ನಿಧನರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಖ್ಯಾತ ಪರಿಸರವಾದಿ, ಚಿಪ್ಕೊ ಚಳವಳಿಯ ನೇತಾರ ದಿವಂಗತ ಸುಂದರ್ಲಾಲ್ ಬಹುಗುಣ ಅವರಿಗೆ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ’ಭಾರತ ರತ್ನ’ ನೀಡಿ ಗೌರವಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.</p>.<p>ದೆಹಲಿಯ ವಿಧಾನಸಭೆಯಲ್ಲಿ ಆಯೋಜಿಸಿದ್ದ ಖ್ಯಾತ ಪರಿಸರವಾದಿ ಸುಂದರ್ಲಾಲ್ ಬಹುಗುಣ ಅವರಿಗೆ ಗೌರವ ನಮನ ಅರ್ಪಿಸುವ ಕಾರ್ಯಕ್ರಮದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಅರವಿಂದ ಕೇಜ್ರಿವಾಲ್, ಈ ಕುರಿತು ಪ್ರಧಾನಿಯವರಿಗೆ ಪತ್ರ ಬರೆದಿದ್ದಾರೆ.</p>.<p>’ಸುಂದರ್ಲಾಲ್ ಬಹುಗುಣ ಅವರಿಗೆ ’ಭಾರತ ರತ್ನ’ ಪ್ರಶಸ್ತಿ ನೀಡಿದರೆ, ಆ ಪ್ರಶಸ್ತಿ ಮೌಲ್ಯವೇ ಹೆಚ್ಚಾಗುತ್ತದೆ ಎಂದು ಭಾವಿಸಿದ್ದೇವೆ’ ಎಂದು ಕೇಜ್ರಿವಾಲ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>’75ನೇ ವರ್ಷದ ಸ್ವಾತಂತ್ರೋತ್ಸವದಂದು ನಾವು ಸ್ವಾತಂತ್ರ್ಯ ಹೋರಾಟಗಾರರನ್ನು ಹಾಗೂ ದೇಶಕ್ಕೆ ಕೊಡುಗೆ ನೀಡಿದ ಶ್ರೇಷ್ಠ ವ್ಯಕ್ತಿಗಳನ್ನು ಗೌರವಿಸುತ್ತೇವೆ. ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟ ಸುಂದರಲಾಲ್ ಬಹುಗುಣ ಅವರನ್ನು ಭಾರತ ರತ್ನ ಪುರಸ್ಕಾರದೊಂದಿಗೆ ಗೌರವಿಸಬೇಕೆಂದು ದೆಹಲಿ ಸರ್ಕಾರದ ಪರವಾಗಿ ನಾನು ವಿನಂತಿಸುತ್ತೇನೆ’ ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.</p>.<p>ಬಹುಗುಣ ಅವರು ಕಣಿವೆ ರಾಜ್ಯ ಉತ್ತರಾಖಂಡದ ಪರಿಸರ ಸಂರಕ್ಷಣೆಗಾಗಿ ತಮ್ಮ ಜೀವನವನ್ನೇ ಮೀಸಲಿಟ್ಟಿದ್ದಾರೆ. ವೃಕ್ಷ ರಕ್ಷಣೆಯ ’ಚಿಪ್ಕೊ ಚಳವಳಿ’ಯಿಂದ ಆರಂಭವಾದ ಅವರ ಪರಿಸರ ಸಂರಕ್ಷಣಾ ಅಭಿಯಾನ, ಬೇರೆ ಬೇರೆ ರಾಜ್ಯಗಳಿಗೂ ವಿಸ್ತರಿಸಿತು. ಕಳೆದ ಮೇ 21ರಂದು 94ನೇ ವಯಸ್ಸಿನಲ್ಲಿ ಬಹುಗುಣ ನಿಧನರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>