<p><strong>ನವದೆಹಲಿ:</strong> ಕಳ್ಳತನದ ಶಂಕೆಯಿಂದ ಇಲ್ಲಿನ ನರ್ಸಿಂಗ್ ಕಾಲೇಜೊಂದರ ಇಬ್ಬರು ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ವಾರ್ಡನ್ ಬಟ್ಟೆ ಬಿಚ್ಚಿಸಿ ಕಿರುಕುಳ ನೀಡಿದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಎಲ್ಎನ್ಜೆಪಿ ಆಸ್ಪತ್ರೆಯ ಅಹಲ್ಯಾಬಾಯಿ ಕಾಲೇಜ್ ಆಫ್ ನರ್ಸಿಂಗ್ನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ಮತ್ತು ವಿವಸ್ತ್ರಗೊಳಿಸಿದ ಘಟನೆಗೆ ಸಂಬಂಧಿಸಿ ದೂರು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು. </p><p>ಕಾಲೇಜು ಹಾಸ್ಟೆಲ್ನ ವಿದ್ಯಾರ್ಥಿನಿಯರು ಹಾಗೂ ವಾರ್ಡನ್ ಸೇರಿ ಮಂಡಿ ಹೌಸ್ ಪ್ರದೇಶದಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗಿದ್ದರು. ಆ ಸಂದರ್ಭ ವಾರ್ಡನ್ ಅವರ ಬ್ಯಾಗ್ನಿಂದ ₹ 8,000 ಕಳೆದು ಹೋಗಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಬಿಎಸ್ಸಿ ಅಂತಿಮ ವರ್ಷದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅನುಮಾನ ಬಂದಿದೆ. ಇತರ ವಿದ್ಯಾರ್ಥಿನಿಯರ ಸಹಾಯದಿಂದ ಆ ಇಬ್ಬರೂ ಶಂಕಿತ ವಿದ್ಯಾರ್ಥಿನಿಯರ ದಿರಿಸನ್ನು ವಾರ್ಡನ್ ಅವರು ಬಿಚ್ಚಿಸಿದ್ದಾರೆ. ಆದರೆ ಅವರ ಬಳಿ ಕಾಣೆಯಾದ ಹಣ ಪತ್ತೆಯಾಗಿಲ್ಲ ಎಂದು ಪೊಲೀಸರು ವಿವರಿಸಿದರು. </p><p>ಘಟನೆ ಬಳಿಕ ವಿದ್ಯಾರ್ಥಿನಿಯರ ಪೋಷಕರು ಹಾಸ್ಟೆಲ್ಗೆ ಆಗಮಿಸಿ, ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ. ಈ ಪ್ರಕರಣವು ಐಪಿ ಎಸ್ಟೇಟ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಳ್ಳತನದ ಶಂಕೆಯಿಂದ ಇಲ್ಲಿನ ನರ್ಸಿಂಗ್ ಕಾಲೇಜೊಂದರ ಇಬ್ಬರು ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ವಾರ್ಡನ್ ಬಟ್ಟೆ ಬಿಚ್ಚಿಸಿ ಕಿರುಕುಳ ನೀಡಿದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಎಲ್ಎನ್ಜೆಪಿ ಆಸ್ಪತ್ರೆಯ ಅಹಲ್ಯಾಬಾಯಿ ಕಾಲೇಜ್ ಆಫ್ ನರ್ಸಿಂಗ್ನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ಮತ್ತು ವಿವಸ್ತ್ರಗೊಳಿಸಿದ ಘಟನೆಗೆ ಸಂಬಂಧಿಸಿ ದೂರು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು. </p><p>ಕಾಲೇಜು ಹಾಸ್ಟೆಲ್ನ ವಿದ್ಯಾರ್ಥಿನಿಯರು ಹಾಗೂ ವಾರ್ಡನ್ ಸೇರಿ ಮಂಡಿ ಹೌಸ್ ಪ್ರದೇಶದಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗಿದ್ದರು. ಆ ಸಂದರ್ಭ ವಾರ್ಡನ್ ಅವರ ಬ್ಯಾಗ್ನಿಂದ ₹ 8,000 ಕಳೆದು ಹೋಗಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಬಿಎಸ್ಸಿ ಅಂತಿಮ ವರ್ಷದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅನುಮಾನ ಬಂದಿದೆ. ಇತರ ವಿದ್ಯಾರ್ಥಿನಿಯರ ಸಹಾಯದಿಂದ ಆ ಇಬ್ಬರೂ ಶಂಕಿತ ವಿದ್ಯಾರ್ಥಿನಿಯರ ದಿರಿಸನ್ನು ವಾರ್ಡನ್ ಅವರು ಬಿಚ್ಚಿಸಿದ್ದಾರೆ. ಆದರೆ ಅವರ ಬಳಿ ಕಾಣೆಯಾದ ಹಣ ಪತ್ತೆಯಾಗಿಲ್ಲ ಎಂದು ಪೊಲೀಸರು ವಿವರಿಸಿದರು. </p><p>ಘಟನೆ ಬಳಿಕ ವಿದ್ಯಾರ್ಥಿನಿಯರ ಪೋಷಕರು ಹಾಸ್ಟೆಲ್ಗೆ ಆಗಮಿಸಿ, ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ. ಈ ಪ್ರಕರಣವು ಐಪಿ ಎಸ್ಟೇಟ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>