ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕೀರ್ತಿನಗರದ ಪೀಠೋಪಕರಣ ಮಳಿಗೆಯ ಬಡಗಿಗಳು ತಯಾರಿಸಿದ ಮೇಜುಗಳನ್ನು, ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ಕರ್ಕರ್ಡೂಮಾದ ಪ್ರೇಮಲಾ ಬಾಯಿ ಚವಾಣ್ ಶಾಲೆಯ ಅಂಗವಿಕಲರ ಶಾಲೆಗೆ ಕೊಡುಗೆ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಅರವಿಂದರ್ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ದೀಪಕ್ ಬಬಾರಿಯಾ ಅವರು ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಮೇಜುಗಳನ್ನು ಹಸ್ತಾಂತರಿಸಿದರು.
ಕಾಂಗ್ರೆಸ್ನೊಂದಿಗೆ ಶಾಲೆಯು ಉತ್ತಮ ಬಾಂಧವ್ಯವನ್ನು ಹೊಂದಿದ್ದು, ಅದರ ಅವಶ್ಯಕತೆಗಳನ್ನು ಪೂರೈಸಲು ಕಾಂಗ್ರೆಸ್ ಎಲ್ಲಾ ರೀತಿಯ ಸಹಾಯ ಮತ್ತು ಬೆಂಬಲವನ್ನು ನೀಡುತ್ತದೆ. ಬಡವರು, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮತ್ತು ಅಸಹಾಯಕ ಜನರ ಕಲ್ಯಾಣದ ಬಗ್ಗೆ ರಾಹುಲ್ ಗಾಂಧಿಯವರು ಹೆಚ್ಚು ಕಾಳಜಿ ವಹಿಸುತ್ತಾರೆ ಎಂದು ಅರವಿಂದರ್ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅವರು ಸೆಪ್ಟೆಂಬರ್ 28ರಂದು ಕೀರ್ತಿನಗರ ಪೀಠೋಪಕರಣ ಮಾರುಕಟ್ಟೆಗೆ ಭೇಟಿ ನೀಡಿ, ಬಡಗಿಗಳೊಂದಿಗೆ ಪೀಠೋಪಕರಣ ತಯಾರಿಸಿದ್ದರು. ಅವರೊಂದಿಗೆ ಸಂವಾದ ನಡೆಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.